AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಅಕ್ರಮ ಬಂಧನದಲ್ಲಿದ್ದ ಮಧ್ಯ ಪ್ರದೇಶದ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಿದ ಇಂಡಿ ಪೊಲೀಸರು

ಮಧ್ಯಪ್ರದೇಶದ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಕಾರ್ಮಿಕರು ರಕ್ಷಣೆಗಾಗಿ ಮನವಿ ಮಾಡಿಕೊಂಡಿದ್ದರು. ವಿಷಯ ತಿಳಿದ ಬಳಿಕ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ವಿಜಯಪುರ: ಅಕ್ರಮ ಬಂಧನದಲ್ಲಿದ್ದ ಮಧ್ಯ ಪ್ರದೇಶದ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಿದ ಇಂಡಿ ಪೊಲೀಸರು
ಅಕ್ರಮ ಬಂಧನದಲ್ಲಿದ್ದ ಮಧ್ಯ ಪ್ರದೇಶದ 30ಕ್ಕೂ ಹೆಚ್ಚು ಕಾರ್ಮಿಕರ ರಕ್ಷಣೆ ಮಾಡಿದ ಇಂಡಿ ಪೊಲೀಸರು
TV9 Web
| Edited By: ಆಯೇಷಾ ಬಾನು|

Updated on:Feb 11, 2022 | 11:43 AM

Share

ವಿಜಯಪುರ: ಮಧ್ಯ ಪ್ರದೇಶದ ಮೂವತ್ತಕ್ಕೂ ಅಧಿಕ ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಗುಬ್ಬೇವಾಡ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅಕ್ರಮ ಬಂಧನದಲ್ಲಿದ್ದ ಮಧ್ಯಪ್ರದೇಶದ ರತ್ನಾ ಜಿಲ್ಲೆಯ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. 10 ಮಕ್ಕಳು ಸೇರಿ 35 ಕಾರ್ಮಿಕರನ್ನು ಇಂಡಿ ಪೊಲೀಸರು ರಕ್ಷಿಸಿದ್ದಾರೆ.

ಮಧ್ಯಪ್ರದೇಶದ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ ಕಾರ್ಮಿಕರು ರಕ್ಷಣೆಗಾಗಿ ಮನವಿ ಮಾಡಿಕೊಂಡಿದ್ದರು. ವಿಷಯ ತಿಳಿದ ಬಳಿಕ ರತ್ನಾ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಮಾಹಿತಿ ಮೇರೆಗೆ ಕಬ್ಬಿನ ಜಮೀನಿನ ಮೇಲೆ ದಾಳಿ ಮಾಡಿದ ಇಂಡಿ ಪೊಲೀಸರು, ಅಕ್ರಮ‌ ಬಂಧನದಲ್ಲಿದ್ದ ಕಾರ್ಮಿಕರ ರಕ್ಷಣೆ ಮಾಡಿದ್ದಾರೆ. ಸುಮಾರು 10 ಮಕ್ಕಳು ಸೇರಿ 35 ಕಾರ್ಮಿಕರ ರಕ್ಷಣೆ ಮಾಡಲಾಗಿದೆ. ಕಾರ್ಮಿಕರನ್ನ ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದ ಗುಬ್ಬೇವಾಡ ಗ್ರಾಮದ ಶರಣಪ್ಪ ಕೋಲಿ‌ ಹಾಗೂ ಮಧ್ಯಪ್ರದೇಶದ ರೋಹಿತ್ ಎನ್ನುವ ವ್ಯಕ್ತಿಯ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಶರಣಪ್ಪ ಕೋಲಿ ಹಾಗೂ ರೋಹಿತ್, ಮಧ್ಯಪ್ರದೇಶದ ರತ್ನಾ ಜಿಲ್ಲೆಯಿಂದ ಕಾರ್ಮಿಕರನ್ನು ಕರೆ ತಂದಿದ್ದರು. ಬಿರಾದಾರ್ ಎಂಬುವವರ ಜಮೀನಿನಲ್ಲಿ ಕಬ್ಬು ಕಟಾವು ಕೆಲಸ ಮಾಡಬೇಕೆಂದು ಕಾರ್ಮಿಕರಿಗೆ ಬೆದರಿಕೆ ಹಾಕಿದ್ದರು. ಹೀಗಾಗಿ ಹೆದರಿದ ಕಾರ್ಮಿಕರು ಜಿಲ್ಲಾಧಿಕಾರಿಗೆ ಕರೆ ಮಾಡಿ ಸಂಕಷ್ಟ ಹೇಳಿಕೊಂಡಿದ್ದರು. ಬಳಿಕರತ್ನಾ ಜಿಲ್ಲೆಯ ಜಿಲ್ಲಾಧಿಕಾರಿ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕರೆ ಮಾಡಿ ಮಾಹಿತಿ ನೀಡಿ ಸಹಾಯ ಕೇಳಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ತಡರಾತ್ರಿ ಜಮೀನಿಗೆ ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ನೇತೃತ್ವದಲ್ಲಿ ದಾಳಿ ಮಾಡಿದ ಪೊಲೀಸರು ಅಕ್ರಮ ಬಂಧನದಲ್ಲಿದ್ದ ಕಾರ್ಮಿಕರನ್ನ ಬಿಡುಗಡೆಗೊಳಿಸಿದ್ದಾರೆ. 35 ಕಾರ್ಮಿಕರು, 10 ಮಕ್ಕಳನ್ನ ರಕ್ಷಣೆ‌ ಮಾಡಿದ್ದಾರೆ. ರಾತ್ರಿಯೇ ಎಲ್ಲಾ ಕಾರ್ಮಿಕರನ್ನು ರಕ್ಷಣೆ ಮಾಡಿ‌ ಮಹಾರಾಷ್ಟ್ರದ ಸೊಲ್ಲಾಪುರ ರೈಲು ನಿಲ್ದಾಣದಿಂದ ರೈಲು ಮೂಲಕ ಮಧ್ಯಪ್ರದೇಶಕ್ಕೆ ಕಾರ್ಮಿಕರನ್ನು ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಹಿಂದೂ ಆಗಿ ಭಾರತದಲ್ಲಿ ಅಕ್ರಮವಾಗಿ ನೆಲಸಿದ್ದ ಬಾಂಗ್ಲಾ ಮಹಿಳೆ ಬಂಧನ, ಹಿನ್ನೆಲೆ ಏನಿತ್ತು?

Published On - 11:41 am, Fri, 11 February 22

Follow Us
Web contact
Web contact

TV9 Kannada

Read More
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