AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿವಿ9 ಇಂಪ್ಯಾಕ್ಟ್; ಐತಿಹಾಸಿಕ ಭೂತನಾಳ ಕೆರೆಗೆ ಹರಿದು ಬಂತು ನೀರು

ಕಳೆದ ಫೆಬ್ರವರಿಯಲ್ಲಿ ಟಿವಿ9 ಸುದ್ದಿವಾಹಿನಿಯಲ್ಲಿ ವಿಜಯಪುರ ನಗರದ 7 ವಾರ್ಡ್​ಗಳ ಕುಡಿಯುವ ನೀರಿನ ಸಮಸ್ಯೆ ಹಾಗೂ ಈ ವಾರ್ಡ್​ಗಳಿಗೆ ನೀರು ಪೂರೈಕೆ ಮಾಡುವ ಐತಿಹಾಸಿಕ ಭೂತನಾಳ ಕೆರೆ ಬತ್ತಿ ಹೋಗಿದ್ದರ ಕುರಿತು ವರದಿ ಬಿತ್ತರವಾಗಿತ್ತು. ನಮ್ಮ ವರದಿ ಬೆನ್ನಲ್ಲೇ ಇದೀಗ ಬತ್ತಿ ಹೋಗಿದ್ದ ಭೂತನಾಳ ಕೆರೆಗೆ ಕೃಷ್ಣೆ ಹರಿದು ಬಂದಿದ್ದಾಳೆ. 

ಟಿವಿ9 ಇಂಪ್ಯಾಕ್ಟ್; ಐತಿಹಾಸಿಕ ಭೂತನಾಳ ಕೆರೆಗೆ ಹರಿದು ಬಂತು ನೀರು
ಐತಿಹಾಸಿಕ ಭೂತನಾಳ ಕೆರೆಗೆ ಹರಿದು ಬಂತು ನೀರು
ಅಶೋಕ ಯಡಳ್ಳಿ, ವಿಜಯಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 23, 2024 | 4:46 PM

Share

ವಿಜಯಪುರ, ಫೆ.23: ಕಳೆದ ಫೆಬ್ರವರಿ 10 ರಂದು ವಿಜಯಪುರ(Vijayapura) ನಗರದ ಹೊರ ಭಾಗದಲ್ಲಿರುವ  ಭೂತನಾಳ ಕೆರೆಯು ಬರಗಾಲದ ಕಾರಣ ಬತ್ತಿ ಹೋಗಿದ್ದು ಹಾಗೂ ಈ ಕೆರೆಯಿಂದ ನಗರದ 7 ವಾರ್ಡ್​ಗಳಿಗೆ ನೀರು ಪೂರೈಕೆ ಆಗದೇ ಜನರಿಗೆ ತೀವ್ರ ಸಮಸ್ಯೆಯಾಗಿದ್ದರ ಕುರಿತು ಟಿವಿ9 ನಲ್ಲಿ ವರದಿ ಬಿತ್ತರ ಮಾಡಲಾಗಿತ್ತು. ನಮ್ಮ ವಾಹಿನಿಯ ವರದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ್, ನಗರ ಶಾಸಕ ಯತ್ನಾಳ, ಸಂಸದ ರಮೇಶ ಜಿಗಜಿಣಗಿ ಹಾಗೂ ಆಧಿಕಾರಿಗಳು ಗಮನ ಹರಿಸಿದರು. ಬಿರು ಬೇಸಿಗೆಯಲ್ಲಿ ಜನರಿಗೆ ಕುಡಿಯುವ ನೀರಿನ ಸಮಸ್ಯೆಯಾಗಬಾರದೆಂದು ಕ್ರಮ ತೆಗೆದುಕೊಳ್ಳಲಾಗಿದೆ.

