AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vasudhaiva Kutumbakam: ದತ್ತಾತ್ರೇಯ ಹೊಸಬಾಳೆ ಅವರಿಂದ ವಿಜಯಪುರದ ಮಹಾತ್ಮಾ ಗಾಂಧೀಜಿ ಕಾಲೋನಿಯಲ್ಲಿ ‘ಸಂವೇದನಾ’ ಸೇವಾ ಪ್ರಕಲ್ಪ ಉದ್ಘಾಟನೆ

Vasudhaiva Kutumbakam ಎನ್ನುವುದು ಭಾರತೀಯ ಸಂಸ್ಕೃತಿಯ ಮೂಲಾಧಾರ. ಈ ಉಕ್ತಿಯನ್ನು ಜೀವನದ ಉಸಿರಾಗಿಸಿಕೊಂಡು ಎಲ್ಲರೂ ಒಂದೇ ಕುಟುಂಬದ ಸದಸ್ಯರು ಎಂಬ ಭಾವನೆ ಬೆಳೆಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು- ಆರ್​ಎಸ್​ಎಸ್​​ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

Vasudhaiva Kutumbakam: ದತ್ತಾತ್ರೇಯ ಹೊಸಬಾಳೆ ಅವರಿಂದ ವಿಜಯಪುರದ ಮಹಾತ್ಮಾ ಗಾಂಧೀಜಿ ಕಾಲೋನಿಯಲ್ಲಿ 'ಸಂವೇದನಾ' ಸೇವಾ ಪ್ರಕಲ್ಪ ಉದ್ಘಾಟನೆ
ವಿಜಯಪುರದ ಮಹಾತ್ಮಾ ಗಾಂಧೀಜಿ ಕಾಲೋನಿಯಲ್ಲಿ ದತ್ತಾತ್ರೇಯ ಹೊಸಬಾಳೆ ಅವರಿಂದ 'ಸಂವೇದನಾ' ಸೇವಾ ಪ್ರಕಲ್ಪ ಉದ್ಘಾಟನೆ
Follow us
TV9 Web
| Updated By: ಸಾಧು ಶ್ರೀನಾಥ್​

Updated on: Dec 19, 2022 | 5:30 PM

ವಿಜಯಪುರ: ವಸುಧೈವ ಕುಟುಂಬಕಂ (Vasudhaiva Kutumbakam) ಎನ್ನುವುದು ಭಾರತೀಯ ಸಂಸ್ಕೃತಿಯ ಮೂಲಾಧಾರ. ಈ ಉಕ್ತಿಯನ್ನು ಜೀವನದ ಉಸಿರಾಗಿಸಿಕೊಂಡು ಎಲ್ಲರೂ ಒಂದೇ ಕುಟುಂಬದ ಸದಸ್ಯರು ಎಂಬ ಭಾವನೆ ಬೆಳೆಸಿಕೊಂಡು ಜೀವನದಲ್ಲಿ ಮುನ್ನಡೆಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ (RSS Sar karyawah Dattatreya Hosabale) ಕರೆ ನೀಡಿದರು.

