AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು

IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು
ಪ್ರಾತಿನಿಧಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Jan 30, 2024 | 7:49 PM

Share

ವಿಜಯಪುರ, ಜನವರಿ 30: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು (suspended) ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಅಮಾನತು ಮಾಡಲಾಗಿದೆ.

ಹಣ ದುರ್ಬಳಕೆ: ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಅಮಾನತು 

ಮಂಡ್ಯ: ಪಶು ಇಲಾಖೆಯಲ್ಲಿ 2018-19ನೇ ಸಾಲಿನ ಎಸ್​ಸಿಪಿ ಹಾಗೂ ಟಿಎಸ್​ಪಿ ಯೋಜನೆಯಲ್ಲಿ ಅವ್ಯವಹಾರ ನಡೆಸಿ, ಹಣ ದುರ್ಬಳಕೆ ಮಾಡಿಕೊಂಡು, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದ ಅಧಿಕಾರಿಯನ್ನ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಲಾಗಿದೆ.

ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸರ್ಜರಿ, 33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಮದ್ದೂರು ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಬಿ ಪ್ರವೀಣ್ ಕುಮಾರ್ ಅಮಾನತು ಆದ ಅಧಿಕಾರಿ. ಈ ಹಿಂದೆ ಪಾಂಡವಪುರದಲ್ಲಿ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಆಕ್ರಮ ಎಸೆಗಿದ್ದರು. ಈ ಸಂಬಂಧ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯಲ್ಲಿ ಸಹ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.

ಕಾಮಗಾರಿ ಮಾಡದೇ ಹಣ ದುರುಪಯೋಗ ಆರೋಪ: ಇಂಜನೀಯರ್ ವಜಾ

ಕೊಪ್ಪಳ: ಕೆಆರ್​ಐಡಿಎಲ್​ ಕಾರ್ಯಪಾಲಕ ಇಂಜನೀಯರ್ ಝರಣಪ್ಪ ಚಿಂಚೋಳಿಕರ್​ರನ್ನು ಕೆಆರ್​ಐಡಿ ಎಲ್ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೆಆರ್​ಐಡಿಎಲ್​ ವ್ಯವಸ್ಥಾಪಕ ನಿರ್ದಶಕ ಬಸವರಾಜ್, ತಕ್ಷಣದಿಂದಲೇ ಝರಣಪ್ಪ ಚಿಂಚೋಳಿಕರ್​ನ್ನು ವಜಾಗೊಳಿಸಿ ಆದೇಶಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

2016-17 ರಲ್ಲಿ ಸುವರ್ಣ ಗ್ರಾಮ ಯೋಜನೆಯಲ್ಲಿ ಕಾಮಗಾರಿ ಮಾಡದೇ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಝರಣಪ್ಪ ಚಿಂಚೋಳಿಕರ್ ಮೇಲಿತ್ತು. ಝರಣಪ್ಪ ಚಿಂಚೋಳಿಕರ್​ರಿಂದ ದುರುಪಯೋಗ ಮಾಡಿಕೊಂಡಿರು ಒಂದು ಕೋಟಿ 55 ಲಕ್ಷ 44 ಸಾವಿರ 897 ರೂಪಾಯಿ ಹಣವನ್ನು ಕೂಡ ವಸೂಲಿ ಮಾಡಬೇಕು. ಕೂಡಲೇ ಝರಣಪ್ಪ ಅವರು ಸಂಸ್ಥೆಯ ಅಕೌಂಟ್​ಗೆ ಹಣ ಜಮೆ ಮಾಡಬೇಕು ಅಂತ ಆದೇಶಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?