AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್

ವಿಜಯಪುರ ಜಿಲ್ಲೆಯ ಇಂಡಿಯಲ್ಲಿ ತಾಯಿ-ಮಗ ಸೇರಿ ಬ್ಯಾಂಕ್ ಮ್ಯಾನೇಜರ್‌ಗೆ ಹನಿಟ್ರ್ಯಾಪ್ ಮಾಡಿ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ದೈಹಿಕ ಸಂಬಂಧದ ವಿಡಿಯೋ ಮಾಡಿ 10 ಲಕ್ಷ ರೂಪಾಯಿ ಸುಲಿಗೆಗೆ ಯತ್ನಿಸಿದ್ದರು. ಮ್ಯಾನೇಜರ್ ದೂರು ನೀಡಿದ ನಂತರ ನಾಲ್ವರಲ್ಲಿ ಪೈಕಿ ಆರೋಪಿ ಬಂಧಿತನಾಗಿದ್ದಾನೆ. ಇದು ಸರಣಿ ಹನಿಟ್ರ್ಯಾಪ್ ಪ್ರಕರಣಗಳ ಭಾಗವಾಗಿರುವ ಶಂಕೆ ವ್ಯಕ್ತವಾಗಿದೆ.

ವಿಜಯಪುರ: ಎಳನೀರು ಅಂಗಡಿಯ ಆಂಟಿಯ ಹನಿಟ್ರ್ಯಾಪ್ ಖೆಡ್ಡಾಗೆ ಬಿದ್ದ ಬ್ಯಾಂಕ್ ಮ್ಯಾನೇಜರ್
ಆರೊಪಿಗಳಾದ ಮಹೇಶ್, ತೌಶೀಫ್ ಮತ್ತು ಅಮೂಲ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Nov 19, 2025 | 9:04 AM

Share

ವಿಜಯಪುರ, ನವೆಂಬರ್ 19: ಇತ್ತೀಚಿನ ದಿನಗಳಲ್ಲಿ ಹನಿಟ್ರ್ಯಾಪ್ ಪ್ರಕರಣಗಳು (Honeytrap Cases) ಹೆಚ್ಚುತ್ತಿವೆ. ಇದೀಗ ಇದೇ ಹನಿಟ್ರ್ಯಾಪ್ ವಿಚಾರದಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಜನ್ಮ ಕೊಟ್ಟ ತಾಯಿಯನ್ನೇ ಬಳಸಿಕೊಂಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ವೊಂದರ ಮ್ಯಾನೇಜರ್​ನನ್ನು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿ ಲಕ್ಷ ಲಕ್ಷ ಸುಲಿಗೆ ಮಾಡಲು ಯತ್ನಿಸಿದ ಘಟನೆ ವಿಜಯಪುರ (Vijayapur) ಜಿಲ್ಲೆ ಇಂಡಿ ಪಟ್ಟಣದಲ್ಲಿ ನಡೆದಿದೆ.

ಮ್ಯಾನೇಜರ್ ಜೊತೆಗಿನ ಖಾಸಗಿ ವೀಡಿಯೋ ಮಾಡಿದ್ದ ಮಹಿಳೆ

ಪಟ್ಟಣದಲ್ಲಿ ಎಳನೀರು ಮಾರಾಟ ಮಾಡುತ್ತಿದ್ದ 44 ವರ್ಷದ ಮಹಿಳೆ ಸರ್ಕಾರಿ ಬ್ಯಾಂಕ್​ನಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯ ಸಲುಗೆ ಬೆಳೆಸಿ ಕಳೆದ ನವೆಂಬರ್ 1 ರಂದು ತನ್ನ ಗೆಳೆತಿ ಮನೆಗೆ ಕರೆಸಿಕೊಂಡು ದೈಹಿಕ ಸಂಪರ್ಕ ನಡೆಸಿದ್ದರು. ಇದೇ ವೇಳೆ ಮನೆಯ ಕಿಟಿಕಿಯಲ್ಲಿ ಮೊಬೈಲ್ ಇಟ್ಟಿದ್ದನ್ನು ಕಂಡ ಮ್ಯಾನೇಜರ್, ಪ್ರಶ್ನೆ ಮಾಡಿದಾಗ ಫೋನ್ ಕೆಟ್ಟಿದೆ ಎಂದು ಸಬೂಬು ಹೇಳಿದ್ದರು. ಬಳಿಕ ನವೆಂಬರ್ 5 ರಂದು ಬ್ಯಾಂಕ್ ಮ್ಯಾನೇಜರ್​ಗೆ ಕರೆ ಮಾಡಿದ ಮಹಿಳೆ , ನಾವಿಬ್ಬರು ಏಕಾಂತದಲ್ಲಿರುವುದನ್ನು ಯಾರೋ ವಿಡಿಯೋ ಮಾಡಿದ್ದಾರೆ. ಅವರ ಬಳಿ ಮಾತನಾಡಿ ಬಗೆ ಹರಿಸಿಕೊಳ್ಳಿ ಎಂದು ಹೇಳಿದ್ದರು.

