ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಕೈ, ಎದೆ ಭಾಗಕ್ಕೆ ಪೆಟ್ಟು, ಪ್ರಾಣಾಪಾಯದಿಂದ ಪಾರು

ಹುನಗುಂದ ಶಾಸಕ ವಿಜಯಯಾನಂದ ಕಾಶಪ್ಪನವರ ಪತ್ನಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯಪುರ ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಕೈ, ಎದೆ ಭಾಗಕ್ಕೆ ಪೆಟ್ಟಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ವೀಣಾ ಕಾಶಪ್ಪನವರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಕೈ, ಎದೆ ಭಾಗಕ್ಕೆ ಪೆಟ್ಟು, ಪ್ರಾಣಾಪಾಯದಿಂದ ಪಾರು
ಕಾರು ಅಪಘಾತ
Edited By:

Updated on: Nov 20, 2023 | 5:15 PM

ವಿಜಯಪುರ, ನವೆಂಬರ್​​ 20: ಹುನಗುಂದ ಶಾಸಕ ವಿಜಯಯಾನಂದ ಕಾಶಪ್ಪನವರ ಪತ್ನಿ, ಕಾಂಗ್ರೆಸ್ ನಾಯಕಿ ವೀಣಾ ಕಾಶಪ್ಪನವರ (Veena Kashappanavar) ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವಂತಹ ಘಟನೆ ನಗರದ ಹೊರವಲಯದ ವಿಜಯಪುರ ಕಲಬುರಗಿ ರಾಷ್ಟ್ರೀಯ ಹೆದ್ದಾರಿ 52 ರಲ್ಲಿ ನಡೆದಿದೆ. ಕೈ, ಎದೆ ಭಾಗಕ್ಕೆ ಪೆಟ್ಟಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.

ವಿಜಯಪುರದಿಂದ ಸಿಂದಗಿ ಕಡೆಗೆ ಕಾರಿನಲ್ಲಿ ಹೊರಟಿದ್ದ ವೇಳೆ ಅವಘಡ ಸಂಭವಿಸಿದೆ. ವೀಣಾ ಕಾಶಪ್ಪನವರ ಕಾರಿಗೆ ಅಡ್ಡಲಾಗಿ ಬಂದ ಸ್ಕೂಟಿ ಡಿಕ್ಕಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಸರ್ವೆ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ದೊಡ್ಡಬಳ್ಳಾಪುರದ ಸರ್ವೆ ಇಲಾಖೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಸರ್ವೆ ಇಲಾಖೆ ವಿರುದ್ದ ಹಲವರ ದೂರು ಹಿನ್ನೆಲೆ ಏಕಕಾಲಕ್ಕೆ ದಾಳಿ ನಡೆಸಿ ಅಧಿಕಾರಿಗಳಿಂದ ಪರಿಶೀಲನೆ ಮಾಡಲಾಗುತ್ತಿದೆ. ಖುದ್ದು ಫೀಲ್ಡಿಗಿಳಿದಿರುವ ಲೋಕಾಯುಕ್ತ ಬಿಎಸ್ ಪಾಟೀಲ್​, ಡಿಸಿ ಕಛೇರಿಯ ಕಟ್ಟಡದಲ್ಲೇ ಇರುವ ಭೂ ದಾಖಲೆಗಳ ನಿರ್ದೇಶಕರ ಕಛೇರಿಯಲ್ಲಿ ಪರಿಶೀಲನೆ ಮಾಡಿದ್ದು, 50 ಸಾವಿರಕ್ಕೂ ಹೆಚ್ಚು ನಗದು, ಕೆಲ ದಾಖಲೆಗಳು ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ಮದ್ವೆ ಮುಂಚೆಯೇ ವರನ ಮನೆಯಲ್ಲಿ ಮಧು ಆತ್ಮಹತ್ಯೆ: ಐಶ್ವರ್ಯ ಸಾವಿಗೆ ಜಾತಿಯೇ ಕಾರಣವಾಯ್ತಾ?

ಆನೇಕಲ್​​ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೂ ಲೋಕಾಯುಕ್ತ ಟೀಂ ದಾಳಿ ಮಾಡಿದೆ. ಮಧ್ಯಾಹ್ನ ದಿಢೀರ್ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕಡತಗಳನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಅಧಿಕಾರಿಗಳನ್ನ ಕೂರಿಸಿಕೊಂಡು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಸರ್ವೆ ಇಲಾಖೆ ಕಚೇರಿಯಲ್ಲಿ ನಗದು ಸಮೇತ ಅಧಿಕಾರಿಗಳು ಸಿಕ್ಕಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಿಡ್ನಾಪರ್ಸ್​​ಗೆ ಸಾಥ್​​​​ ನೀಡಿದ್ದ ಪ್ರೋಬೇಶನರಿ ಪಿಎಸ್ಐ ಅರೆಸ್ಟ್​

ಎಸ್ಪಿ ವಿವೇಕಾನಂದ್ ತುಳಸಿಗೇರಿ, ಡಿವೈಎಸ್ಪಿ ಮಲ್ಲಿಕಾರ್ಜುನ್ ಸಿಎಸ್, ಇನ್ಸ್‌ಪೆಕ್ಟರ್ ಮಂಜುನಾಥ್ ಹೂಗಾರ್ ಸೇರಿದಂತೆ ಒಟ್ಟು ಹನ್ನೆರಡು ಮಂದಿ ಅಧಿಕಾರಿಗಳ ತಂಡದಿಂದ ದಾಳಿ ಮಾಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Mon, 20 November 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us