AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು

Vijayapura News: ಮನೆ ಮನೆಗೂ ನಲ್ಲಿ ನೀರು ಕೊಡುವ ಯೋಜನೆ ಅಸಮರ್ಪಕ ಜಾರಿಯೇ ದುರಂತಕ್ಕೆ ಕಾರಣ. ಸರಿಯಾಗಿ ಕಾಮಗಾರಿ ಮಾಡದೇ ನಲ್ಲಿ ಸಂಪರ್ಕ ಪಡೆದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

ವಿಜಯಪುರ: ಕಲುಷಿತ ನಲ್ಲಿ ನೀರು ಸೇವಿಸಿ ಇಬ್ಬರ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Oct 24, 2021 | 3:31 PM

Share

ವಿಜಯಪುರ: ಕಲುಷಿತ ನೀರು ಸೇವಿಸಿ ಇಬ್ಬರು ಸಾವನ್ನಪ್ಪಿದ ಘಟನೆ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್ ಗ್ರಾಮದಲ್ಲಿ ನಡೆದಿದೆ. ನಲ್ಲಿ ನೀರಿಗೆ ಚರಂಡಿ ನೀರು ಸೇರ್ಪಡೆ ಆಗಿರುವ ಕಾರಣ ತಲುಷಿತ ನೀರು ಪೂರೈಕೆ ಮಾಡಲಾಗಿದೆ. ಕಲುಷಿತ ನೀರು ಸೇವನೆ ಮಾಡಿರುವ ಗ್ರಾಮದ ನಿವಾಸಿಗಳು ಸಾವನ್ನಪ್ಪಿದ್ದಾರೆ. ಯರಗಲ್ ಗ್ರಾಮದ ಗುರುರಾಜ್ ಬಸವರಾಜ ಮಳಗಿ (15) ಹಾಗೂ ನೀಲಮ್ಮ ನಾರಾಯಣಪ್ಪ ಬೆನಕಣ್ಣವರ (65) ಮೃತಪಟ್ಟಿದ್ದಾರೆ. ನಿನ್ನೆ ಹಾಗೂ ಇಂದು ಗುರುರಾಜ್ ಹಾಗೂ ನೀಲಮ್ಮ ಮೃತಪಟ್ಟಿದ್ದಾರೆ.

ಅಲ್ಲದೆ, ವಾಂತಿ ಬೇದಿಯಿಂದ ಗ್ರಾಮದ ಎಂಟು ಜನರು ಬಳಲುತ್ತಿದ್ದಾರೆ. ಎಂಟು‌ ಜನರಿಗೆ ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೊಳಚೆ ನೀರು ಕುಡಿವ ನಲ್ಲಿಗೆ ನೀರಿಗೆ ಸಂಪರ್ಕ ಹೊಂದಿದರೂ ಎಚ್ಚೆತ್ತುಕೊಳ್ಳದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಎಂದು ಆಕ್ರೋಶ ವ್ಯಕ್ತವಾಗಿದೆ. ಆಲೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಯರಗಲ್ ಗ್ರಾಮದಲ್ಲಿ ಘಟನೆ ನಡೆದಿದ್ದು ಗ್ರಾಮದಲ್ಲಿ ಆರೋಗ್ಯಾಧಿಕಾರಿಗಳಿಂದ ಪರಿಶೀಲನೆ ನಡೆಸಲಾಗಿದೆ.

ಗರಸಂಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ.ಎಂ.ಎಸ್. ಪಾಟೀಲ ನೇತೃತ್ವದ ತಂಡದಿಂದ ಆರೋಗ್ಯ ತಪಾಸಣೆ ಮಾಡಲಾಗಿದೆ. ಮನೆ ಮನೆಗೂ ನಲ್ಲಿ ನೀರು ಕೊಡುವ ಯೋಜನೆ ಅಸಮರ್ಪಕ ಜಾರಿಯೇ ದುರಂತಕ್ಕೆ ಕಾರಣ. ಸರಿಯಾಗಿ ಕಾಮಗಾರಿ ಮಾಡದೇ ನಲ್ಲಿ ಸಂಪರ್ಕ ಪಡೆದ ಹಿನ್ನೆಲೆ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ.

ಇದನ್ನೂ ಓದಿ: ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ; ಮಕರಬ್ಬಿ ಗ್ರಾಮದಲ್ಲಿ ಮುಂದುವರಿದ ಸಾವಿನ ಸರಣಿ

ಇದನ್ನೂ ಓದಿ: ಮದುವೆ ದಿಬ್ಬಣದ ಬಸ್ ಅಪಘಾತ; ಓರ್ವ ಸಾವು, 20 ಜನರಿಗೆ ಗಾಯ

Published On - 3:30 pm, Sun, 24 October 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!