AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Babaladi Bhavishya: ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ; ಬಬಲಾದಿ ಸದಾಶಿವ ಮುತ್ಯಾನ ಕಾಲಜ್ಞಾನ ಭವಿಷ್ಯ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿ ಹೊಳೆಬಬಲಾದಿಯ ಚಂದ್ರಗಿರಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯಲ್ಲಿ ಶ್ರೀಮಠದ ಮಠಾಧೀಶರಾದ ಸಿದ್ರಾಮಯ್ಯ ಅವರು ಕಾಲಜ್ಞಾನದ ಭವಿಷ್ಯ ನುಡಿದಿದ್ದಾರೆ. ಸದಾಶಿವ ಮುತ್ಯಾನ ಮಠದಲ್ಲಿ ಈ ವರೆಗೆ ನುಡಿರುವ ಕಾಲಜ್ಞಾನದ ಭವಿಷ್ಯ ಸುಳ್ಳಾಗಿಲ್ಲ ಎಂಬುದು ಈ ಭಾಗದ ಜನರ ನಂಬಿಕೆ. ಹೀಗಾಗಿ ಸಿದ್ರಾಮಯ್ಯ ಶ್ರೀಗಳು ನುಡಿದ ಈ ಬಾರಿಯ ಕಾಲಜ್ಞಾನವನ್ನೂ ಹಲವರು ಹಲವು ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.

ಅಶೋಕ ಯಡಳ್ಳಿ, ವಿಜಯಪುರ
| Edited By: Rakesh Nayak Manchi|

Updated on: Mar 12, 2024 | 7:25 PM

Share

ವಿಜಯಪುರ, ಮಾ.12: 2024 ರಲ್ಲಿ ಉತ್ತಮ ಅರ್ಹ ವ್ಯಕ್ತಿಯ ಮರ್ದನ ಆಕೈತಿ, ಉತ್ತಮ ವ್ಯಕ್ತಿಯ ಗೆಲುವೂ ಆಕೈತಿ. ಗಡಿ ಕಾಯುವ ಯೋಧರಿಗೆ ನೋವು ಉಂಟಾಕೈತಿ, ಧರ್ಮ ಧರ್ಮಗಳ ಮಧ್ಯೆ ಕಿತ್ತಾಟ ಐತಿ.. ಇದು ವಿಜಯಪುರ (Vijayapura) ಜಿಲ್ಲೆಯ ಬಬಲೇಶ್ವರ ತಾಲೂಕಿ ಹೊಳೆಬಬಲಾದಿಯ (Babaladi) ಚಂದ್ರಗಿರಿ ಶ್ರೀ ಸದಾಶಿವ ಮುತ್ಯಾನ ಜಾತ್ರೆಯಲ್ಲಿ ಶ್ರೀಮಠದ ಮಠಾಧೀಶರಾದ ಸಿದ್ರಾಮಯ್ಯ ಅವರು ನುಡಿದ ಕಾಲಜ್ಞಾನದ ಭವಿಷ್ಯ.

ರಾಜಕೀಯ ಗೊಂದಲ ಉಂಟಾಗಲಿದೆ. ಅವರವರಲ್ಲೇ ಕಾಲು ಎಳೆಯುವ ಜನರು ಹೆಚ್ಚಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ರಾಜಕೀಯ ಸಂಘರ್ಷ ಹೆಚ್ಚಲಿದೆ ಎಂದಿರುವ ಕಾಲಜ್ಞಾನದ ಭವಿಷ್ಯ, ಸಾಧಾರಣ ಮಳಿ ಐತಿ, ಬೆಳಿಗೆ ಕೀಟಬಾಧೆ ಹೆಚ್ಚೈತಿ, ಮಕ್ಕಳಿಗೆ ರೋಗಬಾಧೆ ಹೆಚ್ಚು, ಕಣ್ಣಿನ ಕಾಯಿಲೆ ಕಾಡುತ್ತದೆ. ಬರವೂ ಇದೆ, ಕೇಡೂ ಇದೆ. ಭಯೋತ್ಪಾದನೆ, ನೈಸಗಿರ್ಕ ವಿಕೋಪವೂ ಇರಲಿದೆ. ಜೇಷ್ಠ ಮಾಸದಲ್ಲಿ ಲಿಂಗ ಸಮಾನತೆ ಇರಲಿದೆ ಎಂದೂ ಭವಿಷ್ಯ ನಡಿದಿದ್ದಾರೆ.

