Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು 14 ಲಕ್ಷ ರೂ. ಕಳೆದುಕೊಂಡ ನಿವೃತ್ತ ನೌಕರ

ವಿಜಯಪುರದ ಸಿಂದಗಿಯ ನಿವೃತ್ತ ನೌಕರ ಬಸವರಾಜ ಹವಾಲ್ದಾರ್ ಅವರು ತಮ್ಮ ಮೊಮ್ಮಕ್ಕಳಿಗೆ ಮೊಬೈಲ್ ನೀಡಿದ್ದರಿಂದ 14 ಲಕ್ಷ ರೂಪಾಯಿಗಳನ್ನು ಸೈಬರ್ ವಂಚಕರಿಂದ ಕಳೆದುಕೊಂಡಿದ್ದಾರೆ. ಎಪಿಕೆ ಫೈಲ್ ಮೂಲಕ ಡೌನ್‌ಲೋಡ್ ಆದ ಅಪ್ಲಿಕೇಶನ್ ಮೂಲಕ ಖಾತೆಯನ್ನು ಹ್ಯಾಕ್ ಮಾಡಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಮತ್ತು ಮಕ್ಕಳಿಗೆ ಮೊಬೈಲ್ ನೀಡುವಾಗ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಿದ್ದಾರೆ.

ವಿಜಯಪುರ: ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು 14 ಲಕ್ಷ ರೂ. ಕಳೆದುಕೊಂಡ ನಿವೃತ್ತ ನೌಕರ
ವಿಜಯಪುರ ಸಿಇಎನ್ ಪೊಲೀಸ್​ ಠಾಣೆ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ವಿವೇಕ ಬಿರಾದಾರ

Updated on:Nov 18, 2024 | 4:14 PM

ವಿಜಯಪುರ, ನವೆಂಬರ್​ 18: ಮಕ್ಕಳ ಕೈಯಲ್ಲಿ ಮೊಬೈಲ್ ಕೊಟ್ಟು ನಿವೃತ್ತ ನೌಕರರೊಬ್ಬರು 14 ಲಕ್ಷ ರೂ. ಕಳೆದುಕೊಂಡಿದ್ದಾರೆ. ಸಿಂದಗಿ ಪಟ್ಟಣದ (Sindagi) ಬಸವರಾಜ್ ಹವಾಲ್ದಾರ್‌ ಅವರ ಖಾತೆಯಿಂದ ಸೈಬರ್ ಖದೀಮರು (Cyber Crime)  14 ಲಕ್ಷ ರೂಪಾಯಿಗಳನ್ನು ಲಪಟಾಯಿಸಿದ್ದಾರೆ. ಬಸವರಾಜ ಹವಾಲ್ದಾರ್ ಮತ್ತು ಅವರ ಪತ್ನಿಯ ಜಂಟಿ ಖಾತೆಯಲ್ಲಿದ್ದ 14 ಲಕ್ಷ ರೂ. ವಂಚಕರು ದೋಚಿದ್ದಾರೆ.

ಇವರ ಮೊಬೈಲ್​ನಲ್ಲಿದ್ದ ಆನ್​ಲೈನ್ ಬ್ಯಾಂಕಿಗ್​ಗೆ ಬೆನಿಫೀಷರ್ ಆ್ಯಡ್ ಮಾಡಿ ಅದರ ಮೂಲಕ ಹಣವನ್ನು ವರ್ಗಾಯಿಸಿಕೊಂಡಿದ್ದಾರೆ. ಯಾವಾಗ ಖಾತೆಯಲ್ಲಿದ್ದ ಲಕ್ಷ ಲಕ್ಷ ಹಣ ಮಾಯವಾಯ್ತು, ಬಸವರಾಜ ಅವರು ವಿಜಯಪುರ ಸಿಇಎನ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಂತರ, ಬ್ಯಾಂಕ್​ ಖಾತೆಯನ್ನು ಲಾಕ್ ಮಾಡಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಿದ ಸಿಇಎನ್ ಪೊಲೀಸರು, ಬಸವರಾಜ ಅವರ ಮೊಬೈಲ್​ ಪರಿಶೀಲಿಸಿದಾಗ ಎಪಿಕೆ ಪೈಲ್ ಮೂಲಕ ಆ್ಯಪ್ ಡೌನ್​ಲೋಡ್​ ಮಾಡಿದ್ದನ್ನು ಕಂಡಿದ್ದಾರೆ. ನಂತರ, ತಜ್ಞರಿಂದ ಪರಿಶೀಲನೆ ನಡೆಸಿದಾಗ, ಎಪಿಕೆಯಿಂದ ಡೌನ್​ಲೋಡ್​ ಮಾಡಿಕೊಂಡ ಆ್ಯಪ್​ನಿಂದಲೇ ಹಣ ದೋಚಲಾಗಿದೆ ಎಂಬುವುದನ್ನು ತಿಳಿದಿದ್ದಾರೆ.

