AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಅಮಾನತ್ ಕೋ ಆಪರೇಟಿವ್ ಸೊಸೈಟಿ ದೋಖಾ, 30 ಕೋಟಿ ಠೇವಣಿ ಗುಳುಂ

ಗ್ರಾಹಕರ ಡಿಪಾಸಿಟ್ ಹಣ ನೀಡದೇ ಸತಾಯಿಸುತ್ತಿರೋ ಸಹಕಾರಿ ಬ್ಯಾಂಕ್.... ವಿಜಯಪುರ ನಗರದ ಆದಿಲ್ ಅಮಾನತ್ ಕೋ ಆಪ್ ಕ್ರೆಡಿಟ್​​ ಸೊಸೈಟಿಯಿಂದ ಸಮಸ್ಯೆ. ಲಕ್ಷಾಂತರ ಹಣ ಡಿಪಾಸಿಟ್ ಇಟ್ಟವರಿಗೆ ಹಣ ವಾಪಸ್ ನೀಡದ ಬ್ಯಾಂಕ್. ಕಳೆದ ಎರಡು ವರ್ಷಗಳಿಂದ ಮೆಚ್ಯೂರಿಟಿ ಆಗಿರೋ ಹಣ ಚಾಲ್ತಿ ಖಾತೆಯ ಹಣ ನೀಡದ ಸಹಕಾರಿ ಬ್ಯಾಂಕ್.

ವಿಜಯಪುರ ಅಮಾನತ್ ಕೋ ಆಪರೇಟಿವ್ ಸೊಸೈಟಿ ದೋಖಾ, 30 ಕೋಟಿ ಠೇವಣಿ ಗುಳುಂ
ವಿಜಯಪುರ ಅಮಾನತ್ ಕೋ ಆಪರೇಟಿವ್ ಸೊಸೈಟಿಯಿಂದ 30 ಕೋಟಿ ದೋಖಾ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Feb 01, 2024 | 3:55 PM

Share

ಹಣಕಾಸಿನ ವಿಚಾರದಲ್ಲಿ ಕೊಟ್ಟವ ಕೋಡಂಗಿ ಇಸ್ಕೊಂಡವಾ ಈರಭದ್ರ ಎಂಬ ಮಾತು ಪ್ರಚಲಿತದಲ್ಲಿದೆ. ಇದೇ ಮಾತು ವಿಜಯಪುರದಲ್ಲಿನ ಸಹಕಾರಿ ಬ್ಯಾಂಕ್ ವೊಂದಕ್ಕೆ ಅನ್ವಯವಾಗುತ್ತಿದೆ. ಸಹಕಾರಿ ಬ್ಯಾಂಕ್ ವೊಂದರಲ್ಲಿ ಹಣ ಇಟ್ಟವರು ಕೋಡಂಗಿ, ಬ್ಯಾಂಕ್ ನರವು ಈರಭದ್ರ ಎಂಬಂತಾಗಿದೆ. ನಗರದಲ್ಲಿನ ಸಹಕಾರಿ ಬ್ಯಾಂಕ್ ವೊಂದರೆ ಕಥೆಯಿದು. ಹೆಚ್ಚಿನ ಬಡ್ಡಿ ಹಣ ನೀಡುವ ಆಮಿಷವೊಡ್ಡಿ ಸಾಕಷ್ಟು ಹಣ ಡಿಪಾಸಿಟ್ ಮಾಡಿಕೊಂಡು ಇದೀಗಾ ಗ್ರಾಹಕರಿಗೆ ಹಣ ನೀಡದೇ ಸತಾಯಿಸುತ್ತಿದ್ದಾರೆ. ಕಷ್ಟದ ಕಾಲಕ್ಕೆ ಹಣ ಸಿಗುತ್ತದೆ ಎಂದು ಕಷ್ಟಪಟ್ಟು ಗಳಿಸಿದ ಹಣವನ್ನು ಇಟ್ಟವರು ಇದೀಗಾ ತಮ್ಮದೇ ಹಣ ವಾಪಸ್ ಪಡೆಯಲು ಕಷ್ಟಪಡುವಂತಾಗಿದೆ. ಈ ಕುರಿತ ಡಿಟೇಲ್ಸ್ ಇಲ್ಲಿದೆ ನೋಡಿ.

