AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ: ಬಬಲಾದಿಯ ಸದಾಶಿವ ಮುತ್ಯಾ ಕಾಲಜ್ಞಾನ ಭವಿಷ್ಯ

ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಅವರು 2025ರ ಕುರಿತು ಆಘಾತಕಾರಿ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ಬದಲಾವಣೆ, ಭೂಕಂಪ, ಅಗ್ನಿ ಅನಾಹುತಗಳು, ಮತ್ತು ಶಿಕ್ಷಣ ಕ್ಷೇತ್ರದಲ್ಲಿನ ಬದಲಾವಣೆಗಳನ್ನು ಅವರು ಉಲ್ಲೇಖಿಸಿದ್ದಾರೆ. ರಾಜಕೀಯ ಅಸ್ಥಿರತೆ ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ವಿವರಗಳಿಗೆ ಮುಂದೆ ಓದಿ.

ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ: ಬಬಲಾದಿಯ ಸದಾಶಿವ ಮುತ್ಯಾ ಕಾಲಜ್ಞಾನ ಭವಿಷ್ಯ
ಸದಾಶಿವ ಮುತ್ಯಾ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Mar 01, 2025 | 2:51 PM

Share

ವಿಜಯಪುರ, ಮಾರ್ಚ್​ 1: ಕರ್ನಾಟಕದಲ್ಲಿ, ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ತೀವ್ರಗೊಂಡಿರುವ ಸಂದರ್ಭದಲ್ಲಿಯೇ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ದೇಶದ ರಾಜಕೀಯದ ಬಗ್ಗೆ ಅವರು ಅಚ್ಚರಿಯ ಭವಿಷ್ಯ ವಾಣಿ ನುಡಿದಿದ್ದಾರೆ. 2025ನೇ ಸಾಲಿನ ಭವಿಷ್ಯವಾಣಿ ನುಡಿದ ಅವರು ಹಲವು ಸ್ಫೋಟಕ ವಿಚಾರಗಳನ್ನು ತೆರೆದಿಟ್ಟಿದ್ದಾರೆ.

ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠ ಕಾಲಜ್ಞಾನದಿಂದಲೇ ಪ್ರಸಿದ್ಧವಾಗಿದೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ಇಲ್ಲಿ ಜಾತ್ರೆ ಆರಂಭವಾಗುತ್ತದೆ. ಶಿವರಾತ್ರಿ ಅಮಾವಾಸ್ಯೆ ಬಳಿಕ ಸದಾಶಿವ ಮುತ್ಯಾನ ಕಾಲಜ್ಞಾನ ನುಡಿಯಲಾಗುತ್ತದೆ. ಸದಾಶಿವ ಮುತ್ಯಾ ನುಡಿದ ಭವಿಷ್ಯವಾಣಿ

ಬರಗಾಲದ ಮುನ್ಸೂಚನೆ

‘‘ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ ಬಂದಿತು ತಿಳಿಯಿರಿಯಣ್ಣ. ಶಿಕ್ಷಣ ಕ್ಷೇತ್ರದಲ್ಲಿ ಹೊಸ ತಿರುವು ಆಗಲಿದೆ. ಹಣದ ಹಿಂದೆ ಹೋಗುವರ ಬಂಧುತ್ವದ ಸಮಯ ತಿಳಿಯಿರಿಯಣ್ಣ. ಈ ವರ್ಷ ವಿದ್ಯುಚ್ಛಕ್ತಿ, ನೀರಿನ ಕೊರತೆ ಬಹಳ‌ ಆಗುತ್ತದೆ’’ ಎಂದು ಅವರು ನುಡಿದಿದ್ದಾರೆ. ಆ ಮೂಲಕ ಮತ್ತೆ ಬರಗಾಲದ ಮುನ್ಸೂಚನೆ ನೀಡಿದ್ದಾರೆ.

ಇದನ್ನೂ ಓದಿ
Image
24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದವನನ್ನ ಮನೆ ಸೇರಿಸಿದ ಕುಂಭಮೇಳ
Image
ರಸ್ತೆ ಅಪಘಾತದಲ್ಲಿ ಕರ್ನಾಟಕದ ನಾಲ್ವರು ಕುಂಭಮೇಳ ಯಾತ್ರಿಕರ ಸಾವು
Image
ವಿಜಯಪುರ ವೈದ್ಯಕೀಯ​ ಕಾಲೇಜಿನಲ್ಲಿ ಕಾಶ್ಮೀರಿ ವಿದ್ಯಾರ್ಥಿಗೆ ರ‍್ಯಾಗಿಂಗ್
Image
ಭೀಮಾತೀರದ ಹಂತಕ ಬಾಗಪ್ಪ ಹರಿಜನ ಕೊಲೆ ರಹಸ್ಯ ಬಯಲು

ಬದಲಾಗ್ತಾರಾ ಸಿಎಂ?

ಮತ್ತೊಂದೆಡೆ, ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಆ ಬಗ್ಗೆಯೂ ಮುತ್ಯಾ ಮಾತನಾಡಿದ್ದಾರೆ. ರಾಜ್ಯ ರಾಜಕೀಯದ ಕುರಿತು ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ಮತ್ತಷ್ಟು ಬದಲಾವಣೆ ಆಗಲಿದೆ ಎಂದು ಅವರು ಹೇಳಿದ್ದಾರೆ.

ಭೂಕಂಪ, ಅಗ್ನಿ ದುರಂತಗಳು ಹೆಚ್ಚಾಗಲಿವೆ. ಧರ್ಮ ಧರ್ಮಗಳ ನಡುವೆ ಕಿತ್ತಾಟ ಹೆಚ್ಚಾಗುತ್ತದೆ. ಈ ವರ್ಷದಲ್ಲಿ ಮಾನವೀಯತೆ, ಮನುಷ್ಯತ್ವದ ಹೊಸ ಸಂಚಲನ ಮೂಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: 24 ವರ್ಷದಿಂದ ನಾಪತ್ತೆಯಾಗಿದ್ದ ವಿಜಯಪುರದ ವ್ಯಕ್ತಿಯನ್ನು ಮನೆ ಸೇರಿಸಿದ ಕುಂಭಮೇಳ

ರಾಜ್ಯ ರಾಜಕಾರಣದಲ್ಲಿ ಹಲವು ಮಹತ್ವದ ವಿದ್ಯಮಾನಗಳು ಮತ್ತು ಅಚ್ಚರಿಯ ಘಟನೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಮುತ್ಯಾ ಈ ರೀತಿ ಅಚ್ಚರಿಯ ಭವಿಷ್ಯವಾಣಿ ನುಡಿದಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣ ಮಧ್ಯೆ ಮುಸುಕಿನ ಗುದ್ದಾಟ ತೀವ್ರಗೊಂಡಿದೆ. ಅತ್ತ ವಿರೋಧ ಪಕ್ಷ ಬಿಜೆಪಿಯಲ್ಲಿ ಕೂಡ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವೆ ತಿಕ್ಕಾಟ ಜೋರಾಗಿದೆ. ಇಂಥ ಸಂದರ್ಭದಲ್ಲೇ ಸ್ಪೋಟಕ ಭವಿಷ್ಯ ವಾಣಿ ನುಡಿದಿರುವುದು ಕುತೂಹಲ ಹೆಚ್ಚಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