ಅನುಮತಿ ಇಲ್ಲದೇ ಸೇವಾಲಾಲ್ ವೃತ್ತ ನಿರ್ಮಾಣ:ತೆರವಿಗೆ ಬಂದ ಅಧಿಕಾರಿಗಳ ಜತೆ ವಾಗ್ವಾದ, ಬಿಗುವಿನ ವಾತಾವರಣ

ಅನುಮತಿಯಿಲ್ಲದೆ ಸೇವಾಲಾಲ್ ವೃತ ನಿರ್ಮಾಣ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಬಂಜಾರಾ ಸಮುದಾಯದ ಮುಖಂಡರು ನಡುವೆ ವಾಗ್ವಾದ ಶುರುವಾದ ಹಿನ್ನಲೆ ಸ್ಥಳದಲ್ಲಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ಕಾಂ ಹೂಡಿದ್ದಾರೆ. ಸದ್ಯ ವೃತ್ತ ತೆರವಿಗೆ ಆಕ್ರೋಶ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಪಸ್ ತೆರಳಿದ್ದಾರೆ.

ಅನುಮತಿ ಇಲ್ಲದೇ ಸೇವಾಲಾಲ್ ವೃತ್ತ ನಿರ್ಮಾಣ:ತೆರವಿಗೆ ಬಂದ ಅಧಿಕಾರಿಗಳ ಜತೆ ವಾಗ್ವಾದ, ಬಿಗುವಿನ ವಾತಾವರಣ
ವಿಜಯಪುರದಲ್ಲಿ ಸೇವಾಲಾಲ್ ವೃತ್ತ ತೆರವಿಗೆ ಬಂದ ಅಧಿಕಾರಿಗಳ ಜತೆ ಬಂಜಾರ ಸಮುದಾಯದವರ ವಾಗ್ವಾದ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 16, 2024 | 9:47 PM

ವಿಜಯಪುರ, ಫೆ.16: ಸೇವಾಲಾಲ್ ವೃತ ನಿರ್ಮಾಣ ವಿಚಾರದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ವಿಜಯಪುರ (Vijayapura) ನಗರದ ಬಂಜಾರಾ ಕ್ರಾಸ್​ನಲ್ಲಿ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಿನ್ನೆ(ಫೆ.15) ಸೇವಾಲಾಲ್ ಜಯಂತಿ (sevalal jayanti) ಹಿನ್ನೆಲೆಯಲ್ಲಿ ಬಂಜಾರಾ ಸಮುದಾಯದ ಯುವಕರು ಸೇವಾಲಾಲ್ ವೃತ್ತ ನಿರ್ಮಾಣ ಮಾಡಿದ್ದರು. ಇದೀಗ ಅನುಮತಿ ಪಡೆದಿಲ್ಲ ಎಂದು ಪಾಲಿಕೆ ಅಧಿಕಾರಿಗಳು ತೆರವಿಗೆ ಬಂದ ಹಿನ್ನಲೆ ತೆರವಿಗೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಸ್ಥಳದಲ್ಲಿ ಮುಕ್ಕಾಂ ಹೂಡಿದ ಹಿರಿಯ ಪೊಲೀಸ್ ಅಧಿಕಾರಿಗಳು

ಇನ್ನು ವೃತ್ತ ತೆರವು ವಿಚಾರವಾಗಿ ಅಧಿಕಾರಿಗಳು ಹಾಗೂ ಬಂಜಾರಾ ಸಮುದಾಯದ ಮುಖಂಡರು ನಡುವೆ ವಾಗ್ವಾದ ಶುರುವಾದ ಹಿನ್ನಲೆ ಸ್ಥಳದಲ್ಲಿಯೇ  ಹಿರಿಯ ಪೊಲೀಸ್ ಅಧಿಕಾರಿಗಳು ಮುಕ್ಕಾಂ ಹೂಡಿದ್ದಾರೆ. ಸದ್ಯ ವೃತ್ತ ತೆರವಿಗೆ ಆಕ್ರೋಶ ಹಿನ್ನೆಲೆಯಲ್ಲಿ ಅಧಿಕಾರಿಗಳು ವಾಪಸ್ ತೆರಳಿದ್ದಾರೆ. ನಾಳೆ ಬಂಜಾರಾ ಸಮುದಾಯದ ಮುಖಂಡರು ಸಭೆ ಮಾಡಲು ನಿರ್ಧಾರ ಮಾಡಿದ್ದಾರೆ. ಇನ್ನು ಈ ವಿಚಾರ ಎಲ್ಲಿಗೆ ಹೋಗಿ ನಿಲ್ಲುತ್ತೆ ಎಂಬುದನ್ನು ಕಾದುನೋಡಬೇಕಿ್ದೆ.

ಇದನ್ನೂ ಓದಿ:ಸಿದ್ದರಾಮಯ್ಯ ಸಂಪುಟದಲ್ಲಿ ಲಂಬಾಣಿ ಶಾಸಕರಿಗಿಲ್ಲ ಸ್ಥಾನ: ಸರ್ದಾರ್ ಸೇವಾಲಾಲ್ ಸ್ವಾಮೀಜಿ ಆಕ್ರೋಶ

ವಿಜಯಪುರದಲ್ಲಿ ಸಂತಸೇವಾಲಾಲ್​​ರ ಜಯಂತಿ ಆಚರಣೆ

ವಿಜಯಪುರ: ಇಂದು ಸಂತ ಸೇವಾಲಾಲ್​ರ 285 ನೇ ಜಯಂತಿಯನ್ನು ಜಿಲ್ಲೆಯಲ್ಲಿ ಸಡಗರದಿಂದ ಆಚರಿಸಲಾಗಿತ್ತು. ಬಂಜಾರ ಸಮುದಾಯದ ಮೂಲ ಗುರುಗಳಾಗಿದ್ದ ಸೇವಾಲಾಲರು ನಗರದ ಪ್ರಮುಖ ರಸ್ತೆಗಳಲ್ಲಿ ಸೇವಾಲಾಲ ಭಾವಚಿತ್ರ ಮೆರವಣಿಗೆ ಮಾಡಿದ್ದು, ಮಹಿಳೆಯರು ಬಂಜಾರ ನೃತ್ಯ ಮಾಡಿದ್ದರು. ಅಷ್ಟೇ ಅಲ್ಲ, ಈ ಮಹಿಳೆಯರ ಕುಣಿತಕ್ಕೆ ವಿದೇಶೀ ಮಹಿಳೆ ಕೂಡ ಸಾಥ್ ನೀಡಿದ್ದರು. ಅದೇ ರೀತಿಯಾಗಿ ಧಾರವಾಡ ನಗರದಲ್ಲಿಯೂ ಕೂಡ ಸಂತ ಶ್ರೀ ಸೇವಾಲಾಲ್​ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಿದ್ದು, ಅದರ ಅಂಗವಾಗಿ ನಗರದ ಜಿಲ್ಲಾಧಿಕಾರಿ ಕಚೇರಿಯಿಂದ ನಗರದ ಪ್ರಮುಖ ರಸ್ತೆ ಮೂಲಕ ಸೇವಾಲಾಲ್​​​ರ ಭಾವಚಿತ್ರ ​​ಮೆರವಣಿಗೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:40 pm, Fri, 16 February 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us