ಇತ್ತೀಚಿನ ದಿನಗಳಲ್ಲಿ ಹಣಕಾಸಿನ ಮೋಸ ವಂಚನೆಗಳು ಬಹಳವಾಗುತ್ತಿವೆ. ಇನ್ನು ವಿವಿಧ ಸಹಕಾರಿ ಬ್ಯಾಂಕ್ ಗಳು, ಸಂಘ ಸಂಸ್ಥೆಗಳ ಹೆಸರಿನಲ್ಲೂ ಹಣಕಾಸಿನ ವಿಚಾರದಲ್ಲಿ ಮಹಾ ಮೋಸವಾಗುತ್ತಿದೆ. ಆಧಿಕ ಬಡ್ಡಿ ಹಣ ನೀಡೋದಾಗಿ ಹಣ ತೊಡಗಿಸಿಕೊಂಡು ವಾಪಸ್ ಹಣ ನೀಡದೇ ಮೋಸ ಮಾಡುತ್ತಾರೆ. ಇದರ ಸಾಲಿಗೆ ವಿಜಯಪುರ ನಗರದ ಆದಿಲ್ ಅಮಾನತ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಸೇರಿದೆ.

ಇಲ್ಲಿ ಸಾವಿರಾರು ಗ್ರಾಹಕರು ತಾವು ಕಷ್ಟಪಟ್ಟು ದುಡಿದ ಹಣವನ್ನು ಡಿಪಾಸಿಟ್ ಇಟ್ಟಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳಿಗಿಂತ ಹೆಚ್ಚಿನ ಬಡ್ಡಿ ಸಿಗುತ್ತದೆ ಎಂಬ ಆಸೆಯಿಂದ ಹಣವನ್ನು ಡಿಪಾಸಿಟ್ ಇಟ್ಟಿದ್ದಾರೆ. ಇದೀಗಾ ಆದಿಲ್ ಅಮಾನತ್ ಸಹಕಾರಿ ಬ್ಯಾಂಕ್ ನ ಚೇರ್ಮನ್ ಹಾರುನ್ ರಶೀದ್ ಮಾಶ್ಯಾಳಕರ ಹಾಗೂ ಆಡಳಿತ ಮಂಡಳಿ ಗ್ರಾಹಕರಿಗೆ ಹಣ ವಾಪಸ್ ನೀಡುತ್ತಿಲ್ಲವಂತೆ.

ಕಳೆದ ಎರಡು ವರ್ಷಗಳಿಂದ ಡಿಪಾಸಿಟ್ ಹಣವಿಟ್ಟವರು, ಚಾಲ್ತಿ ಖಾತೆಯಲ್ಲಿ ಹಣವಿಟ್ಟವರು ಹಣಕ್ಕಾಗಿ ಪರದಾಡುತ್ತಿದ್ದಾರೆ. ಇದಕ್ಕೆ ಕಾರಣ ಸಹಕಾರಿ ಬ್ಯಾಂಕ್ ನ ಚೇರ್ಮನ್ ಹಾರುನ್ ರಶೀದ್ ಮಾಶ್ಯಾಳಕರ ಹಾಗೂ ಆಡಳಿತ ಮಂಡಳಿಯೇ ಕಾರಣವೆಂದು ಗ್ರಾಹಕರು ಆರೋಪ ಮಾಡಿದ್ದಾರೆ. ಚೇರ್ಮನ್ ಹಾರುನ್ ರಶೀದ್ ಮಾಶ್ಯಾಳಕರ ಹಾಗೂ ಇತರೆ ನಿರ್ದೇಶಕರು ಬ್ಯಾಂಕ್ ಕಚೇರಿಯಲ್ಲಿ ಸಿಗಲ್ಲ. ಮನೆಗೆ ಹೋದರೂ ಮನೆಯಲ್ಲಿಯೂ ಇಲ್ಲಾ ಎನ್ನುತ್ತಾರೆ. ಬ್ಯಾಂಕ್ ನಲ್ಲಿ ಮ್ಯಾನೇಜರ್ ಹಾಗೂ ಇತರೆ ಸಿಬ್ಬಂದಿ ಬೇಕಾಬಿಟ್ಟಿಯಾಗಿ ಉತ್ತರ ನೀಡುತ್ತಾರೆ. ನಾವು ಲಕ್ಷ ಲಕ್ಷ ಹಣವಿಟ್ಟಿದ್ದನ್ನು ಕೊಡುತ್ತಿಲ್ಲಾ ಎಂದು ಆರೋಪ ಮಾಡಿದ್ಧಾರೆ ಗ್ರಾಹಕರು.

