ಗುಮ್ಮಟ ನಗರಿಗೂ ಬಾಂಬ್​ ಬೆದರಿಕೆ ಸಂದೇಶ: ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ: ಡಿಸಿ ಸ್ಪಷ್ಟನೆ

ವಿಜಯಪುರ ನಗರದ ಗೋಲಗುಂಬಜ್ ಆವರಣದಲ್ಲಿರುವ ಮ್ಯೂಸಿಯಂನಲ್ಲಿ ತಪಾಸನೆ ಮಾಡಲಾಗಿದೆ. ಯಾವುದೇ ಸ್ಪೋಟಕ ಕಂಡು ಸಿಕ್ಕಿಲ್ಲ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ. ಇದೊಂದು ಹುಸಿ ಬಾಂಬ್​ ಬೆದರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ತಪಾಸನೆ ಮಾಡಲಾಗಿದೆ.

ಗುಮ್ಮಟ ನಗರಿಗೂ ಬಾಂಬ್​ ಬೆದರಿಕೆ ಸಂದೇಶ: ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ: ಡಿಸಿ ಸ್ಪಷ್ಟನೆ
ಗೋಲ್ ಗುಂಬಜ್
Edited By:

Updated on: Jan 06, 2024 | 3:43 PM

ವಿಜಯಪುರ, ಜನವರಿ 06: ಭಾರತೀಯ ಪುರಾತತ್ವ ಇಲಾಖೆಯ ಆಧೀನದಲ್ಲಿರುವ ಮ್ಯೂಸಿಯಂಗಳಲ್ಲಿ ಇಮೇಲ್ ಮೂಲಕ ಬಾಂಬ್ ಬೆದರಿಕೆ (Bomb threat) ಬಂದಿದೆ. ಈ ವಿಚಾರವಾಗಿ ನಗರದ ಗೋಲಗುಂಬಜ್ ಆವರಣದಲ್ಲಿರುವ ಮ್ಯೂಸಿಯಂನಲ್ಲಿ ತಪಾಸನೆ ಮಾಡಲಾಗಿದೆ. ಯಾವುದೇ ಸ್ಪೋಟಕ ಕಂಡು ಸಿಕ್ಕಿಲ್ಲ. ಸಾರ್ವಜನಿಕರು ಗಾಬರಿಯಾಗುವ ಅವಶ್ಯಕತೆಯಿಲ್ಲ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ಅವರು ಸ್ಪಷ್ಟನೆ ನೀಡಿದ್ದಾರೆ.

ಇದೊಂದು ಹುಸಿ ಬಾಂಬ್​ ಬೆದರಿಕೆ ಆಗಿದೆ. ಕಿಡಿಗೇಡಿಗಳು ದೇಶದ ಮ್ಯೂಸಿಯಂಗಳಲ್ಲಿ ಬಾಂಬ್ ಇಟ್ಟಿದ್ದಾಗಿ ಇಮೇಲ್​ ಮೂಲಕ ಬೆದರಿಕೆ ಹಾಕಿದ್ದು ಸುಳ್ಳು ವದಂತಿ. ಮುಂಜಾಗೃತಾ ಕ್ರಮವಾಗಿ ನಗರದ ಗೋಲಗುಂಬಜ್ ಆವರಣದ ಮ್ಯೂಸಿಯಂನಲ್ಲಿ ಬಾಂಬ್ ನಿಷ್ಕ್ರೀಯ ದಳ ಹಾಗೂ ಶ್ವಾನ ದಳ ತಪಾಸನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್​ ಬೆದರಿಕೆ: ಎಫ್​ಐಆರ್​ ದಾಖಲು

ನಿನ್ನೆ ಮೇಲ್ ಮೂಲಕ ಪುರಾತತ್ವ ಇಲಾಖೆ ಅಧೀನದಲ್ಲಿರುವ ಮ್ಯೂಸಿಯಂಗಳಲ್ಲಿ ಬಾಂಬ್ ಇಡಲಾಗಿದೆ ಎಂಬ ಮೇಲ್ ಹಾಕಿದ್ದರು. morgue999lol ನಿಂದ ಮ್ಯೂಸಿಯಂಗಳಲ್ಲಿ ಬಾಂಬ್ ಇಡಲಾಗಿದೆ ಎಂದು enquiries@museumofindia.org ಸೇರಿದಂತೆ ನೂರಕ್ಕೂ ಅಧಿಕ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು.

ಇದನ್ನೂ ಓದಿ: ರಾಷ್ಟ್ರೀಯ ಷೇರು ವಿನಿಮಯ ಬೆಂಗಳೂರು ಕಚೇರಿಗೆ ಬಾಂಬ್​ ಬೆದರಿಕೆ ಕರೆ

ಶುಕ್ರವಾರ (ಜ.06) ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್​ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಬಚ್ಚಿಡಲಾಗಿದೆ. ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು‘Morgue999lol’ ಎಂಬ ಐಡಿ ಮೂಲಕ ಮೇಲ್ ಮಾಡಿ, ಜೊತೆಗೆ ಉಗ್ರ ಸಂಘಟೆನಯೊಂದರ (Terrorizers 111) ಹೆಸರನ್ನು ದುಷ್ಕರ್ಮಿಗಳು ಉಲ್ಲೇಖಿಸಿ ಬೆದರಿಕೆ ಹಾಕಲಾಗಿತ್ತು.

ಮ್ಯೂಸಿಯಂ ಸಿಬ್ಬಂದಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಂದು ಪೊಲೀಸರು ಪರಿಶೀಲನೆ ನಡೆಸಿದ್ದರು. ಬಾಂಬ್​ ನಿಷ್ಕ್ರಿಯ ದಳ, ಶ್ವಾನ ದಳದಿಂದಲೂ ಪರಿಶೀಲನೆ ನಡೆಸಲಾಗಿತ್ತು. ಪರಿಶೀಲನೆ ಬಳಿಕ ಹುಸಿ ಬಾಂಬ್​ ಬೆದರಿಕೆ ಸಂದೇಶ ಎಂಬುದು ಪತ್ತೆಯಾಗಿತ್ತು. ಕಬ್ಬನ್​ ಪಾರ್ಕ್​ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us