AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಅಂತ್ಯಸಂಸ್ಕಾರಕ್ಕೆಂದು ತುಸು ಜಾಗ ನೀಡಿದ್ದರೆ ಇಡೀ ಆಸ್ತಿಯನ್ನೇ ಕಬಳಿಸಿದ ವಕ್ಫ್!

ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದಲ್ಲಿ ಹಿಂದೂ ಕುಟುಂಬವೊಂದು ಅಂತ್ಯಕ್ರಿಯೆಗೆ ಭೂಮಿ ನೀಡಿದ್ದನ್ನೇ ಮುಂದಿಟ್ಟುಕೊಂಡು ಅವರ ಇಡೀ ಆಸ್ತಿಯನ್ನೇ ವಕ್ಫ್ ಆಸ್ತಿ ಎಂದು ದಾಖಲಿಸಿರುವುದು ಬೆಳಕಿಗೆ ಬಂದಿದೆ. ಇದರಿಂದ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ವಕ್ಫ್ ಬೋರ್ಡ್ ನಮೂದನ್ನು ರದ್ದುಗೊಳಿಸುವಂತೆ ಒತ್ತಾಯಿಸಿದ್ದಾರೆ.

ವಿಜಯಪುರ: ಅಂತ್ಯಸಂಸ್ಕಾರಕ್ಕೆಂದು ತುಸು ಜಾಗ ನೀಡಿದ್ದರೆ ಇಡೀ ಆಸ್ತಿಯನ್ನೇ ಕಬಳಿಸಿದ ವಕ್ಫ್!
ವಿಜಯಪುರದಲ್ಲಿ ರೈತರ ಪ್ರತಿಭಟನೆ
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Oct 30, 2024 | 12:37 PM

Share

ವಿಜಯಪುರ, ಅಕ್ಟೋಬರ್ 30: ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್, ರೈತರ ಪಹಣಿಯಲ್ಲಿ ವಕ್ಫ್ ಹೆಸರು ಉಲ್ಲೇಖದಿಂದ ಸುದ್ದಿಯಾಗಿರುವ ವಿಜಯಪುರ ಜಿಲ್ಲೆಯಲ್ಲಿ ರಹಸ್ಯವಾಗಿಯೇ ವಕ್ಫ್ ಹೆಸರಿನಲ್ಲಿ ಆಸ್ತಿ ಕಬಳಿಕೆ ನಡೆಯುತ್ತಿದೆಯಾ ಎಂಬ ಅನುಮಾನ ಇದೀಗ ಬಲವಾಗಿದೆ. ಇದಕ್ಕೆ ಬಲವಾದ ಪುರಾವೆಯೂ ದೊರೆತಿದೆ. ಅಂತ್ಯಸಂಸ್ಕಾರಕ್ಕೆಂದು ಮುಸ್ಲಿಂ ಕುಟುಂದವರಿಗೆ ತುಸು ಜಾಗ ನೀಡಿದ್ದ ಹಿಂದೂ ಕುಟುಂಬವೊಂದರ ಇಡೀ ಆಸ್ತಿಯನ್ನೇ ವಕ್ಫ್​​ಗೆ ಸೇರಿದ್ದು ಎಂದು ದಾಖಲೆಗಳಲ್ಲಿ ಉಲ್ಲೇಖಿಸಿರುವ ವಿಚಾರ ಈಗ ಬೆಳಕಿಗೆ ಬಂದಿದೆ.

2019 ರಲ್ಲೇ ರೈತನ ಪಹಣಿಯಲ್ಲಿ ವಕ್ಪ್ ಆಸ್ತಿ ಎಂದು ನಮೂದಿಸಿರುವುದು ಗೊತ್ತಾಗಿದೆ. ವಕ್ಫ್ ವಿವಾದದ ಬಳಿಕ ಪಹಣಿ ಪತ್ರ ಚೆಕ್ ಮಾಡಿದಾಗ ವಿಚಾರ ಬೆಳಕಿಗೆ ಬಂದಿದ್ದು, ರೈತನಿಗೆ ಆಘಾತವಾಗಿದೆ.

ವಿಜಯಪುರ ಜಿಲ್ಲೆಯ ಹೊನ್ನುಟಗಿ ಗ್ರಾಮದ ಸರ್ವೆ ನಂಬರ್ 271 ರ 13 ಎಕರೆ 8 ಗುಂಟೆ ಜಾಗಕ್ಕೆ ವಕ್ಪ್ ಬೋರ್ಡ್ ಎಂದು ನಮೂದಿಸಲಾಗಿದೆ.

ಮಾನವೀಯತೆ ಮೆರೆದಿದ್ದೇ ಮುಳುವಾಯ್ತೇ?