ಪತ್ರಕರ್ತನೆಂದು ಹೇಳಿ ಹಣ ವಸೂಲಿಗೆ ಯತ್ನ

ಇದೇ ವೇಳೆ ಮಹಿಳೆಯ ಅಳಿಯ ಮಹೇಶ ಬಗಲಿ, ಪತ್ರಕರ್ತ ತೌಶೀಫ್ ಖುರೇಷಿ ಎನ್ನುವವರಿಗೆ ನಿಮ್ಮಿಬ್ಬರ ವಿಡಿಯೋ ಸಿಕ್ಕಿವೆ ಎಂದು ಮ್ಯಾನೇಜರ್​ಗೆ ಬೆದರಿಸಿದ್ದ. ಈ ಹೇಯ ಕೃತ್ಯದಲ್ಲಿ ಮಹಿಳೆಯ ಸ್ವಂತ ಮಗನೂ ಸೇರಿದ್ದನೆಂಬುದು ತಿಳಿದುಬಂದಿದೆ. ತೌಶೀಫ್ ಖುರೇಷಿ, ಮಹೇಶ ಬಗಲಿ ಹಾಗೂ ಮಹಿಳೆಯ ಪುತ್ರ ಅಮೂಲ್ ಸೇರಿಕೊಂಡು ಬ್ಯಾಂಕ್ ಮ್ಯಾನೇಜರ್ ಬಳಿ ಬಂದು ಎಲ್ಲಾ ಬಗೆಹರಿಸಿಕೊಳ್ಳಿ. ಎಲ್ಲರಿಗೂ ಸೇರಿದಂತೆ 10 ಲಕ್ಷ ಹಣ ನೀಡಬೇಕು. ಇಲ್ಲವಾದರೆ ಮಾಧ್ಯಮಗಳಲ್ಲಿ ವಿಡಿಯೋ ಲೀಕ್ ಮಾಡಲಾಗುತ್ತದೆ ಎಂದು ಹೆದರಿಸಿದ್ದಾರೆ. ಇದರಿಂದ ಭಯಗೊಂಡ ಬ್ಯಾಂಕ್ ಮ್ಯಾನೇಜರ್ ಇಂಡಿ ಪಟ್ಟಣ ಪೊಲೀಸ್ ಠಾಣೆಗೆ ತೆರಳಿ ಮಹಿಳೆ ಸೇರಿದಂತೆ ಉಳಿದ ಮೂವರ ಮೇಲೆ ದೂರು ನೀಡಿದ್ದಾರೆ.

ಇದನ್ನೂ ಓದಿ ಲಿವಿನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯಿಂದಲೇ ಪ್ರಿಯಕರನ‌ ಹತ್ಯೆ: ಕಾರಣವೇನು?

ಹಲವರಿಗೆ ಇದೇ ರೀತಿ ವಂಚಿಸಿರುವ ಶಂಕೆ

ಈ ಪ್ರಕರಣ ಕುರಿತು ದೂರು ದಾಖಲಿಸಿಕೊಂಡ ಇಂಡಿ ಪಟ್ಟಣ ಠಾಣೆಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ತೌಶೀಫ್, ಮಹೇಶ ಹಾಗೂ ಮಹಿಳೆ ಪರಾರಿಯಾಗಿದ್ದಾರೆ. ಇದೀಗ ಮಹಿಳೆಯ ಪುತ್ರನನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಉಳಿದವರ ಹುಡುಕಾಟ ಮುಂದುವರೆದಿದೆ. ಮಹಿಳೆ ಸಹಿತ ಇಡೀ ಟೀಂ ಇಂಡಿ ಪಟ್ಟಣದಲ್ಲಿ ಹಲವಾರು ಜನರಿಗೆ ಇದೇ ರೀತಿ ಹನಿಟ್ರ್ಯಾಪ್ ಮಾಡಿ  ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆ ಯಾರಾದರೂ ನೊಂದವರು, ಬೆದರಿಕೆಗೆ ಒಳಗಾದವರು ಇದ್ದರೆ ದೂರು ನೀಡಿ ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:03 am, Wed, 19 November 25

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