AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್ ಚಾಲನೆ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಡ್ರೈವರ್​​ ಸಾವು, ಪೆಟ್ರೋಲ್‌ ಬಂಕ್​ಗೆ ನುಗ್ಗಿದ ಬಸ್

ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ ಪೆಟ್ರೋಲ್‌ ಬಂಕ್​ಗೆ ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದ ನಿನ್ನೆ (ಮೇ.30) ರಂದು‌ ನಡೆದಿದೆ.

ವಿವೇಕ ಬಿರಾದಾರ
|

Updated on:May 31, 2023 | 10:50 AM

Share

ವಿಜಯಪುರ: ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕ (Driver) ಹೃದಯಾಘಾತದಿಂದ ಸಾವನ್ನಪ್ಪಿದ್ದು, ಸರ್ಕಾರಿ ಬಸ್ (Governmnet Bus) ಪೆಟ್ರೋಲ್‌ ಬಂಕ್​ಗೆ (Petrol Bunk) ನುಗ್ಗಿರುವ ಘಟನೆ ಜಿಲ್ಲೆಯ ಸಿಂದಗಿ ನಗರದಲ್ಲಿ ನಿನ್ನೆ (ಮೇ.30) ರಂದು‌ ನಡೆದಿದೆ. ಮುರಿಗೆಪ್ಪ ಅಥಣಿ ಮೃತ ಚಾಲಕ. ಮಂಗಳವಾರ ಸಾಯಂಕಾಲ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ ಕಲಬುರಗಿ ಜಿಲ್ಲೆಯ ಅಪ್ಜಲಪುರದಿಂದ ವಿಜಯಪುರಕ್ಕೆ ಹೊರಟಿತ್ತು. ದಾರಿ ಮಧ್ಯೆ ಬಸ್ ಹೆಡ್​ಲೈಟ್ ಸಮಸ್ಯೆಯಾಗಿ ಬಂದ್​ ಆಗಿದೆ. ಈ ಹಿನ್ನೆಲೆ ದಾರಿ ಮಧ್ಯೆ ಪ್ರಯಾಣಿಕರನ್ನು ಕೆಳಗೆ ಇಳಿಸಿ, ಸಿಂದಗಿ ಡಿಪೋಗೆ ಬಸ್​​ ಹೊರಟಿತ್ತು.

ಹೀಗೆ ಹೊರಡುವಾಗ ಬಸ್​ ಸಿಂದಗಿ ನಗರ ಪ್ರವೇಶಿಸುತ್ತಿದ್ದಂತೆ ಚಾಲಕ ಮುರಿಗೆಪ್ಪ ಅಥಣಿ ಅವರಿಗೆ ಹೃದಯಾಘಾತವಾಗಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಆಗ ಬಸ್​ ನಿಯಂತ್ರಣ ತಪ್ಪಿ ಪೆಟ್ರೋಲ್​ ಬಂಕ್​ಗೆ ನುಗ್ಗುತ್ತಿದ್ದಂತೆ ಅಕ್ಕ-ಪಕ್ಕದಲ್ಲಿದ್ದ ಜನ ಗಾಭರಿಯಿಂದ ಚಲ್ಲಾಪಿಲ್ಲಿಯಾಗಿದ್ದಾರೆ.

ಇದನ್ನು ಕಂಡ ನಿರ್ವಾಹಕ ಶರಣು ಟಾಕಳಿಯವರು ಬಸ್​ನ ಬ್ರೇಕ್ ಹಿಡಿದು ನಿಲ್ಲಿಸಿದ್ದಾರೆ. ಕಂಡೆಕ್ಟರ್​​ ಶರಣು ಅವರ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದೆ. ಅಲ್ಲದೇ ಬಸ್‌ನಲ್ಲಿ ಪ್ರಯಾಣಿಕರು ಇಲ್ಲದೆ ಇರುವುದರಿಂದ ಸಂಭವನೀಯ ಅಪಾಯ ತಪ್ಪಿದೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಪ್ಜಲಪುರ ಡಿಪೋ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಗತ್ಯ ಕ್ರಮ ಕೈಗೊಂಡಿದ್ದಾರೆ. ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:33 am, Wed, 31 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!