AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಚುಡಾಯಿಸಿದ್ದಕ್ಕೆ ಮನನೊಂದ ಬಾಲಕಿ ನೇಣಿಗೆ ಶರಣು, 1 ತಿಂಗಳ ಅಂತರದಲ್ಲಿ 2ನೇ ಪೋಕ್ಸೋ ಕೇಸ್​

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಯುವಕನ ಕಿರುಕುಳಕ್ಕೆ ನೊಂದು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿ ಆರೋಪಿಗಳನ್ನು ಬಂಧಿಸಲಾಗಿದೆ.ಒಂದು ತಿಂಗಳ ಅಂತರದಲ್ಲಿ ಮುದ್ದೇಬಿಹಾಳ ಪೊಲೀಸ್​ ಠಾಣೆಯಲ್ಲಿ ಎರಡನೇ ಪೋಕ್ಸೋ ಕೇಸ್​ ದಾಖಲಾಗಿದೆ.

ವಿಜಯಪುರ: ಚುಡಾಯಿಸಿದ್ದಕ್ಕೆ ಮನನೊಂದ ಬಾಲಕಿ ನೇಣಿಗೆ ಶರಣು, 1 ತಿಂಗಳ ಅಂತರದಲ್ಲಿ 2ನೇ ಪೋಕ್ಸೋ ಕೇಸ್​
ಸಾಂದರ್ಭಿಕ ಚಿತ್ರ
ಅಶೋಕ ಯಡಳ್ಳಿ, ವಿಜಯಪುರ
| Edited By: ವಿವೇಕ ಬಿರಾದಾರ|

Updated on:Dec 03, 2024 | 4:36 PM

Share

ವಿಜಯಪುರ, ಡಿಸೆಂಬರ್​ 03: ಯುವಕ ಚುಡಾಯಿಸಿದ್ದಕ್ಕೆ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುದ್ದೇಬಿಹಾಳ (Muddebihal) ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಸಂಗಮೇಶ ಜುಂಜವಾರ ಎಂಬ ಯುವಕ ಅಪ್ರಾಪ್ತೆಯ ಹಿಂದೆ ಬಿದ್ದಿದ್ದನು. ಕಾಲೇಜಿಗೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿ ಚುಡಾಯಿಸುತ್ತಿದ್ದನು. ಪ್ರೀತಿ ಪ್ರೇಮದ ಹೆಸರಿನಲ್ಲಿ ಬಾಲಕಿಗೆ ಕಿರುಕುಳ ನೀಡುತ್ತಿದ್ದನು ಎಂಬ ಆರೋಪ ಕೇಳಿಬಂದಿದೆ.

ಅಲ್ಲದೇ, ಇತ್ತೀಚೆಗೆ ಬಾಲಕಿ ಕಾಲೇಜಿಗೆ ಹೋಗುವಾಗ ಮೈ-ಕೈ ಮುಟ್ಟಿ ಮಾತನಾಡಿಸಿದ್ದನು. ನಿನ್ನ ಪ್ರೀತಿಸುವೆ, ನೀನೂ ನನ್ನ ಪ್ರೀತಿಸು ಎಂದು ಬಲವಂತ ಮಾಡಿದ್ದನು. ಇದನ್ನು ಪ್ರಶ್ನೆ ಮಾಡಿದ್ದ ಬಾಲಕಿಯ ಸಹೋದರನಿಗೆ ಸಂಗಮೇಶ ಜೀವ ಬೆದರಿಕೆ ಹಾಕಿ ಹಲ್ಲೆ ಮಾಡಿದ್ದನು ಎಂಬ ಆರೋಪವಿದೆ. ಈ ಕುರಿತು ಬಾಲಕಿ ನವೆಂಬರ್ 27 ರಂದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಸಂಗಮೇಶ ಜುಂಜವಾರ, ಮೌನೇಶ ಮಾದರ, ಚಿದಾನಂದ ಕಟ್ಟಿಮನಿ ವಿರುದ್ಧ ದೂರು ನೀಡಿದ್ದಳು.

ಬಾಲಕಿ ದೂರಿನ ಆಧಾರದ ಮೇಲೆ, ಮುದ್ದೇಬಿಹಾಳ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪ್ರಮುಖ ಆರೋಪಿಗಳಾದ ಸಂಗಮೇಶ ಜುಂಜವಾರ, ಮೌನೇಶ ಮಾದರನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಯುವಕನ ಶವ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹತ್ಯೆಗೆ ಕಾರಣವಾಯ್ತಾ ವಿಧವೆಯೊಂದಿಗಿನ ಲವ್​?

ಆದರೆ, ಇದೆಲ್ಲದ್ದರಿಂದ ನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಶರಣಾಗಿದ್ದಕ್ಕೆ ಬಾಲಕಿಯ ಸಮಾಜದ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕಿ ಸಾವಿಗೆ ಸಂಗಮೇಶ ಕಿರುಕುಳವೇ ಕಾರಣವೆಂದು ಆರೋಪಿಸಿದ್ದಾರೆ.

ಬಾಲಕಿಗೆ ತಾಳಿ ಕಟ್ಟಿದ್ದ ಯುವಕ

ಇತ್ತೀಚಿಗೆ ಇದೇ ಮುದ್ದೇಬಿಹಾಳ ಪಟ್ಟಣದಲ್ಲಿ ಅಪ್ರಾಪ್ತ ಬಾಲಕಿಗೆ ಯುವಕ ತಾಳಿ ಕಟ್ಟಿದ್ದ ಘಟನೆ ನಡೆದಿತ್ತು. ಸರ್ಕಾರಿ ವಸತಿ ಶಾಲೆಯ ಬಳಿ ಅಪ್ರಾಪ್ತ ಬಾಲಕಿಗೆ ಯುವಕನೊಬ್ಬ ತಾಳಿ ಕಟ್ಟಿದ್ದನು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ಘಟನೆ ನವೆಂಬರ್ 24ರಂದು ನಡೆದಿತ್ತು.

ತಾಳಿ ಕಟ್ಟಿದ ಬಗ್ಗೆ ಅಪ್ರಾಪ್ತ ಬಾಲಕಿ ಪೋಷಕರಿಗೆ ಮಾಹಿತಿ ನೀಡಿದ್ದಳು. ಮುದ್ದೇಬಿಹಾಳ ಠಾಣೆಯಲ್ಲಿ ಇಬ್ಬರ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:50 pm, Tue, 3 December 24

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!