AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದಲ್ಲಿ ದಾರುಣ ಘಟನೆ; ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು

ಗಾಯಾಗಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ‌ ಚಿಂತಾಜನಕ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಮರ ತೆರವಿಗೆ ಅರಣ್ಯ‌ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ವಿಜಯಪುರದಲ್ಲಿ ದಾರುಣ ಘಟನೆ; ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
ಆಟೋ ಮೇಲೆ ಮರ ಬಿದ್ದು ಮಹಿಳೆ ಸಾವು
Follow us
TV9 Web
| Updated By: ganapathi bhat

Updated on: Apr 05, 2022 | 4:40 PM

ವಿಜಯಪುರ: ಚಲಿಸುತ್ತಿದ್ದ ಆಟೋ ಮೇಲೆ ಮರ ಬಿದ್ದು ಓರ್ವ ಮಹಿಳೆ ಸಾವನ್ನಪ್ಪಿದ ದುರ್ಘಟನೆ ವಿಜಯಪುರದ ಪೊಲೀಸ್ ತರಬೇತಿ ಕೇಂದ್ರದ ಬಳಿ ಸಂಭವಿಸಿದೆ. ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ಮಹಿಳೆ ಸಾವನ್ನಪ್ಪಿದ್ದಾರೆ. ಚಾಲಕ, ಮತ್ತಿಬ್ಬರು ಮಹಿಳೆಯರು ಹಾಗೂ ಒಟ್ಟು ಐದು ಮಂದಿಗೆ ಗಾಯ ಆಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಗಾಂಧಿಚೌಕ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ಅಟೋ ಮೇಲೆ ಬೃಹತ್ ಮರ ಮುರಿದು ಬಿದ್ದ ಘಟನೆಯಲ್ಲಿ ಐವರು ಜನರಿಗೆ ಗಂಭೀರ ಗಾಯವಾಗಿದೆ. ಪೊಲೀಸ್ ತರಬೇತಿ‌ ಕೇಂದ್ರದ ಆವರಣದಲ್ಲಿದ್ದ ಮರ ಬಿದ್ದು ವಿಜಯಪುರ ‌ನಗರದ ಸಿದ್ದಾರೂಢ ಕಾಲೋನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಸಾವನ್ನಪ್ಪಿದ್ದಾರೆ. ಇಂದುತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಅಟೋ ಚಾಲಕ ಸಚಿನ ರಾಠೋಡ್ ಎಂಬವರಿಗೆ ಗಾಯವಾಗಿದೆ. ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ಅಟೋ‌ ಚಾಲಕ ಗಾಯಗೊಂಡಿದ್ದಾರೆ. ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಾಪಸ್ ಹೋಗುತ್ತಿದ್ದ ವೇಳೆ ನಡೆದ ಅವಘಡ ಸಂಭವಿಸಿದೆ.

ಗಾಯಾಗಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಸ್ಥಿತಿ‌ ಚಿಂತಾಜನಕ ಆಗಿದೆ ಎಂದು ತಿಳಿದುಬಂದಿದೆ. ಘಟನೆಯಿಂದ ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಮರ ತೆರವಿಗೆ ಅರಣ್ಯ‌ ಇಲಾಖೆ ಸಿಬ್ಬಂದಿ ಮುಂದಾಗಿದ್ದಾರೆ. ಗಾಂಧಿಚೌಕ್ ಪೊಲೀಸ್ ಠಾಣಾ ವ್ಯಾಪ್ತಿ ಘಟನೆ ನಡೆದಿದೆ.

ದಾವಣಗೆರೆ: ಹೆರಿಗೆ ಆದ ಬಳಿಕ ಮಗು ಬಿಟ್ಟು ಹೋದ ತಾಯಿ.

ಹೆರಿಗೆ ಆದ ಬಳಿಕ ತಾಯಿ ಮಗುವನ್ನು ಬಿಟ್ಟು ಹೋದ ಘಟನೆ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮಾರ್ಚ್ 29 ರಂದು ದಾವಣಗೆರೆ ಬಾಪೂಜಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ತಾಯಿ‌ ಜನ್ಮ ನೀಡಿದ್ದರು. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಿದ್ದ ಹಿನ್ನೆಲೆ ಸರ್ಕಾರಿ ಮಹಿಳಾ‌ ಮತ್ತು ಮಕ್ಕಳ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಮಗುವಿನ ಆರೈಕೆ ಮಾಡಲಾಗಿತ್ತು. ಆದರೆ, ಹೆರಿಗೆ ಆಗಿ ಎಳು ದಿನವಾದ್ರೂ ತಾಯಿ ಮತ್ತು ಸಂಬಂಧಿಕರು‌ ಪತ್ತೆ ಆಗಿಲ್ಲ.

