AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿವಾದ: ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ವಿಜಯಪುರ ಡಿಸಿ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರಗೊಂಡಿದ್ದು, ನೋಟಿಸ್​ ನೀಡಿದ್ದಕ್ಕೆ ರೈತರು ಆಕ್ರೋಶಗೊಂಡಿದ್ದಾರೆ. ಇನ್ನು ಇದನ್ನು ಪರಿಶೀಲನೆ ಬಂದಿರುವ ಬಿಜೆಪಿ ನಿಯೋಗ ಸಹ ರೈತರ ಜತೆ ಚರ್ಚಿಸಿ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಭೂಬಾಲನ್ ಮಾಧ್ಯಮಗಳ ಜೊತೆ ಮಾತನಾಡಿ ಕೆಲ ಮಾಹಿತಿ ಹಂಚಿಕೊಂಡಿದ್ದು, ಅದು ಈ ಕೆಳಗಿನಂತಿದೆ.

ವಕ್ಫ್​ ವಿವಾದ: ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ವಿಜಯಪುರ ಡಿಸಿ
ವಿಜಯಪುರ ಡಿಸಿ ಟಿ ಭೂಬಾಲನ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Oct 30, 2024 | 10:50 AM

Share

ವಿಜಯಪುರ, (ಅಕ್ಟೋಬರ್ 29): ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ (Wakf Land Dispute) ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇಂದು (ಅಕ್ಟೋಬರ್ 29) ಬಿಜೆಪಿ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ ಜಿಲ್ಲಾಧಿಕರಿ ಭೂಬಾಲನ್ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭೂಬಾಲನ್, ಸಚಿವ ಜಮಿರ್ ಅಹಮ್ಮದ್ ಖಾನ್ ಅವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ನಿಯೋಗ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್, ವಕ್ಫ್​ ಸಚಿವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವ ಜಮೀರ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ. ನೋಟಿಸ್ ಕೊಡದೆಯೂ ಇಂದೀಕರಣ ಆದ ಉದಾಹರಣೆ ಇವೆ ಎಂದು ಸ್ಪಷ್ಟಪಸಿದರು.

ಇದನ್ನೂ ಓದಿ: ವಕ್ಫ್​ ವಿವಾದ: ಬಿಜೆಪಿ ತಂಡದ ಮುಂದೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ವಿಜಯಪುರ ಜಿಲ್ಲಾಧಿಕಾರಿ

ನೋಟಿಸ್ ಕೊಟ್ಟ ತಕ್ಷಣ ಖಾತಾ ಬದಲಾವಣೆ ಆಗುವುದಿಲ್ಲ. ಭೂಮಾಲೀಕರು ಹಾಗೂ ವಕ್ಫ್​ಗೆ ನಾವು ನೊಟೀಸ್ ಕೊಟ್ಟಿದ್ದೇವೆ. ಎರಡೂ ಪಾರ್ಟಿಗಳಿಗೆ ಕರೆದು ವಿಚಾರಣೆ ನಡೆಸುತ್ತೇವೆ. ಕಾಲಂ ನಂ.9ರಲ್ಲಿ ಹಾಗೂ ಮಾಲೀಕತ್ವ ಜಾಗದಲ್ಲಿ ವಕ್ಫ್ ಹೆಸರು ಹಾಕಿಲ್ಲ, 44 ಆಸ್ತಿಗಳಿಗೆ ನೋಟಿಸ್ ಕೊಡದೆ ಇಂದೀಕರಣ ಮಾಡಿದ್ದೇವೆ. ಆದರೆ ಅವರ ಮಾಲೀಕತ್ವ ಬದಲಾಗಲ್ಲ. ಇಂಡಿ ತಹಶೀಲ್ದಾರ್ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. 41 ಖಾತೆಗಳಿಗೆ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. 41 ಗಣಕೀಕರಣಗಳನ್ನೂ ಕ್ಯಾನ್ಸಲ್ ಮಾಡಿದ್ದೇವೆ. ನಾಳೆ ಪಹಣಿಯಿಂದ ವಕ್ಫ್​ ಹೆಸರು ಹೋಗಲಿದೆ ಎಂದು ಹೇಳಿದರು.

ಭವಿಷ್ಯದಲ್ಲಿ ಇಂತಹ ಸಮಸ್ಯೆ ಆಗಬಾರದೆಂದು ಸಚಿವರು ಟಾಸ್ಕ್​ಫೋರ್ಸ್ ರಚನೆ ಮಾಡಿದ್ದಾರೆ. 250 ಎಕರೆ ಭೂಮಿಗೆ ನೋಟಿಸ್ ಕೊಡಲಾಗಿದೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಎರಡು ಮೂರು ವರ್ಷಗಳ ಹಾಗೂ ಅದಕ್ಕೂ‌ ಮುಂಚೆ ಆದ ಇಂದೀಕರಣ ಪ್ರಕರಣಗಳ ಕುರಿತು ಸರ್ಕಾರ ನೀಡುವ ಸೂಚನೆ ಪಾಲನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Tue, 29 October 24

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್