AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು

IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು
ಪ್ರಾತಿನಿಧಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 30, 2024 | 7:49 PM

Share

ವಿಜಯಪುರ, ಜನವರಿ 30: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು (suspended) ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಅಮಾನತು ಮಾಡಲಾಗಿದೆ.

ಹಣ ದುರ್ಬಳಕೆ: ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಅಮಾನತು 

ಮಂಡ್ಯ: ಪಶು ಇಲಾಖೆಯಲ್ಲಿ 2018-19ನೇ ಸಾಲಿನ ಎಸ್​ಸಿಪಿ ಹಾಗೂ ಟಿಎಸ್​ಪಿ ಯೋಜನೆಯಲ್ಲಿ ಅವ್ಯವಹಾರ ನಡೆಸಿ, ಹಣ ದುರ್ಬಳಕೆ ಮಾಡಿಕೊಂಡು, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದ ಅಧಿಕಾರಿಯನ್ನ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಲಾಗಿದೆ.

ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸರ್ಜರಿ, 33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಮದ್ದೂರು ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಬಿ ಪ್ರವೀಣ್ ಕುಮಾರ್ ಅಮಾನತು ಆದ ಅಧಿಕಾರಿ. ಈ ಹಿಂದೆ ಪಾಂಡವಪುರದಲ್ಲಿ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಆಕ್ರಮ ಎಸೆಗಿದ್ದರು. ಈ ಸಂಬಂಧ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯಲ್ಲಿ ಸಹ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.

ಕಾಮಗಾರಿ ಮಾಡದೇ ಹಣ ದುರುಪಯೋಗ ಆರೋಪ: ಇಂಜನೀಯರ್ ವಜಾ

ಕೊಪ್ಪಳ: ಕೆಆರ್​ಐಡಿಎಲ್​ ಕಾರ್ಯಪಾಲಕ ಇಂಜನೀಯರ್ ಝರಣಪ್ಪ ಚಿಂಚೋಳಿಕರ್​ರನ್ನು ಕೆಆರ್​ಐಡಿ ಎಲ್ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೆಆರ್​ಐಡಿಎಲ್​ ವ್ಯವಸ್ಥಾಪಕ ನಿರ್ದಶಕ ಬಸವರಾಜ್, ತಕ್ಷಣದಿಂದಲೇ ಝರಣಪ್ಪ ಚಿಂಚೋಳಿಕರ್​ನ್ನು ವಜಾಗೊಳಿಸಿ ಆದೇಶಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

2016-17 ರಲ್ಲಿ ಸುವರ್ಣ ಗ್ರಾಮ ಯೋಜನೆಯಲ್ಲಿ ಕಾಮಗಾರಿ ಮಾಡದೇ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಝರಣಪ್ಪ ಚಿಂಚೋಳಿಕರ್ ಮೇಲಿತ್ತು. ಝರಣಪ್ಪ ಚಿಂಚೋಳಿಕರ್​ರಿಂದ ದುರುಪಯೋಗ ಮಾಡಿಕೊಂಡಿರು ಒಂದು ಕೋಟಿ 55 ಲಕ್ಷ 44 ಸಾವಿರ 897 ರೂಪಾಯಿ ಹಣವನ್ನು ಕೂಡ ವಸೂಲಿ ಮಾಡಬೇಕು. ಕೂಡಲೇ ಝರಣಪ್ಪ ಅವರು ಸಂಸ್ಥೆಯ ಅಕೌಂಟ್​ಗೆ ಹಣ ಜಮೆ ಮಾಡಬೇಕು ಅಂತ ಆದೇಶಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