AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್​, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ವಿಜಯಪುರ: ಭೀಮಾತೀರದ ಹಂತಕರಿಂದ ವಿಜಯಪುರ ಜಿಲ್ಲೆ ಕುಖ್ಯಾತಿಯನ್ನು ಪಡೆದ ಜಿಲ್ಲೆ. ಒಂದು ಕಾಲದಲ್ಲಿ ಇಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ, ಅಪಹರಣ ಸೇರಿದಂತೆ ಇತರೆ ಅಪರಾಧ ಕೃತ್ಯಗಳಿಗೆ ಯಾವುದೇ ಬ್ರೇಕ್ ಬಿದ್ದಿರಲಿಲ್ಲ. ಹಂತಕರ ನಾಡೆಂದು ಇತರೆ ಜಿಲ್ಲೆಯ ಜನರು ವಿಜಯಪುರ ಜಿಲ್ಲೆಯನ್ನು ಭಯ ಹಾಗೂ ಅಪಹಾಸ್ಯದ ಶೈಲಿಯಲ್ಲಿ ಕರೆಯುತ್ತಿದ್ದರು. ಈಗ ಮತ್ತೊಂದು ಮಗ್ಗುಲಲ್ಲಿ ವಿಜಯಪುರ ಜಿಲ್ಲೆ ಮತ್ತೆ ಮುನ್ನಲೆಗೆ ಬರುತ್ತಿದೆ. ಅದುವೇ ಮರಳು ಮಾಫಿಯಾ. ಅಕ್ರಮ ಮರಳುಗಾರಿಕೆಗೆ ಡಿಸಿ ಬ್ರೇಕ್: ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿಯಲ್ಲಿ ಅಕ್ರಮ ಮರಳುಗಾರಿಕೆ […]

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್​, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್
ಸಾಧು ಶ್ರೀನಾಥ್​
| Edited By: |

Updated on:May 31, 2020 | 2:30 PM

Share

ವಿಜಯಪುರ: ಭೀಮಾತೀರದ ಹಂತಕರಿಂದ ವಿಜಯಪುರ ಜಿಲ್ಲೆ ಕುಖ್ಯಾತಿಯನ್ನು ಪಡೆದ ಜಿಲ್ಲೆ. ಒಂದು ಕಾಲದಲ್ಲಿ ಇಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ, ಅಪಹರಣ ಸೇರಿದಂತೆ ಇತರೆ ಅಪರಾಧ ಕೃತ್ಯಗಳಿಗೆ ಯಾವುದೇ ಬ್ರೇಕ್ ಬಿದ್ದಿರಲಿಲ್ಲ. ಹಂತಕರ ನಾಡೆಂದು ಇತರೆ ಜಿಲ್ಲೆಯ ಜನರು ವಿಜಯಪುರ ಜಿಲ್ಲೆಯನ್ನು ಭಯ ಹಾಗೂ ಅಪಹಾಸ್ಯದ ಶೈಲಿಯಲ್ಲಿ ಕರೆಯುತ್ತಿದ್ದರು. ಈಗ ಮತ್ತೊಂದು ಮಗ್ಗುಲಲ್ಲಿ ವಿಜಯಪುರ ಜಿಲ್ಲೆ ಮತ್ತೆ ಮುನ್ನಲೆಗೆ ಬರುತ್ತಿದೆ. ಅದುವೇ ಮರಳು ಮಾಫಿಯಾ.

ಅಕ್ರಮ ಮರಳುಗಾರಿಕೆಗೆ ಡಿಸಿ ಬ್ರೇಕ್: ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿಯಲ್ಲಿ ಅಕ್ರಮ ಮರಳುಗಾರಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹಸಿರು ನ್ಯಾಯಾಧಿಕರಣ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಬಾರದೆಂದು ತಡೆ ಹಾಕಿದ್ದರೂ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಲ್ಲಿ ಪ್ರಭಾವಿಗಳು, ರಾಜಕಾರಣಿಗಳ ಬೆಂಬಲಿಗರು ನದಿಯಲ್ಲಿ ಮರಳನ್ನು ಕದಿಯುತ್ತಲೇ ಇದ್ದಾರೆ. ಇಂಥ ಘಟನೆಗಳಿಗೆ ಪೂರ್ಣ ವಿರಾಮ ಹಾಕಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮುಂದಾಗಿದ್ದಾರೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಆಧಿಕಾರಿಗಳ ಸಭೆ ನಡೆಸಿದ್ದಾರೆ. ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಸಭೆಯಲ್ಲಿ ಡಿಸಿ ವೈ.ಎಸ್.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ತಾಲೂಕು ಟಾಸ್ಕ್​ ಫೋರ್ಸ್ ಸಮಿತಿ: ಭೀಮಾ ನದಿ ತೀರ ವಿಶೇಷವಾಗಿ ಇಂಡಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಾಗಿ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ವಿಶೇಷವಾದ ಇಬ್ಬರು ಅಧಿಕಾರಿಗಳನ್ನು ದಿನದ 24 ಗಂಟೆಗಳ ಕಾಲ ನಿಯೋಜಿಸಿ, ಭೀಮಾ ನದಿ ನೀರು ಬರುವವರೆಗೆ ತೀವ್ರ ನಿಗಾ ಇಡಲು ಉದ್ದೇಶಿಸಲಾಗಿದೆ. ಅದರಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್​ ಫೋರ್ಸ್ ಸಮಿತಿ ಇದೆ. ಅಕ್ರಮ ಮರಳು ಗಣಿಗಾರಿಕೆ ಕುರಿತು ಬರುವ ದೂರುಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅವಶ್ಯಕ ಸಂದರ್ಭದಲ್ಲಿ ಪೊಲೀಸ್ ಇಲಾಖೆ ನೆರವು ಪಡೆಯಲು ತಿಳಿಸಿದರು.

ಅದರಂತೆ ಇಂಡಿ, ಮೊರಟಗಿ ಚೆಕ್​ ಪೋಸ್ಟ್ ವ್ಯಾಪ್ತಿಯಲ್ಲಿ ತೀವ್ರ ನಿಗಾ ಇಡಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಯೊಬ್ಬರನ್ನು ತಾಲೂಕಾ ಟಾಸ್ಕ್​ ಫೋರ್ಸ್ ಸಮಿತಿ ಅಡಿಯಲ್ಲಿ ನೇಮಿಸಬೇಕು. ದೂರುಗಳು ಬಂದ ತಕ್ಷಣ ವಿಳಂಬವಿಲ್ಲದೆ ತಕ್ಷಣ ಕ್ರಮ ಕೈಗೊಳ್ಳಬೇಕು. ತಾಳಿಕೋಟೆಯಲ್ಲಿ ತಹಶೀಲ್ದಾರರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ನಿರ್ಲಕ್ಷ ಮತ್ತು ಸಮನ್ವಯತೆ ಕೊರತೆಯಿಂದ ಲೋಪವಾದಲ್ಲಿ ಆಯಾ ಆಧಿಕಾರಿಗಳ ಮೇಲೆಯೇ ಸೂಕ್ತ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Published On - 1:40 pm, Sun, 31 May 20

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್