AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್​, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್

ವಿಜಯಪುರ: ಭೀಮಾತೀರದ ಹಂತಕರಿಂದ ವಿಜಯಪುರ ಜಿಲ್ಲೆ ಕುಖ್ಯಾತಿಯನ್ನು ಪಡೆದ ಜಿಲ್ಲೆ. ಒಂದು ಕಾಲದಲ್ಲಿ ಇಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ, ಅಪಹರಣ ಸೇರಿದಂತೆ ಇತರೆ ಅಪರಾಧ ಕೃತ್ಯಗಳಿಗೆ ಯಾವುದೇ ಬ್ರೇಕ್ ಬಿದ್ದಿರಲಿಲ್ಲ. ಹಂತಕರ ನಾಡೆಂದು ಇತರೆ ಜಿಲ್ಲೆಯ ಜನರು ವಿಜಯಪುರ ಜಿಲ್ಲೆಯನ್ನು ಭಯ ಹಾಗೂ ಅಪಹಾಸ್ಯದ ಶೈಲಿಯಲ್ಲಿ ಕರೆಯುತ್ತಿದ್ದರು. ಈಗ ಮತ್ತೊಂದು ಮಗ್ಗುಲಲ್ಲಿ ವಿಜಯಪುರ ಜಿಲ್ಲೆ ಮತ್ತೆ ಮುನ್ನಲೆಗೆ ಬರುತ್ತಿದೆ. ಅದುವೇ ಮರಳು ಮಾಫಿಯಾ. ಅಕ್ರಮ ಮರಳುಗಾರಿಕೆಗೆ ಡಿಸಿ ಬ್ರೇಕ್: ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿಯಲ್ಲಿ ಅಕ್ರಮ ಮರಳುಗಾರಿಕೆ […]

ಭೀಮಾತೀರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬ್ರೇಕ್​, ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್
ಸಾಧು ಶ್ರೀನಾಥ್​
| Edited By: |

Updated on:May 31, 2020 | 2:30 PM

Share

ವಿಜಯಪುರ: ಭೀಮಾತೀರದ ಹಂತಕರಿಂದ ವಿಜಯಪುರ ಜಿಲ್ಲೆ ಕುಖ್ಯಾತಿಯನ್ನು ಪಡೆದ ಜಿಲ್ಲೆ. ಒಂದು ಕಾಲದಲ್ಲಿ ಇಲ್ಲಿ ಕೊಲೆ, ಸುಲಿಗೆ, ಅತ್ಯಾಚಾರ, ಅಪಹರಣ ಸೇರಿದಂತೆ ಇತರೆ ಅಪರಾಧ ಕೃತ್ಯಗಳಿಗೆ ಯಾವುದೇ ಬ್ರೇಕ್ ಬಿದ್ದಿರಲಿಲ್ಲ. ಹಂತಕರ ನಾಡೆಂದು ಇತರೆ ಜಿಲ್ಲೆಯ ಜನರು ವಿಜಯಪುರ ಜಿಲ್ಲೆಯನ್ನು ಭಯ ಹಾಗೂ ಅಪಹಾಸ್ಯದ ಶೈಲಿಯಲ್ಲಿ ಕರೆಯುತ್ತಿದ್ದರು. ಈಗ ಮತ್ತೊಂದು ಮಗ್ಗುಲಲ್ಲಿ ವಿಜಯಪುರ ಜಿಲ್ಲೆ ಮತ್ತೆ ಮುನ್ನಲೆಗೆ ಬರುತ್ತಿದೆ. ಅದುವೇ ಮರಳು ಮಾಫಿಯಾ.

ಅಕ್ರಮ ಮರಳುಗಾರಿಕೆಗೆ ಡಿಸಿ ಬ್ರೇಕ್: ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ಭೀಮಾನದಿಯಲ್ಲಿ ಅಕ್ರಮ ಮರಳುಗಾರಿಕೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಹಸಿರು ನ್ಯಾಯಾಧಿಕರಣ ಜಿಲ್ಲೆಯಲ್ಲಿ ಮರಳುಗಾರಿಕೆ ನಡೆಸಬಾರದೆಂದು ತಡೆ ಹಾಕಿದ್ದರೂ ಇಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಲ್ಲಲ್ಲಿ ಪ್ರಭಾವಿಗಳು, ರಾಜಕಾರಣಿಗಳ ಬೆಂಬಲಿಗರು ನದಿಯಲ್ಲಿ ಮರಳನ್ನು ಕದಿಯುತ್ತಲೇ ಇದ್ದಾರೆ. ಇಂಥ ಘಟನೆಗಳಿಗೆ ಪೂರ್ಣ ವಿರಾಮ ಹಾಕಲು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಮುಂದಾಗಿದ್ದಾರೆ.

ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆಧಿಕಾರಿಗಳು ಸೇರಿದಂತೆ ಇತರೆ ಇಲಾಖೆ ಆಧಿಕಾರಿಗಳ ಸಭೆ ನಡೆಸಿದ್ದಾರೆ. ಜಿಲ್ಲೆಯ ಭೀಮಾ ಮತ್ತು ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಿಯಂತ್ರಿಸುವ ಜೊತೆಗೆ ಅಕ್ರಮವಾಗಿ ಸಾಗಾಣಿಕೆ ಬಗ್ಗೆಯೂ ತೀವ್ರ ನಿಗಾ ಇಡುವಂತೆ ಸಭೆಯಲ್ಲಿ ಡಿಸಿ ವೈ.ಎಸ್.ಪಾಟೀಲ್ ಖಡಕ್ ಸೂಚನೆ ನೀಡಿದ್ದಾರೆ.

ತಾಲೂಕು ಟಾಸ್ಕ್​ ಫೋರ್ಸ್ ಸಮಿತಿ: ಭೀಮಾ ನದಿ ತೀರ ವಿಶೇಷವಾಗಿ ಇಂಡಿ ತಾಲೂಕು ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಾಗಿ ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ವಿಶೇಷವಾದ ಇಬ್ಬರು ಅಧಿಕಾರಿಗಳನ್ನು ದಿನದ 24 ಗಂಟೆಗಳ ಕಾಲ ನಿಯೋಜಿಸಿ, ಭೀಮಾ ನದಿ ನೀರು ಬರುವವರೆಗೆ ತೀವ್ರ ನಿಗಾ ಇಡಲು ಉದ್ದೇಶಿಸಲಾಗಿದೆ. ಅದರಂತೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ತಾಲೂಕು ಟಾಸ್ಕ್​ ಫೋರ್ಸ್ ಸಮಿತಿ ಇದೆ. ಅಕ್ರಮ ಮರಳು ಗಣಿಗಾರಿಕೆ ಕುರಿತು ಬರುವ ದೂರುಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮತ್ತು ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವಂತೆ ತಿಳಿಸಿ, ಅವಶ್ಯಕ ಸಂದರ್ಭದಲ್ಲಿ ಪೊಲೀಸ್ ಇಲಾಖೆ ನೆರವು ಪಡೆಯಲು ತಿಳಿಸಿದರು.

ಅದರಂತೆ ಇಂಡಿ, ಮೊರಟಗಿ ಚೆಕ್​ ಪೋಸ್ಟ್ ವ್ಯಾಪ್ತಿಯಲ್ಲಿ ತೀವ್ರ ನಿಗಾ ಇಡಬೇಕು. ಪ್ರಾದೇಶಿಕ ಸಾರಿಗೆ ಅಧಿಕಾರಿಯೊಬ್ಬರನ್ನು ತಾಲೂಕಾ ಟಾಸ್ಕ್​ ಫೋರ್ಸ್ ಸಮಿತಿ ಅಡಿಯಲ್ಲಿ ನೇಮಿಸಬೇಕು. ದೂರುಗಳು ಬಂದ ತಕ್ಷಣ ವಿಳಂಬವಿಲ್ಲದೆ ತಕ್ಷಣ ಕ್ರಮ ಕೈಗೊಳ್ಳಬೇಕು. ತಾಳಿಕೋಟೆಯಲ್ಲಿ ತಹಶೀಲ್ದಾರರು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ನಿರ್ಲಕ್ಷ ಮತ್ತು ಸಮನ್ವಯತೆ ಕೊರತೆಯಿಂದ ಲೋಪವಾದಲ್ಲಿ ಆಯಾ ಆಧಿಕಾರಿಗಳ ಮೇಲೆಯೇ ಸೂಕ್ತ ಕ್ರಮಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Published On - 1:40 pm, Sun, 31 May 20

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