ನಗರದ ಗಾಂಧಿ ಚೌಕ್ ಬಳಿ ಆದಿಲ್ ಅಮಾನತ್ ಸಹಕಾರಿ ಬ್ಯಾಂಕ್ ಕಚೇರಿಯಿದೆ. ಆದರೆ ಅಲ್ಲಿ ಯಾವುದೇ ಸಿಬ್ಬಂದಿ ಇಲ್ಲ. ಮ್ಯಾನೇಜರ್ ಸಹ ಇರಲ್ಲಾ. ಕೆಲ ಸಿಬ್ಬಂದಿ ಇದ್ದು ನಾವು ಇಲ್ಲಿ ಇತ್ತೀಚೆಗೆ ಕೆಲಸಕ್ಕೆ ಸೇರಿದ್ದೇವೆ. ನಮಗೆ ಯಾವುದೇ ಇತರೆ ಮಾಹಿತಿ ಇಲ್ಲ. ಬ್ಯಾಂಕಿನ ಚೇರ್ಮನ್ ಅವರನ್ನು ಭೇಟಿಯಾಗಿ ಮಾತನಾಡಿ ಎನ್ನುತ್ತಿದ್ದಾರೆ.

ಇದನ್ನೂ ಓದಿ: ಆದಿಲ್ ಶಾಹಿಗಳ ಕಾಲದ ಹತ್ತಾರು ಬಾವಿಗಳು ಹೂಳು ತುಂಬಿ ಹಾಳಾಗಿ ಹೋಗಿವೆ, ಪುನ:ಶ್ಚೇತನಕ್ಕೆ ಸಚಿವ ಎಂ ಬಿ ಪಾಟೀಲ್ ಸೂಚನೆ

ಕಂಡ ಕಂಡವರಿಗೆ ಇಲ್ಲಿ ಸಾಲ ನೀಡಲಾಗಿದ್ದು ಸಾಲ ಮಾಡಿದವರು ಸಹ ಹಣವನ್ನು ಮರು ಪಾವತಿ ಮಾಡಿಲ್ಲಾ. ಸದ್ಯ ಮಕ್ಕಳ ವಿದ್ಯಾಭ್ಯಾಸಕ್ಕೆ, ಮದುವೆಗೆ, ಆಸ್ಪತ್ರೆಯ ಚಿಕಿತ್ಸಾ ವೆಚ್ಚಕ್ಕೆ ಸೇರಿದಂತೆ ಇತರೆ ಕೆಲಸ ಕಾರ್ಯಗಳಿಗೆ ಹಣ ಸಹಾಯಕ್ಕೆ ಬರುತ್ತದೆ ಎಂದು ಡಿಪಾಸಿಟ್ ಇಟ್ಟವರು ಇದೀಗಾ ತಮ್ಮದೇ ಹಣಕ್ಕಾಗಿ ಪರದಾಡುವಂತಾಗಿದೆ.

