AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮತಿ ಇಲ್ಲದೇ ಸೇವಾಲಾಲ್ ವೃತ್ತ ನಿರ್ಮಾಣ:ತೆರವಿಗೆ ಬಂದ ಅಧಿಕಾರಿಗಳ ಜತೆ ವಾಗ್ವಾದ, ಬಿಗುವಿನ ವಾತಾವರಣ

ಅನುಮತಿಯಿಲ್ಲದೆ ಸೇವಾಲಾಲ್ ವೃತ ನಿರ್ಮಾಣ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಬಂಜಾರಾ ಸಮುದಾಯದ ಮುಖಂಡರು ನಡುವೆ ವಾಗ್ವಾದ ಶುರುವಾದ ಹಿನ್ನಲೆ ಸ್ಥಳದಲ್ಲಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ಕಾಂ ಹೂಡಿದ್ದಾರೆ. ಸದ್ಯ ವೃತ್ತ ತೆರವಿಗೆ ಆಕ್ರೋಶ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಪಸ್ ತೆರಳಿದ್ದಾರೆ.

ಅನುಮತಿ ಇಲ್ಲದೇ ಸೇವಾಲಾಲ್ ವೃತ್ತ ನಿರ್ಮಾಣ:ತೆರವಿಗೆ ಬಂದ ಅಧಿಕಾರಿಗಳ ಜತೆ ವಾಗ್ವಾದ, ಬಿಗುವಿನ ವಾತಾವರಣ
ವಿಜಯಪುರದಲ್ಲಿ ಸೇವಾಲಾಲ್ ವೃತ್ತ ತೆರವಿಗೆ ಬಂದ ಅಧಿಕಾರಿಗಳ ಜತೆ ಬಂಜಾರ ಸಮುದಾಯದವರ ವಾಗ್ವಾದ
ಅಶೋಕ ಯಡಳ್ಳಿ, ವಿಜಯಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on:Feb 16, 2024 | 9:47 PM

Share

ವಿಜಯಪುರ, ಫೆ.16: ಸೇವಾಲಾಲ್ ವೃತ ನಿರ್ಮಾಣ ವಿಚಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಿಜಯಪುರ (Vijayapura) ನಗರದ ಬಂಜಾರಾ ಕ್ರಾಸ್​ನಲ್ಲಿ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ(ಫೆ.15) ಸೇವಾಲಾಲ್ ಜಯಂತಿ (sevalal jayanti) ಹಿನ್ನೆಲೆಯಲ್ಲಿ ಬಂಜಾರಾ ಸಮುದಾಯದ ಯುವಕರು ಸೇವಾಲಾಲ್ ವೃತ್ತ ನಿರ್ಮಾಣ ಮಾಡಿದ್ದರು. ಇದೀಗ ಅನುಮತಿ ಪಡೆದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ತೆರವಿಗೆ ಬಂದ ಹಿನ್ನಲೆ ತೆರವಿಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಸ್ಥಳದಲ್ಲಿ ಮುಕ್ಕಾಂ ಹೂಡಿದ ಹಿರಿಯ ಪೊಲೀಸ್ ಅಧಿಕಾರಿಗಳು

ಇನ್ನು ವೃತ್ತ ತೆರವು ವಿಚಾರವಾಗಿ ಅಧಿಕಾರಿಗಳು ಹಾಗೂ ಬಂಜಾರಾ ಸಮುದಾಯದ ಮುಖಂಡರು ನಡುವೆ ವಾಗ್ವಾದ ಶುರುವಾದ ಹಿನ್ನಲೆ ಸ್ಥಳದಲ್ಲಿಯೇ  ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ಕಾಂ ಹೂಡಿದ್ದಾರೆ. ಸದ್ಯ ವೃತ್ತ ತೆರವಿಗೆ ಆಕ್ರೋಶ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಪಸ್ ತೆರಳಿದ್ದಾರೆ. ನಾಳೆ ಬಂಜಾರಾ ಸಮುದಾಯದ ಮುಖಂಡರು ಸಭೆ ಮಾಡಲು ನಿರ್ಧಾರ ಮಾಡಿದ್ದಾರೆ. ಇನ್ನು ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೆ ಎಂಬುದನ್ನು ಕಾದುನೋಡಬೇಕಿ್ದೆ.

ಇದನ್ನೂ ಓದಿ:ಸಿದ್ದರಾಮಯ್ಯ ಸಂಪುಟದಲ್ಲಿ ಲಂಬಾಣಿ ಶಾಸಕರಿಗಿಲ್ಲ ಸ್ಥಾನ: ಸರ್ದಾರ್ ಸೇವಾಲಾಲ್ ಸ್ವಾಮೀಜಿ ಆಕ್ರೋಶ

ವಿಜಯಪುರದಲ್ಲಿ ಸಂತಸೇವಾಲಾಲ್​​ರ ಜಯಂತಿ ಆಚರಣೆ

ವಿಜಯಪುರ: ಇಂದು ಸಂತ ಸೇವಾಲಾಲ್​ರ 285 ನೇ ಜಯಂತಿಯನ್ನು ಜಿಲ್ಲೆಯಲ್ಲಿ ಸಡಗರದಿಂದ ಆಚರಿಸಲಾಗಿತ್ತು. ಬಂಜಾರ ಸಮುದಾಯದ ಮೂಲ ಗುರುಗಳಾಗಿದ್ದ ಸೇವಾಲಾಲರು ನಗರದ ಪ್ರಮುಖ ರಸ್ತೆಗಳಲ್ಲಿ ಸೇವಾಲಾಲ ಭಾವಚಿತ್ರ ಮೆರವಣಿಗೆ ಮಾಡಿದ್ದು, ಮಹಿಳೆಯರು ಬಂಜಾರ ನೃತ್ಯ ಮಾಡಿದ್ದರು. ಅಷ್ಟೇ ಅಲ್ಲ, ಈ ಮಹಿಳೆಯರ ಕುಣಿತಕ್ಕೆ ವಿದೇಶೀ ಮಹಿಳೆ ಕೂಡ ಸಾಥ್ ನೀಡಿದ್ದರು. ಅದೇ ರೀತಿಯಾಗಿ ಧಾರವಾಡ ನಗರದಲ್ಲಿಯೂ ಕೂಡ ಸಂತ ಶ್ರೀ ಸೇವಾಲಾಲ್​ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ್ದು, ಅದರ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ಪ್ರಮುಖ ರಸ್ತೆ ಮೂಲಕ ಸೇವಾಲಾಲ್​​​ರ ಭಾವಚಿತ್ರ ​​ಮೆರವಣಿಗೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Fri, 16 February 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!