Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್​ ಸೇರಿ 35 ಸದಸ್ಯರ ಸದಸ್ಯತ್ವ ಅನರ್ಹ: ಇಲ್ಲಿದೆ ಕಾರಣ

ವಿಜಯಪುರ ಮಹಾನಗರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್​​ ಸೇರಿದಂತೆ 35 ಸದಸ್ಯರ ಸದಸ್ಯತ್ವವನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರು ಅನರ್ಹಗೊಳಿಸಿದ್ದಾರೆ. ಕಲಬುರಗಿ ಹೈಕೋರ್ಟ್‌ ಪೀಠ ಆದೇಶ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ. ಆಸ್ತಿ ಘೋಷಣೆ ಸಂಬಂಧಿತ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯನ್ನು ಪರಿಗಣಿಸಿದ ಪೀಠ, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಪಾಲಿಕೆ ಚುನಾವಣೆ ಮತ್ತೆ ನಡೆಯುವ ಸಾಧ್ಯತೆ ಇದೆ.

ವಿಜಯಪುರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್​ ಸೇರಿ 35 ಸದಸ್ಯರ ಸದಸ್ಯತ್ವ ಅನರ್ಹ: ಇಲ್ಲಿದೆ ಕಾರಣ
ವಿಜಯಪುರ ಪಾಲಿಕೆಯ ಬಿಜೆಪಿ, ಕಾಂಗ್ರೆಸ್​ ಸೇರಿ 35 ಸದಸ್ಯರ ಸದಸ್ಯತ್ವ ಅನರ್ಹ: ಇಲ್ಲಿದೆ ಕಾರಣ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Mar 24, 2025 | 8:57 PM

ವಿಜಯಪುರ, ಮಾರ್ಚ್​ 24: ಮಹಾನಗರ ಪಾಲಿಕೆಯ (Municipal Corporation) 35 ಸದಸ್ಯರ ಸದಸ್ಯತ್ವವನ್ನು ಅನರ್ಹತೆ ಮಾಡಲಾಗಿದೆ. ಬೆಳಗಾವಿಯ ಪ್ರಾದೇಶಿಕ ಆಯುಕ್ತ ಸಂಜಯ ಶೆಟ್ಟೆಣ್ಣವರ ಅವರಿಂದ ಆದೇಶ ಹೊರಡಿಸಲಾಗಿದೆ. ಬಿಜೆಪಿಯ (bjp) 17, ಕಾಂಗ್ರೆಸ್​ನ 10, ಜೆಡಿಎಸ್​ನ ಓರ್ವ ಸದಸ್ಯ, ಎಂಐಎಂ ಇಬ್ಬರು ಮತ್ತು ಐವರು ಪಕ್ಷೇತರರ ಸದಸ್ಯತ್ವ ಅನರ್ಹಗೊಳಿಸಲಾಗಿದೆ. ಚುನಾವಣೆಯಲ್ಲಿ ಆಸ್ತಿ ಘೋಷಣೆ ಸಂಬಂಧಿತ ಪ್ರಕರಣದಲ್ಲಿ ಮಾಜಿ ಸದಸ್ಯರ ಅರ್ಜಿಯನ್ನು ಪರಿಗಣಿಸಿದ ಬೀಳಗಿ ಕಲಬುರಗಿ ಪೀಠ, ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿತ್ತು. ಈ ಹಿನ್ನೆಲೆ ಅನರ್ಹಗೊಳಿಸಲಾಗಿದೆ.

2022ರ ಪಾಲಿಕೆ ಚುನಾವಣೆಯಲ್ಲಿ ಸದಸ್ಯರು ಆಯ್ಕೆಯಾಗಿದ್ದರು. ಬಳಿಕ 2024ರ ಜ.9ರಂದು ಮೇಯರ್ ಚುನಾವಣೆ ನಡೆದಿತ್ತು. ಕಾಂಗ್ರೆಸ್​ನ ಮೆಹೆಜಬೀನ್ ಹೊರ್ತಿ ಮೇಯರ್ ಮತ್ತು ದಿನೇಶ್​ ಹಳ್ಳಿ ಉಪಮೇಯರ್ ಆಗಿ ಆಯ್ಕೆಗೊಂಡಿದ್ದರು. ಆದರೆ ಯಾವ ಸದಸ್ಯರು ಕಾನೂನು ಪ್ರಕಾರ ಆಸ್ತಿ ಘೋಷಿಸಿರಲಿಲ್ಲ.

ಇದನ್ನೂ ಓದಿ: ನಾಳೆ ವಿಜಯಪುರ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ: ಬಿಜೆಪಿ, ಕಾಂಗ್ರೆಸ್​ ಮಧ್ಯೆ ತೀವ್ರ ಹಣಾಹಣಿ

ಇದನ್ನೂ ಓದಿ
Image
ಭೂ ಒತ್ತುವರಿ ಆರೋಪ: ನೋಟಿಸ್‌ ವಿರುದ್ಧ ಕೋರ್ಟ್​ ಮೆಟ್ಟಿಲೇರಿದ ಎಚ್​ಡಿಕೆ
Image
ನಾಳೆ ವಿಜಯಪುರ ಮಹಾನಗರ ಪಾಲಿಕೆಯ ಮೇಯರ್ ಚುನಾವಣೆ
Image
ವಿಜಯಪುರ ಮಹಾನಗರ ಪಾಲಿಕೆ ಕಾಂಗ್ರೆಸ್​ ತೆಕ್ಕೆಗೆ, ಯತ್ನಾಳ್​ಗೆ ಮುಖಭಂಗ
Image
ವಿಜಯಪುರ ಪಾಲಿಕೆ: ಖಾತೆ ತೆರೆದ ಎಐಎಂಐಎಂ! ಆಧಿಕಾರದ ಹೊಸ್ತಿಲಲ್ಲಿ ಬಿಜೆಪಿ, ಜೆಡಿಎಸ್ 1ಕ್ಕೆ ತೃಪ್ತಿ, ಎಎಪಿಗೆ ಮುಖಭಂಗ -ಫಲಿತಾಂಶ ವಿಶ್ಲೇಷಣೆ

