AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ
ಜಾಪರ್ ಬೆಣ್ಣಿ
TV9 Web
| Edited By: ಆಯೇಷಾ ಬಾನು|

Updated on:Dec 03, 2022 | 10:34 AM

Share

ವಿಜಯಪುರ: ಕರ್ನಾಟಕದಲ್ಲಿ ಕಳೆದ ಒಂದು ವರ್ಷಕ್ಕಿಂತ ಆಧಿಕ ಸಮಯದಿಂದ ಕೋಮುಸೌಹಾರ್ಧತೆಗೆ ಧಕ್ಕೆ ತರೋ ಘಟನೆಗಳು ನಡೆಯುತ್ತಾ ಬಂದಿವೆ. ಹಿಜಾಬ್, ಜಟ್ಕಾ ಕಟ್ ಹಲಾಲ್ ಕಟ್, ಹಿಂದೂ ದೇವಸ್ಥಾನಗಳ ಮುಂದೆ ಮುಸ್ಲಿಂ ವ್ಯಾಪಾರಸ್ಥರು ವ್ಯಾಪಾರ ಮಾಡಲು ತಡೆ, ಹಿಂದೂ ಯುವಕರ ಹತ್ಯೆ ಮುಸ್ಲಿಂ ಯುವಕರ ಹತ್ಯೆಯಂಥ ಘಟನೆಗಳು ನಡೆದಿವೆ. ಇಷ್ಟರ ಮಧ್ಯೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಲು ಮುಸ್ಲಿಂ ವ್ಯಕ್ತಿಯೋರ್ವ(Muslim Man) ಹನುಮ ಮಲಾ ಧಾರಣೆ(Hanuma Maladharane) ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಮೂಲಕ ಕೋಮು ಸೌಹಾರ್ಧತೆ ಮೆರೆದಿದ್ಧಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ. ನೆರೆಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಆಂಜನೇಯನ ಹನುಮ ಮಾಲಾ ವೃತಾಚರಣೆ ಮಾಡುವ ಮೂಲಕ ಸೋದರತೆಯನ್ನು ಸಾರಿದ್ದಾರೆ. ಹಣೆಗೆ ಗಂಧ ಇರಿಸಿ, ತಿಲಕ ಹಚ್ಚಿಕೊಂಡು, ಕೇಸರಿ ವಸ್ತ್ರ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್ ಬೆಣ್ಣಿ ಇಂದು ನಮಗೆಲ್ಲಾ ಮಾದರಿಯಾಗಿದ್ದಾರೆ. ಹನುಮ ಮಾಲಾ ವೃತಾಚರಣೆ ಅಂಗವಾಗಿ ಜಾಫರ್ ಬೆಣ್ಣಿ ಅವರು ನಿತ್ಯ ಹಿಂದೂ ದೇವಾಲಯದ ಪೂಜೆಗಳಲ್ಲಿ ಭಾಗಿಯಾಗಿ, ದೇವರ ಸ್ತುತಿಗಳನ್ನು ಹಾಡುತ್ತಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹೊರಟಿರೋ ಜಾಫರ್ ಅವರು ಅಂಜನಾದ್ರಿ ಬೆಟ್ಟದಲ್ಲಿ ಹನುಮದೇವನಿಗೆ ಪೂಜೆ ಸಲ್ಲಿಸಿ ಹನುಮ ಮಾಲಾಧಾರ ವೃತ ಮುಕ್ತಾಯ ಮಾಡೋದಾಗಿ ಮಾಹಿತಿ ನೀಡಿದ್ದಾರೆ. ಬಸವನಾಡಿನಲ್ಲಿ ಐಕ್ಯತೆ ಸಾರಿರೋ ಜಾಫರ್ ಅವರ ನಡೆಗೆ ಹಿಂದೂ ಮುಸ್ಲಿಂ ಸಮುದಾಯದವರು ಮೆಚ್ಚುಗೆ ವ್ಯಕ್ತಪಡಿದಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Sat, 3 December 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