AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್​​ ಸಾವು, ಪೆಟ್ರೋಲ್‌ ಬಂಕ್​ಗೆ ನುಗ್ಗಿದ ಬಸ್

ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದ ನಿನ್ನೆ (ಮೇ.30) ರಂದು‌ ನಡೆದಿದೆ.

ವಿವೇಕ ಬಿರಾದಾರ
|

Updated on:May 31, 2023 | 10:50 AM

Share

ವಿಜಯಪುರ: ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ (Driver) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ (Governmnet Bus) ಪೆಟ್ರೋಲ್‌ ಬಂಕ್​ಗೆ (Petrol Bunk) ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ (ಮೇ.30) ರಂದು‌ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಕಲಬುರಗಿ ಜಿಲ್ಲೆಯ ಅಪ್ಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ದಾರಿ ಮಧ್ಯೆ ಬಸ್ ಹೆಡ್​ಲೈಟ್ ಸಮಸ್ಯೆಯಾಗಿ ಬಂದ್​ ಆಗಿದೆ. ಈ ಹಿನ್ನೆಲೆ ದಾರಿ ಮಧ್ಯೆ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಸಿಂದಗಿ ಡಿಪೋಗೆ ಬಸ್​​ ಹೊರಟಿತ್ತು.

ಹೀಗೆ ಹೊರಡುವಾಗ ಬಸ್​ ಸಿಂದಗಿ ನಗರ ಪ್ರವೇಶಿಸುತ್ತಿದ್ದಂತೆ ಚಾಲಕ ಮುರಿಗೆಪ್ಪ ಅಥಣಿ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಆಗ ಬಸ್​ ನಿಯಂತ್ರಣ ತಪ್ಪಿ ಪೆಟ್ರೋಲ್​ ಬಂಕ್​ಗೆ ನುಗ್ಗುತ್ತಿದ್ದಂತೆ ಅಕ್ಕ-ಪಕ್ಕದಲ್ಲಿದ್ದ ಜನ ಗಾಭರಿಯಿಂದ ಚಲ್ಲಾಪಿಲ್ಲಿಯಾಗಿದ್ದಾರೆ.

ಇದನ್ನು ಕಂಡ ನಿರ್ವಾಹಕ ಶರಣು ಟಾಕಳಿಯವರು ಬಸ್​ನ ಬ್ರೇಕ್ ಹಿಡಿದು ನಿಲ್ಲಿಸಿದ್ದಾರೆ. ಕಂಡೆಕ್ಟರ್​​ ಶರಣು ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅಲ್ಲದೇ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದೆ ಇರುವುದರಿಂದ ಸಂಭವನೀಯ ಅಪಾಯ ತಪ್ಪಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಪ್ಜಲಪುರ ಡಿಪೋ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 31 May 23

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು