AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayapura Earthquake: ಕಳೆದ ಎರಡು ತಿಂಗಳುಗಳಿಂದ ಸರಣಿ ಭೂಕಂಪನ; ವಿಜ್ಞಾನಿಗಳ ತಂಡದಿಂದ ಸ್ಥಳ ಪರಿಶೀಲನೆ

ಭೂಕಂಪನವಾಗುತ್ತಿರುವ ಹಿನ್ನೆಲೆ ಜನಜಾಗೃತಿ ಸಭೆ ನಡೆಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದ ಮುಖ್ಯಸ್ಥ ಡಾ. ಶ್ರೀನಿವಾಸ ರೆಡ್ಡಿ ನೇತ್ರತ್ವದಲ್ಲಿ ಸಭೆ ನಡೆದಿದ್ದು, ಮನಗೂಳಿ ಗ್ರಾಮದ ಜನರಿಗೆ ತಿಳುವಳಿಕೆ ಹಾಗೂ ಧೈರ್ಯ ನೀಡುವ ಕಾರ್ಯ ಮಾಡಿದ್ದಾರೆ.

Vijayapura Earthquake: ಕಳೆದ ಎರಡು ತಿಂಗಳುಗಳಿಂದ ಸರಣಿ ಭೂಕಂಪನ; ವಿಜ್ಞಾನಿಗಳ ತಂಡದಿಂದ ಸ್ಥಳ ಪರಿಶೀಲನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Nov 08, 2021 | 12:37 PM

Share

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳುಗಳಿಂದ ಸರಣಿ ಭೂಕಂಪನವಾಗುತ್ತಿದೆ ಹಾಗೂ ಭೂಮಿಯಿಂದ ಭಾರೀ ಶಬ್ಧ ಕೇಳಿ ಬರುತ್ತಿದೆ. ಈ ಸಂಬಂಧ ಇಂದು (ನವೆಂಬರ್ 8) ವಿಜಯಪುರ ಜಿಲ್ಲೆಗೆ ವಿಜ್ಞಾನಿಗಳ ತಂಡ ಭೇಟಿ ನೀಡಿದ್ದು, ಸ್ಥಳ ಪರಿಶೀಲನೆಗೆ ಮುಂದಾಗಿದ್ದಾರೆ. ಸ್ಥಳ ಪರಿಶೀಲನೆ ಬಳಿಕ ವಿಜ್ಞಾನಿಗಳ ತಂಡ ಸ್ಥಳೀಯರಲ್ಲಿ ಧೈರ್ಯ ತುಂಬಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್‌ನಿಂದ ಬಂದಿರುವ ವಿಜ್ಞಾನಿಗಳ ತಂಡ ಬಸವನಬಾಗೇವಾಡಿ ತಾಲೂಕಿನ ಮನಗೂಳಿಯಲ್ಲಿ ಸ್ಥಳಿಯರೊಂದಿಗೆ ಸಭೆ ಆರಂಭಿಸಿದೆ. ಭೂಕಂಪನವಾಗುತ್ತಿರುವ ಹಿನ್ನೆಲೆ ಜನಜಾಗೃತಿ ಸಭೆ ನಡೆಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ತಂಡದ ಮುಖ್ಯಸ್ಥ ಡಾ. ಶ್ರೀನಿವಾಸ ರೆಡ್ಡಿ ನೇತ್ರತ್ವದಲ್ಲಿ ಸಭೆ ನಡೆದಿದ್ದು, ಮನಗೂಳಿ ಗ್ರಾಮದ ಜನರಿಗೆ ತಿಳುವಳಿಕೆ ಹಾಗೂ ಧೈರ್ಯ ನೀಡುವ ಕಾರ್ಯ ಮಾಡಿದ್ದಾರೆ.

ವಿಜಯಪುರದಲ್ಲಿ ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕವೂ ಹೆಚ್ಚಾಗಿದೆ. ಕಳೆದ ಸಪ್ಟೆಂಬರ್ 4ರಿಂದ ಸರಣಿ ರೂಪದಲ್ಲಿ ವಿಜಯಪುರದಲ್ಲಿ ಭೂಕಂಪನದ ಅನುಭವವಾಗುತ್ತಿದೆ. ಕೆಲ ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿದೆ, ಹಲವಾರು ಬಾರಿ ರಿಕ್ಟರ್ ಮಾಪನದಲ್ಲಿ ದಾಖಲಾಗಿಲ್ಲ.

