AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

31 Online ವಂಚನೆ ಪ್ರಕರಣ ಭೇದಿಸಿದ ವಿಜಯಪುರ ಸಿಇಎನ್ ಪೊಲೀಸರು, ಬಹುತೇಕ ಹಣವನ್ನು ಮರಳಿಸಿದ್ದಾರೆ!

Vijayapura CEN Police: ಸಿಇಎನ್ ಇನ್ಸಪೆಕ್ಟರ್ ರಮೇಶ ಅವಜಿ ನೇತೃತ್ವದಲ್ಲಿ ನಡೆದಿರೋ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿಜಯಪುರ ಜಿಲ್ಲಾ ಎಸ್ಪಿ ಆನಂದ ಕುಮಾರ್, ಪ್ರಕರಣ ಭೇದಿಸಿದ ತಂಡಕ್ಕೆ ನಗದು ಬಹುಮಾನ ನೀಡಿ ಶ್ಲಾಘಿಸಿದ್ದಾರೆ.

31 Online ವಂಚನೆ ಪ್ರಕರಣ ಭೇದಿಸಿದ ವಿಜಯಪುರ ಸಿಇಎನ್ ಪೊಲೀಸರು, ಬಹುತೇಕ ಹಣವನ್ನು ಮರಳಿಸಿದ್ದಾರೆ!
31 ಆನ್ಲೈನ್ ಹಣ ವಂಚನೆ ಪ್ರಕರಣಗಳ ಭೇದಿಸಿದ ವಿಜಯಪುರ ಸಿಇಎನ್ ಪೊಲೀಸರು, ಬಹುತೇಕ ಹಣವನ್ನು ಮರಳಿಸಿದ್ದಾರೆ!
TV9 Web
| Updated By: ಸಾಧು ಶ್ರೀನಾಥ್​|

Updated on: Sep 14, 2022 | 5:41 PM

Share

ವಿಜಯಪುರ ಜಿಲ್ಲಾ (Vijayapura) ಸಿಇಎನ್ ಪೊಲೀಸರು ವ್ಯವಸ್ಥಿತವಾಗಿ ನಿರಂತರ ಕಾರ್ಯಾಚರಣೆ ನಡೆಸಿದ್ದು, ಭಾರೀ ಪ್ರಮಾಣದ ಆನ್ಲೈನ್ ಹಣ ವಂಚನೆ (Online Fraud) ಪ್ರಕರಣಗಳನ್ನು ಭೇದಿಸಿದ್ದಾರೆ. 2022ನೇ ಸಾಲಿನಲ್ಲಿ ಇದುವರೆಗೂ ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯಗಳ ಅಪರಾಧ ಪೊಲೀಸ್ ಠಾಣೆಯಲ್ಲಿ (CEN Police Station) ಒಟ್ಟು 31 ಆನ್ಲೈನ್ ವಂಚನೆ ಪ್ರಕರಣಗಳು ದಾಖಲಾಗಿದ್ದವು. ಆ 31 ಪ್ರಕರಣಗಳಲ್ಲಿ ಒಟ್ಟು 39,99,854 ರೂಪಾಯಿಗಳ ವಂಚನೆ ನಡೆದಿರುವುದು ಪತ್ತೆಯಾಗಿತ್ತು. ಇದರಲ್ಲಿ ಒಟ್ಟು 24,45,729 ರೂ.ಗಳ ಮರಳಿ 31 ದೂರುದಾರರ ಖಾತೆಗಳಿಗೆ ಜಮಾವಣೆ ಮಾಡಲಾಗಿದೆ.

ಸಿಇಎನ್ ವಿಜಯಪುರ ಪೊಲೀಸ್ ಠಾಣೆಯಲ್ಲಿ 11 ವಂಚನೆ ಪ್ರಕರಣಗಳು ದಾಖಲಾಗಿದ್ದವು. 11 ಪ್ರಕರಣಗಳಲ್ಲಿ ಒಟ್ಟು 28,96,865 ರೂಪಾಯಿಗಳ ವಂಚನೆ ನಡೆದಿತ್ತು. ಈ ಪೈಕಿ 15,32,863 ರೂಪಾಯಿ ದೂರುದಾರರ ಬ್ಯಾಂಕ್ ಖಾತೆಗಳಿಗೆ ಜಮಾವಣೆಯಾಗಿದೆ. ವಂಚನೆಯಾದ 1 ತಾಸಿನಲ್ಲಿ (ಗೋಲ್ಡನ್ ಅವರ್) 2022 ರಲ್ಲಿ 10 ಪಿಟಿಶನ್ ಗಳು ದಾಖಲಾಗಿದ್ದವು. ಇದರಲ್ಲಿ ವಂಚನೆಯಾದ 6,15,156 ರೂಪಾಯಿಗಳಲ್ಲಿ 4,50,032 ರೂಪಾಯಿ ಮರಳಿ ದೂರುದಾರರ ಖಾತೆಗೆ ಜಮೆ ಮಾಡಿದ್ದಾರೆ ಸಿಇಎನ್ ಪೊಲೀಸರು.

ಇನ್ನು 2022ರಲ್ಲಿ MHA National Cyber Crime Portal Helpline No 1930 ಮೂಲಕ ಸಹ 10 ವಂಚನೆ ಪ್ರಕರಣಗಳು ದಾಖಲಾಗಿದ್ದವು. ಇದರಲ್ಲಿ ವಂಚನೆಯಾದ ಒಟ್ಟು 4,87,833 ರೂಪಾಯಿಗಳ ಪೈಕಿ 4,62,834 ಮರಳಿ ವಂಚನೆಗೊಳಗಾದವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಆನ್ಲೈನ್ ವಂಚನೆ ಪ್ರಕರಣಗಳ ಭೇದಿಸಿದ ಕುರಿತು ವಿಜಯಪುರ ಎಸ್ಪಿ ಎಚ್ ಡಿ ಆನಂದಕುಮಾರ್ ಮಾಹಿತಿ ನೀಡಿದ್ದಾರೆ.

ಸಿಇಎನ್ ಇನ್ಸಪೆಕ್ಟರ್ ರಮೇಶ ಅವಜಿ ನೇತೃತ್ವದಲ್ಲಿ ನಡೆದಿರೋ ಕಾರ್ಯಾಚರಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಎಸ್ಪಿ ಆನಂದಕುಮಾರ್, ಪ್ರಕರಣ ಭೇದಿಸಿದತಂಡಕ್ಕೆ ನಗದು ಬಹುಮಾನ ನೀಡಿ ಶ್ಲಾಘಿಸಿದ್ದಾರೆ.

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!