ಇದನ್ನೂ ಓದಿ: ವಿಜಯಪುರದ ಸೈಬರ್ ಕ್ರೈಂ ಉಲ್ಲೇಖಿಸಿ ಕೀ ಬಾತ್ ಮೂಲಕ ಜಾಗೃತಿ ಮೂಡಿಸಿದ ಮೋದಿ

ಪೊಲೀಸ್ ಆಧಿಕಾರಿಗಳ ಪ್ರಕಾರ ಎಪಿಕೆ ಫೈಲ್ ಮೂಲಕ ಹ್ಯಾಕರಗಳು ಆ್ಯಪ್​ಗಳನ್ನು ಕಳುಹಿಸುತ್ತಾರೆ. ಎಪಿಕೆ ಪೈಲ್ ಓಪನ್ ಮಾಡಿ ಅದರಲ್ಲಿರುವ ಆ್ಯಪ್ ಡೌನ್​ಲೋಡ್ ಮಾಡಿದರೆ ಮುಗಿಯುತು ಕಥೆ. ಅದರಲ್ಲಂತೂ, ಮಕ್ಕಳ ಕೈಯಲ್ಲಿ ಮೊಬೈಲ್ ಇದ್ದಾಗ ಅಪಾಯಕಾರಿ ಎಪಿಕೆ ಫೈಲ್​ಗಳು ಆನಲೈನ್​ ಮೂಲಕ ಬರುತ್ತವೆ. ಗೇಮ್ ಆಡುವಾಗ ವಿಡಿಯೋ ನೋಡುವಾಗ, ಬರುವ ಎಪಿಕೆ ಫೈಲ್​ಗಳನ್ನು ಮಕ್ಕಳು ಡೌನ್​ಲೋಡ್ ಮಾಡುತ್ತಾರೆ. ಮುಂದೆ ನಡೆಯುವುದೇ ಅನಾಹುತಕಾರಿ ಸಂಗತಿ.

ಆ್ಯಪ್​ ಡೌನ್​ಲೋಡ್​ ಆಗಿದ್ದು ಹೇಗೆ?

ಬಸವರಾಜ ಹವಾಲ್ದಾರ್ ಪ್ರಕರಣದಲ್ಲೂ ಇದೇ ಆಗಿದ್ದು. ಮನೆಯಲ್ಲಿ ಮೊಮ್ಮಕ್ಕಳ ಕೈಯ್ಯಲ್ಲಿ ಮೊಬೈಲ್ ಕೊಟ್ಟಾಗ ಎಪಿಕೆ ಪೈಲ್​ನಲ್ಲಿರುವ ಆ್ಯಪ್​ ಡೌನ್​ಲೋಡ್ ಆಗಿದೆ. ಬಸವರಾಜ ಹವಾಲ್ದಾರ್​ ಅವರ ಮೊಬೈಲ್ ಸೈಬರ್ ವಂಚಕರ ವಶವಾಗಿದೆ. ಆಗ, ಇವರ ಅಕೌಂಟ್​ನಲ್ಲಿರುವ ಹಣವನ್ನೆಲ್ಲ ವರ್ಗಾವಣೆ ಮಾಡಿಕೊಂಡಿರುವುದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ. ಸಿಇಎನ್ ಪೊಲೀಸರು ಸೈಬರ್ ಖದೀಮರ ಪತ್ತೆಗೆ ಮುಂದಾಗಿದ್ದಾರೆ.

ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರಸನ್ನ ದೇಸಾಯಿ ಮಾತನಾಡಿ, ಎಪಿಕೆ ಪೈಲ್​​ಗಳು ಡೌನ್‌ಲೋಡ್ ಆಗುವ ಸಾಧ್ಯತೆ ಇರುತ್ತದೆ. ಬಳಿಕ ನಿಮ್ಮ ಮೊಬೈಲ್, ಬ್ಯಾಂಕ್‌ಗಳು ಹ್ಯಾಕ್ ಆಗುವ ಸಾಧ್ಯತೆ ಇರುತ್ತವೆ. ಹೀಗಾಗಿ ಮಕ್ಕಳ ಕೈಯಲ್ಲಿ ಮೊಬೈಲ್ ನೀಡಬೇಡಿ ಎಂದು ಮನವಿ ಮಾಡಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:45 pm, Mon, 18 November 24

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!