ವಿಜಯಪುರದ (Vijayapura) ಮಹಾತ್ಮಾ ಗಾಂಧಿ ( Mahatma Gandhi) ಕಾಲೋನಿಯಲ್ಲಿ ಸೇವಾ ಭಾರತಿ ಹಾಗೂ ಲೋಕಹಿತ ಟ್ರಸ್ಟ್ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ‘ಸಂವೇದನಾ’ ಎನ್ನುವ ಸೇವಾ ಪ್ರಕಲ್ಪ – ಕುಷ್ಠರೋಗಿಗಳಿಗೆ ನಿತ್ಯ ಅನ್ನದಾಸೋಹ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿ‌ ಸಂದೇಶ ನೀಡಿದ ಅವರು, ಜಗತ್ತೇ ಒಂದು ಕುಟುಂಬ, ಇಡೀ ವಿಶ್ವವೇ ಒಂದು‌ ಮನೆ, ಇಡೀ ತ್ರಿಲೋಕವೇ ಒಂದು ದೇಶ ಎಂಬ ಉದಾತ್ತ ಭಾವನೆಯ ಪ್ರತಿರೂಪವೇ ನಮ್ಮ ಭಾರತೀಯ ಸಂಸ್ಕೃತಿ ಎಂದರು. ಎಲ್ಲರಿಗೂ ಕಷ್ಟ, ಸುಖಗಳು ಬರುವುದು ಸಾಮಾನ್ಯ, ಕಷ್ಟಗಳು ಬಂದಾಗ ಕಷ್ಟದಲ್ಲಿರುವವರು ನಮ್ಮ ಕುಟುಂಬ ಸದಸ್ಯರೇ ಎಂದು ತಿಳಿದು ಅವರ ಸಂಕಷ್ಟಗಳಿಗೆ ಸ್ಪಂದಿಸಬೇಕು, ಅಭಯ ನೀಡಬೇಕು ಎಂದು ಕರೆ ನೀಡಿದರು.

ಶಂಕರ ಎಂದರೆ ಶಿವ, ಶಿವ ಇಡೀ ಜಗತ್ತಿಗೆ ತಂದೆ, ಹೀಗಾಗಿ ಶಿವ ಭಕ್ತರೆಲ್ಲ ಬಂಧುಗಳೇ, ಇಡೀ ತ್ರಿಲೋಕವೇ ನಮ್ಮ ದೇಶ, ಇದು ಭಾರತೀಯರ ಕಲ್ಪನೆ ಎಂದರು. ಸೇವೆಯು ಜೀವನದ ಭಾಗವಾಗಬೇಕು, ಸೇವೆ ಎಂದರೆ ಒಂದು ಕರ್ತವ್ಯ, ರೋಗಿ ನಮ್ಮ ಮನೆಯಲ್ಲಿದ್ದರೆ ನಾವು ಆರೈಕೆ ಮಾಡುವುದಿಲ್ಲವೇ? ಹಾಗೆಯೇ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಪ್ರತಿಯೊಬ್ಬರನ್ನೂ ಕುಟುಂಬ ಸದಸ್ಯರೆಂದು ತಿಳಿದು ಆರೈಕೆ ಮಾಡಬೇಕು ಎಂದರು.

ಅನಾಥ ಮಕ್ಕಳ ಸೇವೆ ಪ್ರತಿಯೊಬ್ಬರ ಕರ್ತವ್ಯ, ಯಾವ ಅನಾಥ ಮಕ್ಕಳಿಗೂ ತಾವು ಅನಾಥರು ಎಂಬ ಭಾವನೆ ಬರದಂತೆ ಸಮಾಜ ಅವನನ್ನು ಅಕ್ಕರೆಯಿಂದ ಕಾಣಬೇಕು, ಅವರ ಜೀವನ ರೂಪಿಸಬೇಕು ಎಂದು ಕರೆ ನೀಡಿದರು. ನಾವೆಲ್ಲರೂ ಒಂದೇ ಎಂಬ ಭಾವನೆ ಹೃದಯದಿಂದ ಬರಬೇಕು, ಹೃದಯದಿಂದ ಸೇವೆ ಮಾಡಬೇಕು, ಒಬ್ಬರಿಗೊಬ್ಬರು ಸಹಾಯ, ಸಹಕಾರ, ಸಹಯೋಗ ನೀಡುತ್ತಾ ಜೀವನದಲ್ಲಿ ಮುನ್ನಡೆಯಬೇಕು. ಈ ಸೇವಾ ಕಾರ್ಯವನ್ನೇ ಸಂಘವು ತನ್ನ ಧ್ಯೇಯವಾಗಿಸಿಕೊಂಡಿದೆ ಎಂದರು. ಕೋವಿಡ್ ಕಾಲಘಟ್ಟದಲ್ಲಿ ಅನೇಕ ನೋವುಗಳನ್ನು‌ ನೋಡಿದ್ದೇವೆ, ಅದೇ ಸಮಯದಲ್ಲಿ ಲಕ್ಷಾಂತರ ಜನರ ನಿಸ್ವಾರ್ಥ, ಅಪರ್ಣಾ ಮನೋಭಾವದ ಸೇವೆಯನ್ನೂ ನಾವು ಗಮನಿಸಿದ್ದೇವೆ, ಈ ಸೇವೆ ನಮಗೆ ಸ್ಪೂರ್ತಿಯಾಗಲಿ, ಸೇವೆ ಮಾಡುತ್ತಾ ಮುನ್ನಡೆಯರಿ ಎಂದು ಸ್ಪೂರ್ತಿದಾಯಕ ಮಾತುಗಳನ್ನು ಹೇಳಿದರು.

