Vijayapura Earthquake: ವಿಜಯಪುರದ ಬಸವನಬಾಗೇವಾಡಿಯಲ್ಲಿ ಮತ್ತೆ ಭೂಕಂಪನ; ಇನ್ನೆರಡು ದಿನಗಳಲ್ಲಿ ತಜ್ಞರ ಭೇಟಿ

TV9 Digital Desk

| Edited By: Sushma Chakre

Updated on: Oct 14, 2021 | 7:35 PM

Earthquake in Vijayapura: ಬಸವನಬಾಗೇವಾಡಿಯ ಮನಗೂಳಿಯಲ್ಲಿ ಇಂದು ಸಂಜೆ 6.14ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ.

Vijayapura Earthquake: ವಿಜಯಪುರದ ಬಸವನಬಾಗೇವಾಡಿಯಲ್ಲಿ ಮತ್ತೆ ಭೂಕಂಪನ; ಇನ್ನೆರಡು ದಿನಗಳಲ್ಲಿ ತಜ್ಞರ ಭೇಟಿ
ಸಾಂಕೇತಿಕ ಚಿತ್ರ

Follow us on

ವಿಜಯಪುರ: ಗುಮ್ಮಟ ನಗರಿ ಎಂದೇ ಹೆಸರಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮತ್ತೊಮ್ಮೆ ಭೂಕಂಪನವಾಗಿದೆ. ಕಳೆದೊಂದು ತಿಂಗಳ ಅವಧಿಯಲ್ಲಿ 7ನೇ ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸುತ್ತಿದೆ. ಇದು ಅಲ್ಲಿನ ಜನರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ. ಬಸವನಬಾಗೇವಾಡಿಯ ಮನಗೂಳಿಯಲ್ಲಿ ಇಂದು ಸಂಜೆ 6.14ರ ಸುಮಾರಿಗೆ ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ವಿಜಯಪುರಕ್ಕೆ ಇನ್ನೆರಡು ದಿನಗಳಲ್ಲಿ ತಜ್ಞರು ಭೇಟಿ ನೀಡಲಿದ್ದಾರೆ. ಅ. 16ರಂದು ತಜ್ಞರು ವಿಜಯಪುರಕ್ಕೆ ಭೇಟಿ ನೀಡಿ ಭೂಕಂಪನದ ಕುರಿತು ಪರೀಕ್ಷೆ ನಡೆಸಲಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಕಳೆದ ಸಪ್ಟೆಂಬರ್ 4ರಿಂದ ಸರಣಿ ರೂಪದಲ್ಲಿ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ, ಹಲವಾರು ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿಲ್ಲ.

ಸೆಪ್ಟೆಂಬರ್​ನಿಂದ ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ. ಅಕ್ಟೋಬರ್ 1, 2, 3, 7ರಂದು ಕ್ರಮವಾಗಿ ವಿಜಯಪುರದ ತಿಕೋಟ, ಬಸವನಬಾಗೇವಾಡಿ ಮುಂತಾದ ಕಡೆಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ ಮಾತ್ರವಲ್ಲದೆ ಅಕ್ಟೋಬರ್ ಮೊದಲ ವಾರ ಸಿಂಧಗಿ, ಬೀದರ್, ಕಲಬುರ್ಗಿಯಲ್ಲೂ ಭೂಕಂಪನದ ಅನುಭವವಾಗಿತ್ತು.

ಇನ್ನು, ಕಲಬುರ್ಗಿಯಲ್ಲಿ ಕೂಡ ಭೂಕಂಪನದಿಂದ ಜನರು ಗಾಬರಿಯಾಗಿದ್ದು, ತಮ್ಮ ಊರುಗಳನ್ನೇ ತೊರೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಕಲಬುರ್ಗಿಯಲ್ಲಿ 4.1 ತೀವ್ರತೆಯ ಭೂಕಂಪನವಾಗಿತ್ತು. ಇದರಿಂದ ಅನೇಕ ಜನರು ಊರು ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: ಕಲಬುರಗಿ: ಜಿಲ್ಲೆಯ ಹಲವೆಡೆ ಭೂಕಂಪ ವಿಚಾರ; ಪರಿಶೀಲನೆ ನಡೆಸಲು ಭೂವಿಜ್ಞಾನಿಗಳ ತಂಡ ಭೇಟಿ

Kalaburagi Earthquake: ಕಲಬುರಗಿ ಜಿಲ್ಲೆಯ ಹಲವೆಡೆ ಭೂಕಂಪನ; ಭಯದಲ್ಲಿ ಗ್ರಾಮಗಳನ್ನೇ ತೊರೆಯುತ್ತಿರುವ ಜನರು

ತಾಜಾ ಸುದ್ದಿ

Related Stories

Click on your DTH Provider to Add TV9 Kannada