Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಿ 20 ವರ್ಷದ ನಂತರ ಪತ್ನಿಯನ್ನು ಕೊಂದು ಜಮೀನಿನಲ್ಲಿ ಹೂತಿಟ್ಟ ಆರೋಪದಡಿ ಗಂಡನ ಬಂಧನ

ತನಿಖೆ ನಡೆಸಿದ ಪೊಲೀಸರಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಕೊಲ್ಹಾರ ತಹಸೀಲ್ದಾರರ ಸಮ್ಮುಖದಲ್ಲಿ ದ್ರಾಕ್ಷಾಯಣಿ ಶವ ಹೊರತೆಗೆದಿದ್ದಾರೆ.

ಮದುವೆಯಾಗಿ 20 ವರ್ಷದ ನಂತರ ಪತ್ನಿಯನ್ನು ಕೊಂದು ಜಮೀನಿನಲ್ಲಿ ಹೂತಿಟ್ಟ ಆರೋಪದಡಿ ಗಂಡನ ಬಂಧನ
ಪತಿ ರಾಚಯ್ಯ ಮತ್ತು ಪತ್ನಿ ದಾಕ್ಷಾಯಣಿ
Follow us
TV9 Web
| Updated By: guruganesh bhat

Updated on:Aug 28, 2021 | 7:23 PM

ವಿಜಯಪುರ: ಪತ್ನಿಯನ್ನು ಕೊಲೆ ಮಾಡಿ ಜಮೀನಿನಲ್ಲಿ ಹೂತ್ತಿಟ್ಟಿದ್ದ ಆರೋಪದಡಿ ಪತಿರಾಯನೊಬ್ಬನನ್ನು ಕೋಲ್ಹಾರ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆ ಕೊಲ್ಹಾರ ತಾಲೂಕಿನ ತಡಲಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, 36 ವರ್ಷದ ದ್ರಾಕ್ಷಾಯಣಿ ರಾಚಯ್ಯ ಬನ್ನಿಗೋಳಮಠ (36) ಪತಿಯಿಂದ ಕೊಲೆಯಾಗಿದ್ದಾಳೆ ಎಂಬ ಆರೋಪ ಕೇಳಿಬಂದಿದೆ. ಈಕೆಯ ಪತಿ ರಾಚಯ್ಯ ಬನ್ನಿಗೋಳಮಠ ತನ್ನ ಪತ್ನಿಯನ್ನೇ ಕೊಲೆಗೈದು ಜಮೀನಿನಲ್ಲಿ ಹೂತುಹಾಕಿದ್ದ ಎಂಬ ಆರೋಪದಡಿ ಬಂಧಿಸಲಾಗಿದೆ.

20 ವರ್ಷಗಳ ಹಿಂದೆ ರಾಚಯ್ಯ ಮತ್ತು ದ್ರಾಕ್ಷಾಯಣಿ ವಿವಾಹವಾಗಿದ್ದರು. ಮದುವೆಯಾದಾಗಿನಿಂದಲೂ ರಾಚಯ್ಯ ಪತ್ನಿ ಜೊತೆಗೆ ಜಗಳ ಮಾಡಿಕೊಳ್ಳುತ್ತಲೇ ಇದ್ದ. ದ್ರಾಕ್ಷಾಯಣಿ ತನ್ನ ಪತಿಯೊಂದಿಗೆ ಜಗಳವಾಡಿ ಎಂಟು ತಿಂಗಳ ಹಿಂದೆ ಮೂವರು ಮಕ್ಕಳ ಸಮೇತ ತವರು ಸೇರಿದ್ದಳು. ಮಕ್ಕಳನ್ನು ಶಾಲೆಗೆ ಸೇರಿಸಲು ಆಧಾರ ಕಾರ್ಡ್ ತರಲು ಪತಿ ವಾಸವಿದ್ದ ಮನೆಗೆ ಕಳೆದ ಸೋಮವಾರ ದ್ರಾಕ್ಷಾಯಣಿ ಬಂದಿದ್ದಳು. ಆಧಾರ ಕಾರ್ಡ್ ತೆಗೆದುಕೊಂಡು ವಾಪಸ್ ತವರಿಗೆ ಹೋಗುವಾಗ ರಾಚಯ್ಯ ಪತ್ನಿಯನ್ನು ಪುಸಲಾಯಿಸಿಕೊಂಡು ಜಮೀನಿಗೆ ಕರೆಯ್ದೊಯ್ದಿದ್ದ. ಅಲ್ಲಿಯೇ ಪತ್ನಿ ದಾಕ್ಷಾಯಣಿಯನ್ನು ಉಸಿರುಗಟ್ಟಿ‌ಸಿ ಕೊಲೆಗೈದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನಂತರ‌ ಜಮೀನಿನ ಬಳಿ‌ ಕಾಲುವೆ ಬಳಿ ಪತ್ನಿಯ ಮೃತದೇಹವನ್ನು ರಾಚಯ್ಯ ಹೂತುಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ದಿನಗಳವರೆಗೂ ಮಗಳು ಬಾರದ್ದಕ್ಕೆ ದಾಕ್ಷಾಣಿಯ ತವರು ಮನೆಯವರು ಗಾಬರಿಗೊಂಡಿದ್ದರು. ಹೀಗಾಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಕೊಲೆಯ ಬಳಿಕ ದ್ರಾಕ್ಷಾಯಣಿಯ ಮೊಬೈಲನ್ನು ರಾಚಯ್ಯನೇ ಉಪಯೋಗಿಸುತ್ತಿದ್ದ. ತನಿಖೆ ನಡೆಸಿದ ಪೊಲೀಸರಿಂದ ಪ್ರಕರಣ ಬೆಳಕಿಗೆ ಬಂದಿದ್ದು, ಕೊಲ್ಹಾರ ತಹಸೀಲ್ದಾರರ ಸಮ್ಮುಖದಲ್ಲಿ ದ್ರಾಕ್ಷಾಯಣಿ ಶವ ಹೊರತೆಗೆದಿದ್ದಾರೆ. ಮುದ್ದೇಬಿಹಾಳ ಡಿವೈಎಸ್ಪಿ ಹಾಗೂ ಪೊಲೀಸ್ ಅಧಿಕಾರಿಗಳು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಸದ್ಯ ಆರೋಪಿ ರಾಚಯ್ಯ ಕೊಲ್ಹಾರ ಪೊಲೀಸರ ವಶದಲ್ಲಿದ್ದು, ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

Vijayapura Rain: ವಿಜಯಪುರ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಸುರಿದ ಮಳೆ

ಕೋಲಾರದ ಕಲ್ಲು ಕುಟುಕರ ಸವಾಲಿನಂತಹ ಕಷ್ಟದ ಕೆಲಸಕ್ಕೆ ಬೇಕಿದೆ ಕಾನೂನಾತ್ಮಕ ಪರಿಹಾರ

(Vijayapura Husband who killed his wife after 20 years of marriage and buried her on the farm accused husband arrested)

Published On - 7:22 pm, Sat, 28 August 21

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