ಬರಿದಾದ ಭೂತನಾಳ ಕೆರೆಗೆ ಕೃಷ್ಣಾನದಿಯಿಂದ ಮುಳವಾಡ ಏತ ನೀರಾವರಿಯ ತಿಡಗಂದಿ ವಯಾಡೆಕ್ಟ್​ನಿಂದ ನೀರನ್ನು ಭೂತನಾಳ ಕೆರೆಗೆ ಭರಿಸಲಾಗುತ್ತಿದೆ. ಭೂತನಾಳ ಕೆರೆಯ ಸಮೀಪದ ವಾಯಡೆಕ್ಟ್ ಕಾಲುವೆಯ ಮೇಲ್ಬಾಗದಲ್ಲಿ ಕೊರೆದು ಸೈಪನ್ ಹಾಗೂ ಪಂಪ್ ಸೆಟ್​ಗಳ ಮೂಲಕ ನೀರನ್ನು ಎತ್ತಿ ತಾತ್ಕಾಲಿಕ ಕಾಲುವೆ ನಿರ್ಮಾಣ ಮಾಡಿ ಅಲ್ಲಿಂದ ನೀರನ್ನು ಭೂತನಾಳ ಕೆರೆಗೆ ಹರಿಸಲಾಗುತ್ತಿದೆ. ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಆಧಿಕಾರಿಗಳು ಕೆರೆಗೆ ನೀರು ಭರಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. 20 ಎಂಎಲ್ಡಿ ನೀರು ಹರಿಸೋ ಉದ್ದೇಶವಿದ್ದು, ಸದ್ಯ ನೀರನ್ನು ಕೆರೆಗೆ ಹರಿಸಲಾಗುತ್ತಿದೆ. ಮುಂದಿನ ಮಾರ್ಚ 10 ರವರೆಗೂ ಕಾಲುವೆಗೆ ನೀರು ಹರಿಸಲಾಗುತ್ತಿದ್ದು, ಅಲ್ಲಯವರೆಗೂ ಭೂತನಾಳ ಕೆರೆಗೆ ನೀರು ಹರಿಸಲಾಗುತ್ತದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ಟಿವಿ9 ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ:ಹಾವೇರಿ: 900 ಎಕರೆಯ ಐತಿಹಾಸಿಕ ಕೆರೆ ಒತ್ತುವರಿ: ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ

‘ಬಿರು ಬೇಸಿಗೆಯಲ್ಲಿ ಭೂತನಾಳ ಕೆರೆಯ ನೀರು ಖಾಲಿಯಾಗಿದ್ದ ಕಾರಣ, ನಗರದ 2, 4, 5, 6, 8, 10, 12 ವಾರ್ಡ್​ಗಳಲ್ಲಿನ ಸುಮಾರು 2 ಲಕ್ಷದಷ್ಟು ಜನರಿಗೆ ನೀರಿನ ತೊಂದರೆಯಾಗಿತ್ತು. ಇನ್ನಿತರ 28 ವಾರ್ಡ್​ಗಳಿಗೆ ಜಿಲ್ಲೆಯ ಕೊಲ್ಹಾರ ಪಟ್ಟಣದ ಬಳಿಯ ಕೃಷ್ಣಾ ನದಿಯಿಂದ ನೀರು ಪೂರೈಕೆ ಮಾಡಲಾಗುತ್ತಿತ್ತು. ಬರಗಾಲದ ಕಾರಣ ಅಲ್ಲಿನ ಜಾಕ್ ವೆಲ್​ನಲ್ಲೂ ನೀರಿನ ಮಟ್ಟ ಕುಸಿದಿತ್ತು. 28 ವಾರ್ಡ್​ಗಳ ಜೊತೆಗೆ ಹೆಚ್ಚುವರಿ 7 ವಾರ್ಡ್​ಗಳಿಗೂ ಅಲ್ಲಿಂದಲೇ ನೀರು ಪೂರೈಕೆ ಮಾಡುವುದು ಅನಿವಾರ್ಯವಾಗಿ 10 ರಿಂದ 15 ದಿನಕ್ಕೊಮ್ಮೆ ನೀರು ಬಿಡುವಂತಾಗಿತ್ತು. ಸದ್ಯ ಈ ಸಮಸ್ಯೆಗೆ ಮುಕ್ತಿ ಸಿಗವಂತಾಗಿದೆ. ಕೆಲವೇ ದಿನಗಳಲ್ಲಿ ನಗರದ 7 ವಾರ್ಡ್ ಗಳಿಗೆ ಭೂತನಾಳ ಕೆರೆಯಿಂದಲೇ ನೀರು ಪೂರೈಕೆ ಮಾಡಲಾಗುತ್ತದೆ.

