AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಸಿದ್ದೇಶ್ವರ ಶ್ರೀ ಅಗಲಿ ಜನವರಿ 2ಕ್ಕೆ 1 ವರ್ಷ: ಗುರುವಂದನಾ ಕಾರ್ಯಕ್ರಮ ಆಯೋಜಿಸಲು ತೀರ್ಮಾನ; ಎಂಬಿ ಪಾಟೀಲ್​

ಶ್ರೀಗಳ ಅಂತಿಮ ವಿದಾಯ ಪತ್ರದ ಆಶಯದಂತೆ ಸಕಲ ಕಾರ್ಯಕ್ರಮಗಳು ನಡೆಯಲಿವೆ. ಗುರುವಂದನಾ ಕಾರ್ಯಕ್ರಮಕ್ಕೂ ಮುನ್ನ ಗ್ರಾಮೀಣ ಭಾಗದಲ್ಲಿ ಹಾಗೂ ವಿಜಯಪುರ ನಗರದ ಪ್ರತಿ ವಾರ್ಡ್​ಗಳಲ್ಲಿ ಶ್ರೀಗಳ ಸ್ಮರಣಾರ್ಥ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಶ್ರೀಗಳ ಸಾಹಿತ್ಯ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ಸಚಿವ ಎಂಬಿ ಪಾಟೀಲ್​ ಹೇಳಿದರು.

ವಿಜಯಪುರ: ಸಿದ್ದೇಶ್ವರ ಶ್ರೀ ಅಗಲಿ ಜನವರಿ 2ಕ್ಕೆ 1 ವರ್ಷ: ಗುರುವಂದನಾ ಕಾರ್ಯಕ್ರಮ ಆಯೋಜಿಸಲು ತೀರ್ಮಾನ; ಎಂಬಿ ಪಾಟೀಲ್​
ಸಿದ್ದೇಶ್ವರ ಸ್ವಾಮೀಜಿ
TV9 Web
| Updated By: ವಿವೇಕ ಬಿರಾದಾರ|

Updated on:Nov 02, 2023 | 2:28 PM

Share

ವಿಜಯಪುರ ನ.02: ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು (Siddeshwar Swamiji) ನಮ್ಮನ್ನು ಅಗಲಿ ಮುಂಬರುವ ಜನವರಿ 2ಕ್ಕೆ ಒಂದು ವರ್ಷವಾಗುತ್ತದೆ. ಈ ಹಿನ್ನಲೆ ಗುರುವಂದನಾ ಕಾರ್ಯಕ್ರಮ ಆಯೋಜನೆ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ (MB Patil)​​ ತಿಳಿಸಿದರು. ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹಾಗೂ ಆಶ್ರಮದ ಅಧ್ಯಕ್ಷ ಶ್ರೀ ಬಸವಲಿಂಗ ಸ್ವಾಮೀಜಿ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮುಂಬರುವ ಜನೆವರಿ 1 ಹಾಗೂ 2ರಂದು ಗುರುವಂದನಾ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಶ್ರೀಗಳ ಅಂತಿಮ ವಿದಾಯ ಪತ್ರದ ಆಶಯದಂತೆ ಸಕಲ ಕಾರ್ಯಕ್ರಮಗಳು ನಡೆಯಲಿವೆ. ಗುರುವಂದನಾ ಕಾರ್ಯಕ್ರಮಕ್ಕೂ ಮುನ್ನ ಗ್ರಾಮೀಣ ಭಾಗದಲ್ಲಿ ಹಾಗೂ ವಿಜಯಪುರ ನಗರದ ಪ್ರತಿ ವಾರ್ಡ್​ಗಳಲ್ಲಿ ಶ್ರೀಗಳ ಸ್ಮರಣಾರ್ಥ ಪ್ರವಚನ ಕಾರ್ಯಕ್ರಮ ಆಯೋಜಿಸಲಾಗುತ್ತದೆ. ಹಿಂದಿ ಹಾಗೂ ಇಂಗ್ಲೀಷ್ ಭಾಷೆಯಲ್ಲಿ ಶ್ರೀಗಳ ಸಾಹಿತ್ಯ ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದರು.

ಇದನ್ನೂ ಓದಿ: Siddeshwar swamiji: ಸರಳತೆಯ ಸಂತ ಸಿದ್ದೇಶ್ವರ ಸ್ವಾಮೀಜಿ ಕಾವಿ ಏಕೆ ಧರಿಸಲಿಲ್ಲ? ಶ್ರೀಗಳಿಗೂ ಇತ್ತು ಗದಗನ ಶಿವಾನಂದ ಮಠದ ನಂಟು

ಜನವರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ನಾಡಿನ ಸ್ವಾಮೀಜಿಗಳು ಹಾಗೂ ರಾಜಕೀಯ ಗಣ್ಯರು ಭಾಗಿಯಾಗಲಿದ್ದಾರೆ. ಮೈಸೂರಿನ ಸುತ್ತೂರು ಮಠದ ಶ್ರೀಗಳು ಹಾಗೂ ಮಹಾರಾಷ್ಟ್ರದ ಕನ್ಹೇರಿ ಮಠದ ಸ್ವಾಮೀಜಿಗಳ ಸಲಹೆಯಂತೆ ಕಾರ್ಯಕ್ರಮಗಳನ್ನು ಯೋಜಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:25 pm, Thu, 2 November 23

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​