ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್: ಸತತ 3 ಬಾರಿ ಅಮಾನತ್ತಾಗಿ ಹ್ಯಾಟ್ರಿಕ್ ಸಾಧನೆ

ವಿಜಯಪುರ ಡಿಡಿಪಿಐ ಎನ್‌.ಎಚ್.ನಾಗೂರು ಮತ್ತೆ ಸಸ್ಪೆಂಡ್(suspended) ಆಗಿದ್ದು, ಈ ಮೂಲಕ ಸತತ ಮೂರು ಬಾರಿ ಅಮಾನತಾಗಿದ್ದಾರೆ. ಈ ಹಿಂದೆ 2024 ಜನವರಿ 30 ರಂದು EDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಸಸ್ಪೆಂಡ್ ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಅಮಾನತಾಗಿದ್ದಾರೆ.

ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್: ಸತತ 3 ಬಾರಿ ಅಮಾನತ್ತಾಗಿ ಹ್ಯಾಟ್ರಿಕ್ ಸಾಧನೆ
ವಿಜಯಪುರ ಡಿಡಿಪಿಐ ಮತ್ತೆ ಸಸ್ಪೆಂಡ್
Edited By: ಕಿರಣ್ ಹನುಮಂತ್​ ಮಾದಾರ್

Updated on: Oct 15, 2024 | 11:05 PM

ವಿಜಯಪುರ, ಅ.15: ಕರ್ತವ್ಯಲೋಪ ಹಿನ್ನೆಲೆ ವಿಜಯಪುರ ಡಿಡಿಪಿಐ ಎನ್‌.ಎಚ್.ನಾಗೂರು ಮತ್ತೆ ಸಸ್ಪೆಂಡ್(suspended) ಆಗಿದ್ದು, ಈ ಮೂಲಕ ಸತತ ಮೂರು ಬಾರಿ ಅಮಾನತಾಗಿದ್ದಾರೆ. ವಿಜಯಪುರ(Vijayapura)ಜಿಲ್ಲೆಯಲ್ಲಿ 2024-25ರಲ್ಲಿ ಹೊಸ ಶಾಲೆಯ ನೊಂದಣಿ ಪ್ರಕ್ರಿಯೆಯಲ್ಲಿ ನಿಯಮಬಾಹಿರ ಅನುಮೋದನೆ ಮಾಡಿರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.

ಮೊದಲ ಬಾರಿ ಅಮಾನತು

2024 ಜನವರಿ 30 ರಂದು EDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿತ್ತು. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಇದನ್ನೂ ಓದಿ:ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು

ಎರಡನೇ ಬಾರಿ ಅಮಾನತು

ಇದಾದ ಬಳಿಕ ಅಂದರೆ 2024 ಎಪ್ರಿಲ್​ 16 ರಂದು ಎಸ್​ಎಸ್​ಎಲ್​ಸಿ ಪರೀಕ್ಷೆ ವೇಳೆ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ಮಾಡಿಲ್ಲ, ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಜನ ಜಂಗುಳಿ ನಿಯಂತ್ರಿಸುವಲ್ಲಿ ವಿಫಲಾರಾಗಿದ್ದಾರೆ. ಕೆಲ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾರ್ಥಿಗಳನ್ನು ತಪಾಸಣೆ ಮಾಡದೇ ಪರೀಕ್ಷಾ ಕೇಂದ್ರದೊಳಗೆ ಬಿಡಲಾಗಿದೆ ಎಂಬ ಕರ್ತವ್ಯ ಲೋಪದ ಆರೋಪದ ಹಿನ್ನಲೆಯಲ್ಲಿ ಅಮಾನತು ಮಾಡಲಾಗಿತ್ತು. ಇದೀಗ ಮತ್ತೊಮ್ಮೆ ಡಿಡಿಪಿಐ ಎನ್‌.ಎಚ್.ನಾಗೂರು ಅವರನ್ನು ಅಮಾನತುಗೊಳಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us