ನೀರು ಪೂರೈಕೆಗೆ ಸುಮಾರು 50 ಲಕ್ಷಕ್ಕೂ ಆಧಿಕ ಹಣ ಖರ್ಚು

ಈ ಯೋಜನೆಗಾಗಿ ಸುಮಾರು 50 ಲಕ್ಷಕ್ಕೂ ಆಧಿಕ ಹಣ ಖರ್ಚು ಮಾಡಲಾಗುತ್ತಿದೆ. ಇನ್ನು ವಾಯಾಡೆಕ್ಟ್​ನಿಂದ ನೀರು ಕೆರೆಗೆ ಹರಿದು ಹೋಗಲು ಸಂಸದ ರಮೇಶ್​ ಜಿಗಜಿಣಗಿ ತಮ್ಮ ಜಮೀನಿನಲ್ಲಿ ಅವಕಾಶ ಮಾಡಿಕೊಟ್ಟಿದ್ದಾರೆ. ಜಮೀನಿಗೆ ಹಾಕಿದ್ದ ತಡೆಗೋಡೆಯನ್ನು ತೆರವು ಮಾಡಿ ಜಮೀನಿನಲ್ಲಿ ತಾತ್ಕಾಲಿಕ ಕಾಲುವೆ ತೋಡಲು ಅವಕಾಶ ನೀಡಿದ್ದು ಸಹ ಬೇಗನೇ ನೀರು ಹರಿದು ಬರಲು ಸಾಧ್ಯವಾಗಿದೆ. 7 ವಾರ್ಡ್​ಗಳ ನೀರಿನ ಸಮಸ್ಯೆ ಕುರಿತು ಟಿವಿ9 ವರದಿ ಮಾಡಿದ್ದಕ್ಕೆ ಕೃಷ್ಣಾ ನದಿಯ ನೀರು ಮುಳವಾಡ ಏತ ನೀರಾವರಿ ಯೋಜನೆಯ ತಿಡಗುಂಡಿ ವಯಾಡೆಕ್ಟ್ ಮೂಲಕ ಭೂತನಾಳ ಕೆರೆಗೆ ನೀರು ಭರಿಸೋ ಕಾರ್ಯಕ್ಕೆ ಚಾಲನೆ ಸಿಕ್ಕಿದೆ ಎಂದು ನಮ್ಮ ಟಿವಿ9 ವಾಹಿನಿಗೆ ಸ್ಥಳಿಯರು ಕೃತಜ್ಞತೆಯನ್ನು ಅರ್ಪಿಸಿದ್ದಾರೆ.

ಸದ್ಯ ಬರಗಾಲದ ಕಾರಣ ಬತ್ತಿ ಹೋಗಿದ್ದ ಭೂತನಾಳ ಕೆರೆಗೆ ಕೃಷ್ಣೆ ಹರಿದು ಬರುತ್ತಿದ್ದಾಳೆ. ನೀರಿನ ಸಮಸ್ಯೆಗೆ ಈಡಾಗಿದ್ದ 7 ವಾರ್ಡ್​ಗಳ ಜನರು ಇದೀಗ ಸಂತಸಗೊಂಡಿದ್ದಾರೆ. ನೀರಿನ ಸಮಸ್ಯೆ ಬಗೆ ಹರಿಯಿತಲ್ಲ ಎಂದು ಖುಷಿ ಪಡುತ್ತಿದ್ದಾರೆ. ಆದರೆ, ಖುಷಿ ಪಡುವುದರ ಜೊತೆಗೆ ಬಿರು ಬೇಸಿಗೆ ಮುಗಿಯೋವರೆಗೆ ಜನರು ನೀರನ್ನು ಪೋಲು ಮಾಡದೇ ಸಮಯೋಜಿತವಾಗಿ ಮಿತವಾಗಿ ಬಳಕೆ ಮಾಡಬೇಕೆಂದು ಜನರಲ್ಲಿ ಟಿವಿ9 ಡಿಜಿಟಲ್​ನ ಕಳಕಳಿಯ ಮನವಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