ಸೆಪ್ಟೆಂಬರ್​ನಿಂದ ಇಲ್ಲಿಯವರೆಗೂ ಹಲವಾರು ಬಾರಿ ವಿಜಯಪುರದಲ್ಲಿ ಭೂಮಿ ಕಂಪಿಸಿದೆ. ಆದರೆ, ಇದುವರೆಗೂ ಯಾರಿಗೂ ಅಪಾಯಗಳಾಗಿಲ್ಲ. ಮನೆಯ ಕಿಟಕಿ ಗಾಜುಗಳು ಒಡೆದು, ಪಾತ್ರೆಗಳು ನೆಲಕ್ಕುರುಳಿದ ಘಟನೆಗಳು ನಡೆದಿವೆ. ಅಕ್ಟೋಬರ್ 1, 2, 3, 7ರಂದು ಕ್ರಮವಾಗಿ ವಿಜಯಪುರದ ತಿಕೋಟ, ಬಸವನಬಾಗೇವಾಡಿ ಮುಂತಾದ ಕಡೆಗಳಲ್ಲಿ ಭೂಕಂಪನವಾಗಿತ್ತು. ರಿಕ್ಟರ್ ಮಾಪಕದಲ್ಲಿ 2.5ರಷ್ಟು ತೀವ್ರತೆ ದಾಖಲಾಗಿತ್ತು. ವಿಜಯಪುರ ಮಾತ್ರವಲ್ಲದೆ ಅಕ್ಟೋಬರ್ ಮೊದಲ ವಾರ ಸಿಂಧಗಿ, ಬೀದರ್, ಕಲಬುರ್ಗಿಯಲ್ಲೂ ಭೂಕಂಪನದ ಅನುಭವವಾಗಿತ್ತು.

ಇನ್ನು, ಕಲಬುರಗಿಯಲ್ಲಿ ಕೂಡ ಭೂಕಂಪನದಿಂದ ಜನರು ಗಾಬರಿಯಾಗಿದ್ದು, ತಮ್ಮ ಊರುಗಳನ್ನೇ ತೊರೆಯುತ್ತಿದ್ದಾರೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ಮತ್ತು ಕಾಳಗಿ ತಾಲೂಕಿನ ಗಡಿಕೇಶ್ವರ, ಹೊಸಳ್ಳಿ ಎಚ್, ತೇಗಲತಿಪ್ಪಿ, ಕೆರೂರು ಸೇರಿದಂತೆ ಹತ್ತಕ್ಕೂ ಹಳ್ಳಿಗಳಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಲಘು ಭೂಕಂಪನಗಳು ಮೇಲಿಂದ ಮೇಲೆ ಆಗುತ್ತಿವೆ. ಹಗಲು ರಾತ್ರಿಯೆನ್ನದೇ ನಿರಂತರವಾಗಿ ಉಂಟಾಗುತ್ತಿರುವ ಭೂ ಕಂಪನದಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಕಲಬುರಗಿಯಲ್ಲಿ 4.1 ತೀವ್ರತೆಯ ಭೂಕಂಪನವಾಗಿತ್ತು. ಇದರಿಂದ ಅನೇಕ ಜನರು ಊರು ಬಿಟ್ಟು ಹೋಗಿದ್ದಾರೆ.

ಇದನ್ನೂ ಓದಿ: ವಿಜಯಪುರ: ಇಂದಿನಿಂದ ರಾಜ್ಯಪಾಲರ ಜಿಲ್ಲಾ ಪ್ರವಾಸ; ಬೆಳಿಗ್ಗೆ ಬೆಂಗಳೂರಿನಿಂದ ಕಲಬುರಗಿಗೆ ಪ್ರಯಾಣ

Vijayapura Earthquake: ವಿಜಯಪುರದ ಬಸವನಬಾಗೇವಾಡಿಯಲ್ಲಿ ಮತ್ತೆ ಭೂಕಂಪನ; ಇನ್ನೆರಡು ದಿನಗಳಲ್ಲಿ ತಜ್ಞರ ಭೇಟಿ

Published On - 12:34 pm, Mon, 8 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