ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು

IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಕರ್ತವ್ಯ ನಿರ್ಲಕ್ಷ್ಯ ಆರೋಪ: ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರ ಅಮಾನತು
ಪ್ರಾತಿನಿಧಿಕ ಚಿತ್ರ
Edited By:

Updated on: Jan 30, 2024 | 7:49 PM

ವಿಜಯಪುರ, ಜನವರಿ 30: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪ ಹಿನ್ನೆಲೆ ಡಿಡಿಪಿಐ ಹಾಗೂ ಇಬ್ಬರು ಹಿರಿಯ ಉಪನ್ಯಾಸಕರನ್ನು ಅಮಾನತು (suspended) ಮಾಡಲಾಗಿದೆ. ಡಿಡಿಪಿಐ ಎನ್.ಹೆಚ್​.ನಾಗೂರ ಹಾಗೂ ಡಯಟ್​ನ ಹಿರಿಯ ಉಪನ್ಯಾಸಕರಾದ ಎಸ್.ಎ.ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅವರನ್ನು ವಿಚಾರಣೆ ಕಾಯ್ದಿರಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 2009-10 ಹಾಗೂ 2011-12ರಲ್ಲಿ ಅನುದಾನ ದುರುಪಯೋಗ ಆರೋಪ ಮಾಡಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಿದ್ದಾರೆ. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನರಿಂದ ಅಮಾನತು ಮಾಡಲಾಗಿದೆ.

ಹಣ ದುರ್ಬಳಕೆ: ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಅಮಾನತು 

ಮಂಡ್ಯ: ಪಶು ಇಲಾಖೆಯಲ್ಲಿ 2018-19ನೇ ಸಾಲಿನ ಎಸ್​ಸಿಪಿ ಹಾಗೂ ಟಿಎಸ್​ಪಿ ಯೋಜನೆಯಲ್ಲಿ ಅವ್ಯವಹಾರ ನಡೆಸಿ, ಹಣ ದುರ್ಬಳಕೆ ಮಾಡಿಕೊಂಡು, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದ ಅಧಿಕಾರಿಯನ್ನ ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯ ಅಧೀನ ಕಾರ್ಯದರ್ಶಿ ಸೇವೆಯಿಂದ ಅಮಾನತು ಮಾಡಿ ಆದೇಶ ಮಾಡಲಾಗಿದೆ.

ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸರ್ಜರಿ, 33 ಡಿವೈಎಸ್ಪಿ ಬೆನ್ನಲ್ಲೇ 218 ಪಿಎಸ್‌ಐಗಳ ವರ್ಗಾವಣೆ

ಮದ್ದೂರು ಪಶುಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಬಿ.ಬಿ ಪ್ರವೀಣ್ ಕುಮಾರ್ ಅಮಾನತು ಆದ ಅಧಿಕಾರಿ. ಈ ಹಿಂದೆ ಪಾಂಡವಪುರದಲ್ಲಿ ಪಶು ಆಸ್ಪತ್ರೆಯಲ್ಲಿ ಸಹಾಯಕ ನಿರ್ದೇಶಕರಾಗಿದ್ದ ವೇಳೆ ಆಕ್ರಮ ಎಸೆಗಿದ್ದರು. ಈ ಸಂಬಂಧ ತನಿಖೆ ನಡೆಸಿ ಸರ್ಕಾರಕ್ಕೆ ವರದಿಯಲ್ಲಿ ಸಹ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತು ಮಾಡಲಾಗಿದೆ.

ಕಾಮಗಾರಿ ಮಾಡದೇ ಹಣ ದುರುಪಯೋಗ ಆರೋಪ: ಇಂಜನೀಯರ್ ವಜಾ

ಕೊಪ್ಪಳ: ಕೆಆರ್​ಐಡಿಎಲ್​ ಕಾರ್ಯಪಾಲಕ ಇಂಜನೀಯರ್ ಝರಣಪ್ಪ ಚಿಂಚೋಳಿಕರ್​ರನ್ನು ಕೆಆರ್​ಐಡಿ ಎಲ್ ಸೇವೆಯಿಂದ ವಜಾಗೊಳಿಸಲಾಗಿದೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೆಆರ್​ಐಡಿಎಲ್​ ವ್ಯವಸ್ಥಾಪಕ ನಿರ್ದಶಕ ಬಸವರಾಜ್, ತಕ್ಷಣದಿಂದಲೇ ಝರಣಪ್ಪ ಚಿಂಚೋಳಿಕರ್​ನ್ನು ವಜಾಗೊಳಿಸಿ ಆದೇಶಿಸಿದ್ದರು.

ಇದನ್ನೂ ಓದಿ: ಬೆಂಗಳೂರು ಜಯದೇವ ನಿರ್ದೇಶಕ ಮಂಜುನಾಥ್ ಅಧಿಕಾರವಧಿ ಅಂತ್ಯ, ಹೊಸ ನಿರ್ದೇಶಕರು ಯಾರು?

2016-17 ರಲ್ಲಿ ಸುವರ್ಣ ಗ್ರಾಮ ಯೋಜನೆಯಲ್ಲಿ ಕಾಮಗಾರಿ ಮಾಡದೇ ಹಣ ದುರುಪಯೋಗ ಮಾಡಿಕೊಂಡಿರುವ ಆರೋಪ ಝರಣಪ್ಪ ಚಿಂಚೋಳಿಕರ್ ಮೇಲಿತ್ತು. ಝರಣಪ್ಪ ಚಿಂಚೋಳಿಕರ್​ರಿಂದ ದುರುಪಯೋಗ ಮಾಡಿಕೊಂಡಿರು ಒಂದು ಕೋಟಿ 55 ಲಕ್ಷ 44 ಸಾವಿರ 897 ರೂಪಾಯಿ ಹಣವನ್ನು ಕೂಡ ವಸೂಲಿ ಮಾಡಬೇಕು. ಕೂಡಲೇ ಝರಣಪ್ಪ ಅವರು ಸಂಸ್ಥೆಯ ಅಕೌಂಟ್​ಗೆ ಹಣ ಜಮೆ ಮಾಡಬೇಕು ಅಂತ ಆದೇಶಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us