AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು?

ವಿಜಯಪುರ ನಗರದಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ದಿವಟಗೇರಿ ಗಲ್ಲಿಯಲ್ಲಿ ಮಹಿಳೆಯೊಬ್ಬರ ಮೇಲೆ ಅಮಾನುಷವಾಗಿ ದಾಳಿ ನಡೆಸಿ ಕಿವಿ ಕತ್ತರಿಸಿ ಚಿನ್ನದ ಮಾಂಗಲ್ಯ ಮತ್ತು ಕಿವಿಯೋಲೆಯನ್ನು ಮುಸುಕುಧಾರಿಗಳು ಕಳವು ಮಾಡಿರುವಂತಹ ಘಟನೆ ನಡೆದಿದೆ. ಆ ಮೂಲಕ ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ ಮುಂದುವರಿದಿದೆ.

ಸರಗಳ್ಳರ ಹಾವಳಿಗೆ ಮಹಿಳೆಯ ಕಿವಿ ಕಟ್; ಹೊಲಿಗೆ ಹಾಕಿದ ವೈದ್ಯರು: ಆಗಿದ್ದೇನು?
ಹಲ್ಲೆಗೊಳಗಾದ ಮಹಿಳೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Dec 27, 2025 | 4:55 PM

Share

ವಿಜಯಪುರ, ಡಿಸೆಂಬರ್​ 27: ವಿಜಯಪುರ ನಗರದಲ್ಲಿ ಸರಗಳ್ಳರ (Chain Snatching) ಹಾವಳಿ ಮುಂದುವರಿದಿದೆ. ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಮಹಿಳೆ (woman) ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿರುವಂತಹ ಘಟನೆ ವಿಜಯಪುರ ನಗರದ ದಿವಟಗೇರಿ ಗಲ್ಲಿಯಲ್ಲಿ ಶುಕ್ರವಾರ ನಡೆದಿದೆ. ಕಲಾವತಿ ಗಾಯಕವಾಡ್(45) ಹಲ್ಲೆಗೊಳಗಾದ ಮಹಿಳೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ನಡೆದದ್ದೇನು?

ಕಲಾವತಿ ಗಾಯ್ಕವಾಡ್​​ ಹಾಲು ತರಲು ಅಂಗಡಿಗೆ ತೆರಳುತ್ತಿದ್ದರು. ಈ ವೇಳೆ ಮಹಿಳೆ ಮೇಲೆ ಹಲ್ಲೆ ಮಾಡಿ ಇಬ್ಬರು ಮುಸುಕುಧಾರಿಗಳು ಮಾಂಗಲ್ಯ ಸರ ಹಾಗೂ ಕಿವಿಯೋಲೆಗಳನ್ನು ಕಿತ್ತುಕೊಂಡು ಹೋಗಿದ್ದಾರೆ. ಕಿವಿಯೋಲೆ ಕಿತ್ತುಕೊಳ್ಳುವ ವೇಳೆ ಕಲಾವತಿ ಅವರ ಕಿವಿ ಕತ್ತರಿಸಿದೆ. ಮುಖ, ಬಾಯಿಗೂ ಹಲ್ಲೆ ಮಾಡಿರುವ ಕಳ್ಳರು 10 ಗ್ರಾಂ ಚಿನ್ನದ ಮಾಂಗಲ್ಯ ಸರ, 1 ಗ್ರಾಂ ಚಿನ್ನದ ಕಿವಿಯೋಲೆ ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಇದನ್ನೂ ಓದಿ: Video: 4.5 ಲಕ್ಷ ರೂ. ಮೌಲ್ಯದ ಮೂರು ಹಸುಗಳ ಕಳ್ಳತನ, ಸಿಸಿಟಿವಿ ವಿಡಿಯೋ ವೈರಲ್

ಗಾಂಜಾ ಮತ್ತಿನಲ್ಲಿ ಇಬ್ಬರು ಯುವಕರು ಮುಖಕ್ಕೆ ಮುಖವಾಡ ಹಾಕಿಕೊಂಡು ಕಲಾವತಿ ಅವರ ಮೇಲೆ ಅಮಾನುಷ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಸದ್ಯ ಕಲಾವತಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಕತ್ತರಿಸಿದ ಕಿವಿಗೆ ಸ್ಟಿಚ್ ಹಾಕಿ ಚಿಕಿತ್ಸೆ ನೀಡಲಾಗಿದೆ.

ಖೋಟಾನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳ ಸೆರೆ

ಖೋಟಾನೋಟು ಚಲಾವಣೆ ಮಾಡುತ್ತಿದ್ದ ಐವರು ಆರೋಪಿಗಳನ್ನು ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಅರಸೀಕೆರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ನರೇಂದ್ರ ಪ್ರಸಾದ್(32), ಬಿ.ಬಾಬು(28), ಟಿ.ಕುಮಾರಸ್ವಾಮಿ(40), ಮೊಹಮ್ಮದ್ ಅಖಿಲ್(21) ಮತ್ತು ಮೊಹಮ್ಮದ್ ರಿಯಾನ್(22) ಬಂಧಿತರು.

ಅರಸೀಕೆರೆ ಪೊಲೀಸರಿಂದ ಖೋಟಾನೋಟು ಅಡ್ಡೆಯ ಮೇಲೆ ಕಾರ್ಯಾಚರಣೆ ಮಾಡಲಾಗಿದೆ. 500 ರೂ. ಮುಖಬೆಲೆಯ 92 ಖೋಟಾನೋಟು ಹಾಗೂ ಒಂದು ಆಟೋ ವಶಕ್ಕೆ ಪಡೆಯಲಾಗಿದೆ. ಯುವಕರೇ ಹೆಚ್ಚಾಗಿ ಭಾಗಿಯಾಗಿದ್ದು, ಜಾತ್ರೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಗ್ಯಾಂಗ್ ಕಟ್ಟಿಕೊಂಡಿದ್ದಾರೆ. ಹೀಗಾಗಿ ಇನ್ನಷ್ಟು ಸ್ಥಳಗಳ ಮೇಲೆ ಪೊಲೀಸರು ದಾಳಿ‌ ಮಾಡಿದ್ದಾರೆ.

ಇದನ್ನೂ ಓದಿ: ಕಾಕನೂರು SBI ದರೋಡೆ ಕೇಸ್​​: ಮತ್ತಿಬ್ಬರು ಆರೋಪಿಗಳು ಲಾಕ್​​; ಹಣ, ಬಂಗಾರ ಜಪ್ತಿ

ಅರಸೀಕೆರೆ ದಂಡಿ ದುರ್ಗಮ್ಮನ ಜಾತ್ರೆಯಲ್ಲಿ ಆರೋಪಿಗಳು ಖೋಟಾನೋಟು ಚಲಾವಣೆ ಮಾಡಿದ್ದಾರೆ.  ಖೋಟಾನೋಟು ಚಲಾವಣೆ ಮಾಡುತ್ತಿದ್ದರು ಎಂದು ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!