ಪ್ರಾಸ್ತಾವಿಕವಾಗಿ ಕಾಲೋನಿಯ ಶಿವಾನಂದ ನೇಕಾರ ಅವರು ಈ ಕುಷ್ಠರೋಗ ಬಂಧುಗಳ ಕಾಲೀನಿಯಲ್ಲಿ ಅನ್ನ ನೀಡುವ ಸೇವಾ ಕಾರ್ಯ ಪ್ರಾರಂಭಿಸಿದ್ದಕ್ಕೆ ಸಂತಸ‌ ವ್ಯಕ್ತಪಡಿಸಿದರು. 1980 ದಶಕದಿಂದಲೇ ಈ ಕಾಲೋನಿಯ ಕುಷ್ಠರೋಗಿ ಬಂಧುಗಳ ಸಲುವಾಗಿ ದಿ. ವೆಂಕಟೇಶ ಗುರುನಾಯಕ ರವರು ನಮಗೆಲ್ಲಾ ಜೀವನ‌ ನೀಡಿದ ಪುಣ್ಯಾತ್ಮರು ಎಂದರು. ಕುಷ್ಠರೋಗಿ ಬಂಧುಗಳ ಜೊತೆಗೆ ಸರಕಾರ್ಯವಾಹ ದತ್ತಾತ್ರೆಯ ಹೊಸಬಾಳೆಯವರು ಸಹಪಂಕ್ತಿ ಭೋಜನ ಮಾಡಿದರು.

ಈ ಸಂದರ್ಭದಲ್ಲಿ ಕ್ಷೇತ್ರೀಯ ಸಂಘ ಚಾಲಕ ವಿ. ನಾಗರಾಜ, ಕ್ಷೇತ್ರಿಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ, ಪ್ರಾಂತ‌ ಕಾರ್ಯವಾಹ ರಾಘವೇಂದ್ರ ಕಾಗವಾಡ, ಪ್ರಾಂತ ಪ್ರಚಾರಕ ನರೇಂದ್ರ, ಲೋಕಹಿತ ಟ್ರಸ್ಟನ ಶ್ರೀಧರ ನಾಡಗೀರ,‌ ವಿಭಾಗ ಸಂಘಚಾಲಕ ಚಿದಂಬರ ಕರಮರಕರ, ಜಿಲ್ಲಾ ಸಂಘ ಚಾಲಕ‌ ಡಾ ಸತೀಶ ಜಿಗಜಿನ್ನಿ ಸೇವಾ ಭಾರತಿ ಟ್ರಸ್ಟ್ ಅಧ್ಯಕ್ಷ ಬಾಬುರಾವ, ಟ್ರಸ್ಟಿ ಚಂದ್ರಶೇಖರ ಗೋಕಾಕ, ರಮೇಶ,‌ ಪ್ರಾಂತ ಸಂಯೋಜಕ ಶಂಕರ ಗುಮಾಸ್ತೆ, ಉಪಸ್ಥಿತರಿದ್ದರು.

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್