AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರದ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ ಕೇಸ್​​: ತಾಯಿ ಮತ್ತು ಮಕ್ಕಳ ಸಾವಿಗೆ ಕಾರಣ ರಿವೀಲ್​​

ವಿಜಯಪುರದ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳ ಶವ ಪತ್ತೆಯಾದ ಪ್ರಕರಣಕ್ಕೆ ಕೌಟುಂಬಿಕ ಕಲಹವೇ ಕಾರಣ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದ್ದು, ಪತಿ ವಿರುದ್ಧ ಗಂಭೀರ ಆರೋಪಗಳು ಕೇಳಿಬಂದಿವೆ. ಹೀಗಿದ್ದರೂ ಗ್ರಾಮದಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಪತ್ನಿ ಹಾಗೂ ಮಕ್ಕಳಿಗಾಗಿ ಪತಿ ಹುಡುಕಾಟ ನಡೆಸಿದ್ದ. ಅಲ್ಲೆಲ್ಲೂ ಅವರ ಸುಳಿವು ಸಿಗದ ಕಾರಣ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿನಾಪತ್ತೆ ಬಗ್ಗೆ ದೂರು ನೀಡಿದ್ದ ಎನ್ನಲಾಗಿದೆ.

ವಿಜಯಪುರದ ಭೂತನಾಳ ಕೆರೆಯಲ್ಲಿ 6 ಶವ ಪತ್ತೆ ಕೇಸ್​​: ತಾಯಿ ಮತ್ತು ಮಕ್ಕಳ ಸಾವಿಗೆ ಕಾರಣ ರಿವೀಲ್​​
ಮೃತರುImage Credit source: Tv9 Kannada
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 26, 2026 | 3:38 PM

Share

ವಿಜಯಪುರ, ಆಗಸ್ಟ್​​ 26: ವಿಜಯಪುರ ನಗರದ ಹೊರ ಭಾಗದಲ್ಲಿರುವ ಭೂತನಾಳ ಕೆರೆಯಲ್ಲಿ ತಾಯಿ ಹಾಗೂ ಐವರು ಮಕ್ಕಳ ಶವ ಪತ್ತೆ ವಿಚಾರ ಸಂಬಂಧ ಕೆಲ ಪ್ರಾಥಮಿಕ ಮಾಹಿತಿಗಳು ತನಿಖೆ ವೇಳೆ ಸಿಕ್ಕಿವೆ. ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ ಉರ್ಫ್ ತಿಪ್ಪರಾಯ (10), ವಿಕಾಸ (5) ಮತ್ತು ಸಾನಿಕಾ (7) ಅವರ ಸಾವಿಗೆ ಕೌಟುಂಬಿಕ ಕಲಹವೇ ಕಾರಣ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಪತಿ ಮಲಕಾರಿ ಜಾಲಗೇರಿ ಮತ್ತು ಶೋಭಾ ನಡುವೆ ಆಗಸ್ಟ್​​ 23ರ ರಾತ್ರಿ ಜಗಳವಾಗಿತ್ತು. ಮಾರನೆಯ ದಿನ ಶ್ರಾವಣ ಸೋಮವಾರವಾಗಿರುವ ಕಾರಣ ದೇವರ ಪೂಜೆಗೆ ನೈವೇದ್ಯ ಹಾಗೂ ಕೂಲಿ ಕೆಲಸಕ್ಕೆ ಹೋಗಲು ಬುತ್ತಿ ಮಾಡಿಕೊಡುವ ಸಂಬಂಧ ಗಲಾಟೆ ನಡೆದಿತ್ತು. ಆ ಬಳಿಕ ಮಕ್ಕಳ ಜೊತೆ ಶೋಭಾ ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಪತ್ನಿ ಮತ್ತು ಮಕ್ಕಳಿಗಾಗಿ ಹುಡುಕಾಡಿದ್ದ ಮಲಕಾರಿ

ಗ್ರಾಮದಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ಪತ್ನಿ ಶೋಭಾ ಹಾಗೂ ಮಕ್ಕಳಿಗಾಗಿ ಮಲಕಾರಿ ಜಾಲಗೇರಿ ಹುಡುಕಾಟ ನಡೆಸಿದ್ದ. ಅಲ್ಲೆಲ್ಲೂ ಅವರ ಸುಳಿವು ಸಿಗದ ಕಾರಣ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪತ್ನಿ ಮತ್ತು ಮಕ್ಕಳು ಕಾಣೆಯಾಗಿದ್ದಾರೆಂದು ದೂರು ನೀಡಿದ್ದ. ಈ ನಡುವೆ ಭೂತನಾಳ ಕೆರೆಯಲ್ಲಿ ಅವರ ಶವ ಪತ್ತೆಯಾಗಿದೆ. ಸಂಪೂರ್ಣ ತನಿಖೆಯ ಬಳಿಕೆ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವಿಜಯಪುರ ಪೊಲೀಸ್​​ ವರಿಷ್ಠಾಧಿಕಾರಿ ಲಕ್ಷ್ಮಣ ಬಿ ನಿಂಬರಗಿ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಶವಗಳನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ 6 ಶವಗಳು ಪತ್ತೆ!

ಮಲಕಾರಿ ವಿರುದ್ಧವೇ ಶೋಭಾ ಕುಟುಂಬಸ್ಥರ ಆರೋಪ

ವಿಷಯ ತಿಳಿಯುತ್ತಲೇ ಮೃತ ಶೋಭಾ ತವರು ಮನೆಯವರು ಆಸ್ಪತ್ರೆಗೆ ಆಗಮಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಿತ್ಯ ಕುಡಿದೂ ಬಂದು ಮಲಕಾರಿ ಶೋಭಾ ಮೇಲೆ ಹಲ್ಲೆ ನಡೆಸುತ್ತಿದ್ದ. ಸಾಲದ್ದಕ್ಕೆ ಪರಸ್ತ್ರೀ ಜೊತೆಗೆ ಆತನಿಗೆ ಅಕ್ರಮ ಸಂಬಂಧವೂ ಇತ್ತು. ಹೀಗಾಗಿ ಶೋಭಾಗೆ ಕಿರುಕುಳ ನೀಡುತ್ತಿದ್ದ ಎಂದವರು ಗಂಭೀರ ಆರೋಪ ಮಾಡಿದ್ದಾರೆ. ಘಟನೆ ಸಂಬಂಧ ಆದರ್ಶ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಎಲ್ಲಾ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us