ಒಂದು ಮೂಲದ ಮಾಹಿತಿ ಪ್ರಕಾರ 25 ರಿಂದ 30 ಕೋಟಿ ಹಣವನ್ನು ಗ್ರಾಹಕರು ಇಲ್ಲಿ ಡಿಪಾಸಿಟ್ ಇಟ್ಟಿದ್ದು ಯಾರಿಗೂ ಹಣ ಸಿಗದಂತಾಗಿದೆ. ಇನ್ನು ಯಾವುದೇ ಸಂಬಂಧಿಕರು ಕುಟುಂಬದವರಿಗೆ ಇಲ್ಲದ ಓರ್ವ ವ್ಯಕ್ತಿ ತಾನು ಮೃತಪಟ್ಟಾಗ ಅಂತ್ಯಸಂಸ್ಕಾರ ಮಾಡಲು ಹಣದ ಅವಶ್ಯಕತೆ ಇರುತ್ತದೆ ಎಂದು ಅದಕ್ಕಾಗಿ ಇಲ್ಲಿ ಇಟ್ಟಿದ್ದ ಡಿಪಾಸಿಟ್ ಹಣ ಸಿಗದೇ ಇಳಿವಯಸ್ಸಿನಲ್ಲಿ ಓಡಾಡುತ್ತಿದ್ಧಾರೆ. ಮಕ್ಕಳ ಶಿಕ್ಷಣಕ್ಕೆ ಅನಕೂಲವಾಗುತ್ತದೆ ಎಂದು ಇಟ್ಟಿದ್ದ ಹಣ ಕೈಗೆ ಬಾರದಂತಾಗಿದೆ ಎಂದು ಆಕ್ರೋಶವನ್ನು ಹೊರ ಹಾಕಿದ್ದಾರೆ.

Also Read: ವಿದ್ಯಾಕಾಶಿ ಧಾರವಾಡ- ವಾಣಿಜ್ಯ ನಗರಿ ಹುಬ್ಬಳ್ಳಿ ಅವಳಿ ನಗರದಲ್ಲಿ ಮಹಿಳೆಯರದ್ದೇ ದರ್ಬಾರ್!

ಆದಿಲ್ ಅಮಾನತ್ ಸಹಕಾರಿ ಬ್ಯಾಂಕ್ ಇಷ್ಟೆಲ್ಲಾ ಅವಾಂತರ ಮಾಡಿದರೂ ಜಿಲ್ಲಾ ಸಹಕಾರಿ ಇಲಾಖೆ ಆಧಿಕಾರಿಗಳು ಮಾತ್ರ ಗಮನ ಹರಿಸದೇ ಇರೋದು ಹಲವಾರು ಸಂಶಯಗಳಿಗೆ ಕಾರಣವಾಗಿದೆ. ಸಹಕಾರಿ ಇಲಾಖೆ ಆಧಿಕಾರಿಗಳು ಯಾವುದೇ ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಸಮಸ್ಯೆಯನ್ನು ಉಂಟು ಮಾಡಿದರೆ ಹಣ ವಾಪಸ್ ಕೊಡದೇ ಸತಾಯಿಸುತ್ತಿದ್ದರೆ ಗ್ರಾಹಕರಿಗೆ ನ್ಯಾಯ ಕೊಡಿಸಬೇಕಿದೆ. ಸಹಕಾರಿ ಇಲಾಖೆ ಆಧಿಕಾರಿಗಳಿಗೆ ಜಿಲ್ಲಾಡಳಿತಕ್ಕೆ ಮನವಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲಾ ಎಂದು ಗ್ರಾಹಕರು ಮಾಹಿತಿ ನೀಡಿದ್ಧಾರೆ. ಇನ್ನಾದರೂ ಸಹಕಾರಿ ಇಲಾಖೆ ಆಧಿಕಾರಿಗಳು ಜಿಲ್ಲಾಡಳಿತ ಇತ್ತ ಗಮನ ಹರಿಸಿ ಸಾವಿರಾರು ಗ್ರಾಹಕರಿಗೆ ನ್ಯಾಯ ಸಿಗುವಂತೆ ಕ್ರಮ ತೆಗೆದುಕೊಳ್ಳಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!