ಇದನ್ನೂ ಓದಿ: ಈ ಬಾರಿ ದೇಶಕ್ಕೆ ಮಹಿಳಾ ಪ್ರಧಾನಿ; ಸ್ಫೋಟಕ ಭವಿಷ್ಯ ನುಡಿದ ನೊಣವಿನಕೆರೆ ಯಶ್ವಂತ ಗುರೂಜಿ

ಸದಾಶಿವ ಮುತ್ಯಾನ ಮಠದಲ್ಲಿ ಈ ವರೆಗೆ ನುಡಿರುವ ಕಾಲಜ್ಞಾನದ ಭವಿಷ್ಯ ಸುಳ್ಳಾಗಿಲ್ಲ ಎಂಬುದು ಈ ಭಾಗದ ಜನರ ನಂಬಿಕೆ. ಹೀಗಾಗಿ ಸಿದ್ರಾಮಯ್ಯ ಶ್ರೀಗಳು ನುಡಿದಿರುವ ಈ ಬಾರಿಯ ಕಾಲಜ್ಞಾನವನ್ನೂ ಹಲವರು ಹಲವು ರೀತಿಯಲ್ಲಿ ವಿಶ್ಲೇಷಿಸುತ್ತಿದ್ದಾರೆ.

ಕ್ರೋಧಿನಾಮ ಸಂವತ್ಸರದಲ್ಲಿ ಕೋಪ ಹೆಚ್ಚಾಗುತ್ತದೆ, ಸಿಟ್ಟಿನವರು ಹೆಚ್ಚಾಗುತ್ತಾರೆ. ವ್ಯಾಪಾರಸ್ಥರಿಗೆ ಮಧ್ಯಮ ಫಲವಿದೆ. ಮಳೆ ಬೆಳೆ ಫಲ ಸಸಿಗಳು ಖಂಡ ಮಂಡಳವಾಗುತ್ತದೆ. ಧವಸ ಧಾನ್ಯಗಳು ರಸಗಳು ಮಾರಾಟವಾಗುತ್ತವೆ ಎಂದು ಭವಿಷ್ಯ ನುಡಿಯಲಾಗಿದೆ.

ಉತ್ತರ ಭಾಗಕ್ಕೆ ಬರಗಾಲ ಹಾಗೂ ಕೇಡಾಗುತ್ತದೆ. ದೊಡ್ಡ ದೊಡ್ಡ ಮಹಾನರ ಯೋಗ ಅಳಿಯಲಿವೆ. ಕುಲ ಜಾತಿಗಳಲ್ಲಿ ಕಹ ಜಾಸ್ತಿ ಇರಲಿದೆ. ಶಿಶುಗಳಿಗೆ ಆರೋಗ್ಯ ಬಾಧೆ ಹೆಚ್ಚಾಗುತ್ತದೆ. ಆಡಂಬರದ ಜೀವನ ನಡೆಸುವವರು ಸಾಲದ ಬಾಧೆ ಎದುರಿಸಬೇಕಾಗುತ್ತದೆ. ಸಕ್ಕರೆ, ಬೆಣ್ಣೆ, ಕುಸುಬೆ, ಸೇಂಗಾ ಬೆಲೆ ಹೆಚ್ಚುತ್ತವೆ ಎಂದು ಕಾಲಜ್ಞಾನ ಭವಿಷ್ಯದಲ್ಲಿ ನುಡಿಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಶೋಕ ಯಡಳ್ಳಿ, ವಿಜಯಪುರ
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