ವಿಜಯಪುರ: ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದ್ರಂತೆ ಎಂಬ ಮಾತು ಇಲ್ಲಿ ಅನ್ವಯವಾಗುತ್ತದೆ. ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ವಿಜಯಪುರ ನಗರದ ಶಾಪೇಟೆಯಲ್ಲಿ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಇದೀಗ ಆಸ್ಪತ್ರೆಯ ಪಾಲಾಗಿದ್ಧಾನೆ.

ವಿಜಯಪುರ: ಪೋಷಕರು ಮಾಡಿದ ಸಾಲಕ್ಕೆ ಮಗನಿಗೆ ಕಿರುಕುಳ; ಬೇಸತ್ತ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
ಯುವಕ ಆತ್ಮಹತ್ಯೆಗೆ ಯತ್ನ
Edited By:

Updated on: Feb 10, 2024 | 7:32 PM

ವಿಜಯಪುರ, ಫೆ.10: ಪೋಷಕರು ಮಾಡಿದ ಸಾಲದ ಮರು ಪಾವತಿಗಾಗಿ ಮಗನಿಗೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದ್ದು, ಕಿರುಕುಳದಿಂದ ಬೇಸತ್ತ ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರದ(Vijayapura) ನಗರದ ಶಾಪೇಟೆಯಲ್ಲಿ ನಡೆದಿದೆ. ಇದೀಗ ಯುವಕ ಆಸ್ಪತ್ರೆಯ ಪಾಲಾಗಿದ್ಧಾನೆ. ನಗರದ ಶಾಪೇಟೆ ನಿವಾಸಿ ಶಾರುಖ್ ಸೌದಾಗರ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದವ. ಸದ್ಯ ಜಿಲ್ಲಾಸ್ಪತ್ರೆಯಲ್ಲಿ ಇತನಿಗೆ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ಧಾನೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಇನ್ನು ಶಾರುಖ್ ತಂದೆ ಮೆಹಬೂಬಸಾಬ್ ಸ್ಥಳಿಯ ಮಹಿಳೆ ರುಬೀನಾ ಎಂಬುವವರ ಬಳಿ ಸಾಲ ಮಾಡಿದ್ದರಂತೆ. ಆದರೆ,ತೆಗೆದುಕೊಂಡ ಸಾಲವನ್ನು ಮರು ಪಾವತಿ ಮಾಡಿಲ್ಲವಂತೆ. ಈ ಹಿನ್ನಲೆ ರುಬೀನಾ ಮೆಹಬೂಬಸಾಬ್ ಸೌದಾಗರ್​ರನ್ನು ಕೇಳುವುದನ್ನು ಬಿಟ್ಟು, ಅವರ ಪುತ್ರ ಶಾರುಖ್​ಗೆ ಪೀಡಿಸುತ್ತಿದ್ದಳಂತೆ. ಇದರಿಂದ ಬೇಸರಗೊಂಡ ಶಾರುಖ್, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಈ ಕುರಿತು ಎಪಿಎಂಸಿ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿ ದೂರು ದಾಖಲು ಮಾಡಿಕೊಂಡಿದ್ಧಾರೆ. ತನಿಖೆ ಮುಂದುವರೆದಿದ್ದು, ಪೊಲೀಸರ ತನಿಖೆ ಬಳಿಕ ಮತ್ತಷ್ಟು ಸತ್ಯಾಂಶ ಹೊರ ಬರಲಿದೆ.

ಇದನ್ನೂ ಓದಿ:ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಗೂಡ್ಸ್ ಗಾಡಿ ಪಲ್ಟಿ; ಅದೃಷ್ಟವಶಾತ್​ ಪಾರಾದ ಚಾಲಕ

ಬೆಂಗಳೂರು: ನಗರದ ಮಲ್ಲೇಶ್ವರಂ ಬಳಿಯ ಸುಜಾತ ಟಾಕೀಸ್​​ ಬಳಿ ಖಾಸಗಿ ಕಂಪನಿಗೆ ಸೇರಿದ ಗೂಡ್ಸ್ ವಾಹನ ಪಲ್ಟಿಯಾದ ಘಟನೆ ನಡೆದಿದೆ. ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್​​ ವಾಹನ ಪಲ್ಟಿಯಾಗಿದ್ದು, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Sat, 10 February 24

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us