ಹೊನ್ನುಟಗಿ ಗ್ರಾಮದ ಸುರೇಶ್ ತೆರದಾಳ್ ಹಾಗೂ ಕುಟುಂಬಸ್ಥರಿಗೆ ಸೇರಿದ ಜಮೀನು ಸದ್ಯ ವಿವಾದಕ್ಕೀಡಾಗಿದೆ. ಈ ಕುಟುಂಬದವರು ಮುಸ್ಲಿಂ ಸಮುದಾಯದ ಜನರಿಗೆ ಅಂತ್ಯಸಂಸ್ಕಾರಕ್ಕೆಂದು ತಮ್ಮ ಜಮೀನಿನಲ್ಲಿ ತುಸು ಜಾಗ ನೀಡಿದ್ದರು. ಆದರೆ, ಯಾವುದೇ ದಾಖಲೆಯಲ್ಲಿ ನಮೂದು ಮಾಡದೆ ಬಳಕೆಯ ಉದ್ದೇಶಕ್ಕೆ ಮಾತ್ರ ಭೂಮಿ ನೀಡಿದ್ದರು. ಆದರೆ, ಬಳಕೆಗೆ ನೀಡಿದ್ದ ಜಾಗವನ್ನೇ ವಕ್ಫ್ ಆಸ್ತಿ ಎಂದು ನಮೂದಿಸಿದ್ದಲ್ಲದೆ, ಸುರೇಶ್ ತೆರದಾಳ್ ಅವರಿಗೆ ಸೇರಿದ ಇಡೀ 13.8 ಎಕರೆಯನ್ನೂ ವಕ್ಫ್ ಆಸ್ತಿ ಎಂದು ಉಲ್ಲೇಖಿಸಲಾಗಿದೆ.

ರೈತರಿಗೆ ನೀಡಿದ್ದ ನೋಟೀಸ್​ಗಳನ್ನು ವಾಪಸ್ ತೆಗೆದುಕೊಳ್ಳುತ್ತೇವೆ. ವಕ್ಫ್ ಬೋರ್ಡ್​ ಎಂದು ನಮೂದು ಮಾಡಿದ್ದನ್ನು ರದ್ದು ಮಾಡುತ್ತೇವೆ ಎಂದು ಸರ್ಕಾರದವರು ಹೇಳುತ್ತಿದ್ದಾರೆ. ಅದೇ ರೀತಿ ನಮ್ಮ ಜಮೀನನ ಪಹಣಿಯಲ್ಲಿ ‘ವಕ್ಫ್ ಬೋರ್ಡ್’ ಎಂದು ನಮೂದು ಮಾಡಿರುವುದನ್ನು ತೆರವು ಮಾಡಬೇಕೆಂದು ತೆರೆದಾಳ ಕುಟುಂಬದವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ವಕ್ಫ್ ಮಂಡಳಿ ನೋಟಿಸ್: ಕರ್ನಾಟಕ ರೈತರ ಅಹವಾಲು ಆಲಿಸಲು ಜಂಟಿ ಸಂಸದೀಯ ಸಮಿತಿಗೆ ತೇಜಸ್ವಿ ಸೂರ್ಯ ಪತ್ರ

ಏತನ್ಮಧ್ಯೆ, ಹಲವು ಮಂದಿ ರೈತರ ಪಹಣಿಯಲ್ಲಿ ನಮೂದಾಗಿದ್ದ ‘ಕರ್ನಾಟಕ ವಕ್ಫ್​​ ಬೋರ್ಡ್​’ ಪದವನ್ನು ರಾತ್ರೋ ರಾತ್ರಿ ಕಂದಾಯ‌ ಇಲಾಖೆಯ ಅಧಿಕಾರಿಗಳು ತೆರವು ಮಾಡಿದ್ದಾರೆ ಎನ್ನಲಾಗಿದೆ. ಆ ಮೂಲ ವಿಜಯಪುರ ರೈತರ ಹೋರಾಟಕ್ಕೆ ಮೊದಲ ಜಯ ಸಿಕ್ಕಂತಾಗಿದೆ. ಮತ್ತೊಂದೆಡೆ, ವಿಜಯಪುರ ಜಿಲ್ಲೆಯ ರೈತರ ಅಹವಾಲು ಆಲಿಸುವಂತೆ ವಕ್ಫ್ ಕಾಯ್ದೆ ಸಂಬಂಧ ರಚಿಸಲಾಗಿರುವ ಜಂಟಿ ಸಂಸದೀಯ ಸಮಿತಿಗೆ ಪತ್ರ ಬರೆದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮನವಿ ಮಾಡಿದ್ದಾರೆ.

ಕರ್ನಾಟಕ ಸಂಬಂಧಿತ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್