AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್​ ವಿವಾದ: ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ವಿಜಯಪುರ ಡಿಸಿ

ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರಗೊಂಡಿದ್ದು, ನೋಟಿಸ್​ ನೀಡಿದ್ದಕ್ಕೆ ರೈತರು ಆಕ್ರೋಶಗೊಂಡಿದ್ದಾರೆ. ಇನ್ನು ಇದನ್ನು ಪರಿಶೀಲನೆ ಬಂದಿರುವ ಬಿಜೆಪಿ ನಿಯೋಗ ಸಹ ರೈತರ ಜತೆ ಚರ್ಚಿಸಿ ಬಳಿಕ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಜಿಲ್ಲಾಧಿಕಾರಿ ಭೂಬಾಲನ್ ಮಾಧ್ಯಮಗಳ ಜೊತೆ ಮಾತನಾಡಿ ಕೆಲ ಮಾಹಿತಿ ಹಂಚಿಕೊಂಡಿದ್ದು, ಅದು ಈ ಕೆಳಗಿನಂತಿದೆ.

ವಕ್ಫ್​ ವಿವಾದ: ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ವಿಜಯಪುರ ಡಿಸಿ
ವಿಜಯಪುರ ಡಿಸಿ ಟಿ ಭೂಬಾಲನ್
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on:Oct 30, 2024 | 10:50 AM

Share

ವಿಜಯಪುರ, (ಅಕ್ಟೋಬರ್ 29): ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ (Wakf Land Dispute) ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇಂದು (ಅಕ್ಟೋಬರ್ 29) ಬಿಜೆಪಿ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ ಜಿಲ್ಲಾಧಿಕರಿ ಭೂಬಾಲನ್ ಅವರನ್ನು ಭೇಟಿ ಮಾಡಿ ಮಾಹಿತಿ ಪಡೆದುಕೊಂಡರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಭೂಬಾಲನ್, ಸಚಿವ ಜಮಿರ್ ಅಹಮ್ಮದ್ ಖಾನ್ ಅವರ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ನಿಯೋಗ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯಪುರ ಜಿಲ್ಲಾಧಿಕಾರಿ ಭೂಬಾಲನ್, ವಕ್ಫ್​ ಸಚಿವರು ಒತ್ತುವರಿ ಜಾಗ ತೆರವುಗೊಳಿಸುವಂತೆ ಹೇಳಿದ್ದರು. ಸಚಿವ ಜಮೀರ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ. ಇಂದೀಕರಣ ಅಂದರೆ ಗಣಕೀಕರಣ ಸತತವಾಗಿ ನಡೆಯುತ್ತೆ. ಪ್ರತಿ ವರ್ಷವೂ ಗಣಕೀಕರಣ ಆಗಿವೆ. ನೋಟಿಸ್ ಕೊಡದೆಯೂ ಇಂದೀಕರಣ ಆದ ಉದಾಹರಣೆ ಇವೆ ಎಂದು ಸ್ಪಷ್ಟಪಸಿದರು.

ಇದನ್ನೂ ಓದಿ: ವಕ್ಫ್​ ವಿವಾದ: ಬಿಜೆಪಿ ತಂಡದ ಮುಂದೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ವಿಜಯಪುರ ಜಿಲ್ಲಾಧಿಕಾರಿ

ನೋಟಿಸ್ ಕೊಟ್ಟ ತಕ್ಷಣ ಖಾತಾ ಬದಲಾವಣೆ ಆಗುವುದಿಲ್ಲ. ಭೂಮಾಲೀಕರು ಹಾಗೂ ವಕ್ಫ್​ಗೆ ನಾವು ನೊಟೀಸ್ ಕೊಟ್ಟಿದ್ದೇವೆ. ಎರಡೂ ಪಾರ್ಟಿಗಳಿಗೆ ಕರೆದು ವಿಚಾರಣೆ ನಡೆಸುತ್ತೇವೆ. ಕಾಲಂ ನಂ.9ರಲ್ಲಿ ಹಾಗೂ ಮಾಲೀಕತ್ವ ಜಾಗದಲ್ಲಿ ವಕ್ಫ್ ಹೆಸರು ಹಾಕಿಲ್ಲ, 44 ಆಸ್ತಿಗಳಿಗೆ ನೋಟಿಸ್ ಕೊಡದೆ ಇಂದೀಕರಣ ಮಾಡಿದ್ದೇವೆ. ಆದರೆ ಅವರ ಮಾಲೀಕತ್ವ ಬದಲಾಗಲ್ಲ. ಇಂಡಿ ತಹಶೀಲ್ದಾರ್ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. 41 ಖಾತೆಗಳಿಗೆ ನೋಟಿಸ್ ಕೊಡದೆ ಗಣಕೀಕರಣ ಮಾಡಿದ್ದಾರೆ. 41 ಗಣಕೀಕರಣಗಳನ್ನೂ ಕ್ಯಾನ್ಸಲ್ ಮಾಡಿದ್ದೇವೆ. ನಾಳೆ ಪಹಣಿಯಿಂದ ವಕ್ಫ್​ ಹೆಸರು ಹೋಗಲಿದೆ ಎಂದು ಹೇಳಿದರು.

ಭವಿಷ್ಯದಲ್ಲಿ ಇಂತಹ ಸಮಸ್ಯೆ ಆಗಬಾರದೆಂದು ಸಚಿವರು ಟಾಸ್ಕ್​ಫೋರ್ಸ್ ರಚನೆ ಮಾಡಿದ್ದಾರೆ. 250 ಎಕರೆ ಭೂಮಿಗೆ ನೋಟಿಸ್ ಕೊಡಲಾಗಿದೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಈಗಾಗಲೇ ಕೊಟ್ಟಿರುವ ನೋಟಿಸ್​ಗಳನ್ನು ವಾಪಸ್ ಪಡೆಯುತ್ತೇವೆ. ಎರಡು ಮೂರು ವರ್ಷಗಳ ಹಾಗೂ ಅದಕ್ಕೂ‌ ಮುಂಚೆ ಆದ ಇಂದೀಕರಣ ಪ್ರಕರಣಗಳ ಕುರಿತು ಸರ್ಕಾರ ನೀಡುವ ಸೂಚನೆ ಪಾಲನೆ ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಭೂಬಾಲನ್ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:27 pm, Tue, 29 October 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!