AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಮ್ಮಟ ನಗರಿಗೂ ಬಾಂಬ್​ ಬೆದರಿಕೆ ಸಂದೇಶ: ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ: ಡಿಸಿ ಸ್ಪಷ್ಟನೆ

ವಿಜಯಪುರ ನಗರದ ಗೋಲಗುಂಬಜ್ ಆವರಣದಲ್ಲಿರುವ ಮ್ಯೂಸಿಯಂನಲ್ಲಿ ತಪಾಸನೆ ಮಾಡಲಾಗಿದೆ. ಯಾವುದೇ ಸ್ಪೋಟಕ ಕಂಡು ಸಿಕ್ಕಿಲ್ಲ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ. ಇದೊಂದು ಹುಸಿ ಬಾಂಬ್​ ಬೆದರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ತಪಾಸನೆ ಮಾಡಲಾಗಿದೆ.

ಗುಮ್ಮಟ ನಗರಿಗೂ ಬಾಂಬ್​ ಬೆದರಿಕೆ ಸಂದೇಶ: ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ: ಡಿಸಿ ಸ್ಪಷ್ಟನೆ
ಗೋಲ್ ಗುಂಬಜ್
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Jan 06, 2024 | 3:43 PM

ವಿಜಯಪುರ, ಜನವರಿ 06: ಭಾರತೀಯ ಪುರಾತತ್ವ ಇಲಾಖೆಯ ಆಧೀನದಲ್ಲಿರುವ ಮ್ಯೂಸಿಯಂಗಳಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb threat) ಬಂದಿದೆ. ಈ ವಿಚಾರವಾಗಿ ನಗರದ ಗೋಲಗುಂಬಜ್ ಆವರಣದಲ್ಲಿರುವ ಮ್ಯೂಸಿಯಂನಲ್ಲಿ ತಪಾಸನೆ ಮಾಡಲಾಗಿದೆ. ಯಾವುದೇ ಸ್ಪೋಟಕ ಕಂಡು ಸಿಕ್ಕಿಲ್ಲ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೊಂದು ಹುಸಿ ಬಾಂಬ್​ ಬೆದರಿಕೆ ಆಗಿದೆ. ಕಿಡಿಗೇಡಿಗಳು ದೇಶದ ಮ್ಯೂಸಿಯಂಗಳಲ್ಲಿ ಬಾಂಬ್ ಇಟ್ಟಿದ್ದಾಗಿ ಇಮೇಲ್​ ಮೂಲಕ ಬೆದರಿಕೆ ಹಾಕಿದ್ದು ಸುಳ್ಳು ವದಂತಿ. ಮುಂಜಾಗೃತಾ ಕ್ರಮವಾಗಿ ನಗರದ ಗೋಲಗುಂಬಜ್ ಆವರಣದ ಮ್ಯೂಸಿಯಂನಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳ ತಪಾಸನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು

ನಿನ್ನೆ ಮೇಲ್ ಮೂಲಕ ಪುರಾತತ್ವ ಇಲಾಖೆ ಅಧೀನದಲ್ಲಿರುವ ಮ್ಯೂಸಿಯಂಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಮೇಲ್ ಹಾಕಿದ್ದರು. morgue999lol ನಿಂದ ಮ್ಯೂಸಿಯಂಗಳಲ್ಲಿ ಬಾಂಬ್ ಇಡಲಾಗಿದೆ ಎಂದು enquiries@museumofindia.org ಸೇರಿದಂತೆ ನೂರಕ್ಕೂ ಅಧಿಕ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ. ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಲಾಗಿತ್ತು.

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