ಇದನ್ನು ಪ್ರಶ್ನಿಸಿ ಮಾಜಿ ಸದಸ್ಯ ಪ್ರಕಾಶ ಮಿರ್ಜಿ ಮೈನುದ್ದೀನ್ ಬೀಳಗಿ ಕಲಬುರಗಿ ಪೀಠ ಮೊರೆ ಹೋಗಿದ್ದರು. ಹೈಕೋರ್ಟ್ ಸರ್ಕಾರಕ್ಕೆ ಕ್ರಮ ತೆಗೆದುಕೊಳ್ಳಲು ಸೂಚಿಸಿತ್ತು. ಈ ಹಿನ್ನೆಲೆ ಪರಿಶೀಲನೆ ಮಾಡಿ ಅನರ್ಹತೆ ಮಾಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ಮಹಾನಗರ ಪಾಲಿಕೆಗೆ ಮತ್ತೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಒಟ್ಟು 35 ಸದಸ್ಯ ಬಲದ ಮಹಾನಗರ ಪಾಲಿಕೆಯ ಗದ್ದುಗೆಗಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಮಧ್ಯೆ ಹೋರಾಟ ನಡೆದಿತ್ತು. ಸಾಮಾನ್ಯ ವರ್ಗಕ್ಕೆ ಮೀಸಲಾಗಿರುವ ಮೇಯರ್ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ವಾರ್ಡ್ ನಂಬ್ 34 ರ ಕಾಂಗ್ರೆಸ್ ಸದಸ್ಯೆ ಮಾಹೇಜಬೀನ್ ಅಬ್ದುಲ್ ರಜಾಕ್ ಹೊರ್ತಿ ಹಾಗೂ ಎಸ್​ಟಿ ಪುರುಷ ಮೀಸಲಾತಿ ಇರುವ ಉಪ ಮೇಯರ್ ಸ್ಥಾನಕ್ಕೆ ವಾರ್ಡ್ ನಂಬರ್ 19 ರ ಕಾಂಗ್ರೆಸ್ ಸದಸ್ಯ ದಿನೇಶ್ ಹಳ್ಳಿ ಸ್ಪರ್ಧೆ ಮಾಡಿದ್ದರು. ಇವರ ಆಯ್ಕೆ ಬಹುತೇಕ ಖಚಿತವೆಂದು ಚುನಾವಣಾ ಫಲಿತಾಂಶಕ್ಕೂ ಮುಂಚೆ ಹೇಳಲಾಗಿತ್ತು.

ಇನ್ನು ಚುನಾವಣೆ ನಡೆದು ಫಲಿತಾಂಶ ಬಂದ ಬಳಿಕ ಪಾಲಿಕೆ ಮೇಯರ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಮಹೆಜಬೀನ್ ಹೊರ್ತಿ ಒಟ್ಟು 22 ಮತ ಪಡೆದು ಮೇಯರ್ ಆಗಿ ಆಯ್ಕೆಯಾಗಿದ್ದರು. ಎಸ್​ಟಿಗೆ ಮೀಸಲಾಗಿದ್ದ ಉಪಮೇಯರ್ ಸ್ಥಾನಕ್ಕೆ ಕಾಂಗ್ರೆಸ್​ನ ದಿನೇಶ್ ಹಳ್ಳಿ ಅವಿರೋಧವಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: ವಿಜಯಪುರ ಪಾಲಿಕೆ: ಖಾತೆ ತೆರೆದ ಎಐಎಂಐಎಂ! ಆಧಿಕಾರದ ಹೊಸ್ತಿಲಲ್ಲಿ ಬಿಜೆಪಿ, ಜೆಡಿಎಸ್ 1ಕ್ಕೆ ತೃಪ್ತಿ, ಎಎಪಿಗೆ ಮುಖಭಂಗ -ಫಲಿತಾಂಶ ವಿಶ್ಲೇಷಣೆ

10 ಕಾಂಗ್ರೆಸ್ ಸದಸ್ಯರು ಐವರು ಪಕ್ಷೇತರರು, ಇಬ್ಬರು ಎಐಎಂಐಎಂ, ಓರ್ವ ಜೆಡಿಎಸ್ ಸದಸ್ಯರ ಬೆಂಬಲ ಹಾಗೂ ಶಾಸಕರಾದ ಎಂಬಿ ಪಾಟೀಲ್, ವಿಠ್ಠಲ್ ಕಟಕದೊಂಡ, ಪರಿಷತ್ ಸದಸ್ಯರಾದ ಸುನಿಲಗೌಡ ಪಾಟೀಲ್, ಪ್ರಕಾಶ್ ರಾಥೋಡ್ ಮತಗಳ ಬೆಂಬಲದೊಂದಿಗೆ ಕಾಂಗ್ರೆಸ್​ ಗೆಲುವಿನ ನಗೆ ಬೀರುವಲ್ಲಿ ಯಶಸ್ವಿಯಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