ನೀರೆಂದು ಮದ್ಯದಲ್ಲಿ ಆ್ಯಸಿಡ್ ಹಾಕಿಕೊಂಡು ಕುಡಿದು ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ದೂರು

ವಿಜಯಪುರದ ಸಿದ್ದಾರ್ಥ ಬಾರ್‌ನಲ್ಲಿ ನಡೆದ ದುರ್ಘಟನೆಯಲ್ಲಿ 40 ವರ್ಷದ ವ್ಯಕ್ತಿ ಆ್ಯಸಿಡ್​ನ್ನು ನೀರು ಎಂದು ತಿಳಿದು ಕುಡಿದು ಮೃತಪಟ್ಟಿದ್ದಾರೆ. ಬಾರ್‌ನ ನಿರ್ಲಕ್ಷ್ಯದಿಂದಾಗಿ ಟೇಬಲ್ ಮೇಲೆ ಇರಿಸಿದ್ದ ಆ್ಯಸಿಡ್​ನ್ನು ಕುಡಿದಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಾರ್ ಮಾಲೀಕ, ಮ್ಯಾನೇಜರ್ ಮತ್ತು ವೇಟರ್ ವಿರುದ್ಧ ದೂರು ದಾಖಲಾಗಿದೆ.

ನೀರೆಂದು ಮದ್ಯದಲ್ಲಿ ಆ್ಯಸಿಡ್ ಹಾಕಿಕೊಂಡು ಕುಡಿದು ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ದೂರು
ನೀರೆಂದು ಮದ್ಯದಲ್ಲಿ ಆ್ಯಸಿಡ್ ಹಾಕಿಕೊಂಡು ಕುಡಿದು ವ್ಯಕ್ತಿ ಸಾವು: ಬಿಜೆಪಿ ಮುಖಂಡನ ವಿರುದ್ಧ ದೂರು
Edited By:

Updated on: Jan 29, 2025 | 9:41 PM

ವಿಜಯಪುರ, ಜನವರಿ 29: ನೀರೆಂಬು ಭಾವಿಸಿ ಟೇಬಲ್ ಮೇಲಿಟ್ಟಿದ್ದ ಆ್ಯಸಿಡ್​ನ್ನು ಮದ್ಯದಲ್ಲಿ ಹಾಕಿಕೊಂಡು ಕುಡಿದು ಅಸ್ವಸ್ಥನಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿರುವಂತಹ (death) ಘಟನೆ ನಗರದಲ್ಲಿ ನಡೆದಿದೆ. ಮಹಮ್ಮದ ಶಫೀಕ್ ಮನಿಯಾರ್ (40) ಮೃತ ವ್ಯಕ್ತಿ. ಮಹಮ್ಮದ ಸಾವಿಗೆ ಬಾರ್ ಮಾಲೀಕ, ಮ್ಯಾನೇಜರ್ ಹಾಗೂ ವೇಟರ್ ನಿರ್ಲಕ್ಷವೇ ಕಾರಣವೆಂದು ಕುಟುಂಬಸ್ಥರು ದೂರು ದಾಖಲಿಸಿದ್ದಾರೆ.

ವಿಜಯಪುರ ನಗರದ ಎಲ್​ಬಿಎಸ್ ಮಾರುಕಟ್ಟೆ ಮೇಲಿರುವ ಸಿದ್ದಾರ್ಥ್​ ಬಾರ್​ನಲ್ಲಿ ಘಟನೆ ನಡೆದಿತ್ತು. ಮೊಹಮ್ಮದ್ ಪತ್ನಿ ಶಾಹೀದಾಳಿಂದ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಬಾರ್ ಮಾಲೀಕ ಹಾಗೂ ಬಿಜೆಪಿ ಮುಖಂಡ ವಿಜುಗೌಡ ಎಸ್​ ಪಾಟೀಲ್​, ಮ್ಯಾನೇಜರ್ ಅಪ್ಪಾಸಾಬ್ ಮಮದಾಪೂರ, ವೇಟರ್ ಆನಂದ ಶಿಂಧೆ ಮೇಲೆ ಬಿಎನ್ಎಸ್ ಕಾಯ್ದೆ 106 (1), 3 (5) ಕಲಂ ಪ್ರಕಾರ ದೂರು ದಾಖಲಿಸಲಾಗಿದೆ. ಬಾರ್ ಟೇಬಲ್ ಮೇಲೆ ನಿರ್ಲಕ್ಷ್ಯದಿಂದ ಆ್ಯಸಿಡ್ ಬಾಟಲ್ ಇಟ್ಟಿದ್ದೇ ಮೊಹಮ್ಮದ ಸಾವಿಗೆ ಕಾರಣವೆಂದು ಪತ್ನಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ನಡೆದದ್ದೇನು?

ನಿನ್ನೆ ಬೆಳಿಗ್ಗೆ 8 ಗಂಟೆ ಸುಮಾರಿಗೆ ಸಿದ್ದಾಸಿದ್ದಾರ್ಥ್ ಬಾರ್​​ಗೆ ತೆರಳಿ ಮದ್ಯ ಸೇವಿಸಿದ್ದ ಮೊಹಮ್ಮದ್, ಕುಡಿಯುತ್ತಲೇ ಹೊಟ್ಟೆಯುರಿ ಎಂದು ಹೇಳಿದಾಗ ನೀರಿನ ಬದಲಾಗಿ ಟೈಲ್ಸ್ ಕ್ಲೀನ್ ಮಾಡುವ ಆ್ಯಸಿಡ್ ಹಾಕಿಕೊಂಡು ಕುಡಿದಿದ್ದೀಯಾ ಎಂದು ವೇಟರ್ ಹೇಳಿದ್ದಾನೆ.

ಬಳಿಕ ಮೊಹಮ್ಮದನನ್ನು ಕುಟುಂಬಸ್ಥರು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೊಹಮ್ಮದ ಮೃತಪಟ್ಟಿದ್ದಾರೆ. ಇನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಮೊಹಮ್ಮದ ಶವ ತಂದು ಪ್ರತಿಭಟನೆ ಮಾಡಲಾಗಿದೆ. ಸ್ಥಳಕ್ಕೆ ಆಗಮಿಸಿದ ಎಎಸ್ಪಿ ರಾಮನಗೌಡ ಹಟ್ಟಿ, ಡಿವೈಎಸ್​​ಪಿ ಬಸವರಾಜ ಯಲಿಗಾರ ಘಟನೆ ಕುರಿತು ದೂರು ದಾಖಲು ಮಾಡಲಾಗಿದೆ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: 500 ರೂ ಕದ್ದಿದ್ದಾನೆಂದು ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಕಿಡ್ನ್ಯಾಪ್: ಕಂಬಕ್ಕೆ ಕಟ್ಟಿ ಥಳಿತ

ಭರವಸೆ ಬೆನ್ನಲ್ಲೇ ಪ್ರತಿಭಟನೆ ಮೊಟಕುಗೊಳಿಸಬೇಕೆಂದ ಅಧಿಕಾರಿಗಳು, ನಂತರ ಮೊಹಮ್ಮದ ಶವವನ್ನು ಸಂಬಂಧಿಕರು ಹಾಗೂ ಜನರು ತೆಗೆದುಕೊಂಡು ಹೋಗಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಪೊಲೀಸರ ನಿಯೋಜನೆ ಮಾಡಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us