ತಾಯಿ ಮತ್ತು ಸಂಬಂಧಿಕರು ಪತ್ತೆ ಆಗದ ಹಿನ್ನೆಲೆ ಬಸವನಗರ ಠಾಣೆಯ ಪೊಲೀಸರಿಗೆ ಆಸ್ಪತ್ರೆ ಸಿಬ್ಬಂದಿ ಮಾಹಿತಿ ನೀಡಿದ್ದಾರೆ. ಒಂದು ಕೆಜಿ 50 ಗ್ರಾಂ ತೂಕದ ಗಂಡು ಮಗುವಿಗೆ ಆಸ್ಪತ್ರೆಯಲ್ಲಿ ಆರೈಕೆ ಮಾಡಲಾಗುತ್ತಿದೆ. ಇದೇ ಆಸ್ಪತ್ರೆಯಲ್ಲಿ ಈ ಮೊದಲು ಒಂದು ಗಂಡು ಮಗ ಅಪರಣ ಆಗಿತ್ತು. ಇದೇ ಆಸ್ಪತ್ರೆ ಯಲ್ಲಿ ಮಾರ್ಚ 16 ರಂದು ಗಂಡು ಮಗು ಅಪಹರಣ ಪ್ರಕರಣ ನಡೆದಿತ್ತು. ಆ ಘಟನೆಯಲ್ಲಿ ಅಪಹರಣಕ್ಕೆ ಒಳಗಾದ ಮಗು ಇನ್ನೂ ಪತ್ತೆಯಾಗಿಲ್ಲ. ಮಗುವಿಗಾಗಿ ತಾಯಿ ಪರಿತಪಿಸುತ್ತಿದ್ದಾರೆ. ಈ ಮಧ್ಯೆ ಇದೀಗ ಹೊಸ ಘಟನೆಯೊಂದು ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಮಂಗಳೂರು: ಕೆಫೆಯಲ್ಲಿ ಮೂವರು ಯುವತಿಯರ ಹೊಡೆದಾಟ; ಜಗಳ ಬಿಡಿಸಲು ಪರದಾಡಿದ ಹುಡುಗರು

ಇದನ್ನೂ ಓದಿ: ವಿಜಯನಗರ: ಫಸಲು ಕಾಯಲು ತೆರಳಿದ್ದ ರೈತನ ಮೇಲೆ 3 ಕರಡಿಗಳ ದಾಳಿ; ಗಂಭೀರ ಗಾಯ

ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಕಾಶಪ್ಪನವರ್ ಮತ್ತು ಯತ್ನಾಳ್ ಮಾತಿನಲ್ಲಿ ಭಾಷಾ ಮರ್ಯಾದೆ ಮೀರುತ್ತಿದ್ದಾರೆ
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಪೆಹಲ್ಗಾಮ್ ಉಗ್ರರ ದಾಳಿ: ಉತ್ತರ ಕನ್ನಡ ಪ್ರವಾಸಿ ಸ್ಥಳಗಳಲ್ಲಿ ಹೈಅಲರ್ಟ್​
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಸೇನಾ ಭಾಷೆಯಲ್ಲಿ ಡಿ ಡೇ, ಎಚ್ ಫ್ಯಾಕ್ಟರ್ ಅಂದರೆ ಏನು? ಇಲ್ಲಿದೆ ನೋಡಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಡಿ ಡೇ ಮತ್ತು ಹೆಚ್ ಫ್ಯಾಕ್ಟರ್ ಪದಗಳ ವಿವರಣೆ ನೀಡಿದ ಕರ್ನಲ್ ಹರಿ
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ಹೇಗಿದೆ? ಪಾಕ್ ಪತ್ರಕರ್ತ ಹೇಳಿದ್ದೇನು?
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಪಾಕಿಸ್ತಾನ್ ಪರ ಘೋಷಣೆ ಕೂಗಿದ ಆರೋಪ ಮತ್ತು ಕೊಲೆ, ಪೊಲೀಸರಿಂದ 15 ಜನರ ಬಂಧನ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ಅದ್ದೂರಿಯಾಗಿ ರಿಸೆಪ್ಷನ್ ನಡೆದಾಗ ವರ ಖುಷಿಯಾಗಿದ್ದ! ನಂತರ ನಡೆದದ್ದೇ ಬೇರೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ತಮಿಳುನಾಡಿನ ಪೊಲೀಸ್​ ಠಾಣೆಯೊಳಗೆ ಬಂದು ಇಣುಕಿ ನೋಡಿದ ಚಿರತೆ
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
ಕಾಶಪ್ಪನವರ್​ ಮಹಾ ಭ್ರಷ್ಟ, ಪಂಚಮಸಾಲಿ ಸಮಾಜಕ್ಕೆ ಮೋಸ ಮಾಡಿದ್ದಾರೆ: ಯತ್ನಾಳ್
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ
Rohit Sharma: ಪುಲ್ ಪುಲ್ ಪುಲ್... ಹಿಟ್​ಮ್ಯಾನ್ ಸ್ಪೆಷಲ್ ವಿಡಿಯೋ