AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ
ಜಾಪರ್ ಬೆಣ್ಣಿ
Follow us
TV9 Web
| Updated By: ಆಯೇಷಾ ಬಾನು

Updated on:Dec 03, 2022 | 10:34 AM

ವಿಜಯಪುರ: ಕರ್ನಾಟಕದಲ್ಲಿ ಕಳೆದ ಒಂದು ವರ್ಷಕ್ಕಿಂತ ಆಧಿಕ ಸಮಯದಿಂದ ಕೋಮುಸೌಹಾರ್ಧತೆಗೆ ಧಕ್ಕೆ ತರೋ ಘಟನೆಗಳು ನಡೆಯುತ್ತಾ ಬಂದಿವೆ. ಹಿಜಾಬ್, ಜಟ್ಕಾ ಕಟ್ ಹಲಾಲ್ ಕಟ್, ಹಿಂದೂ ದೇವಸ್ಥಾನಗಳ ಮುಂದೆ ಮುಸ್ಲಿಂ ವ್ಯಾಪಾರಸ್ಥರು ವ್ಯಾಪಾರ ಮಾಡಲು ತಡೆ, ಹಿಂದೂ ಯುವಕರ ಹತ್ಯೆ ಮುಸ್ಲಿಂ ಯುವಕರ ಹತ್ಯೆಯಂಥ ಘಟನೆಗಳು ನಡೆದಿವೆ. ಇಷ್ಟರ ಮಧ್ಯೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಲು ಮುಸ್ಲಿಂ ವ್ಯಕ್ತಿಯೋರ್ವ(Muslim Man) ಹನುಮ ಮಲಾ ಧಾರಣೆ(Hanuma Maladharane) ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಮೂಲಕ ಕೋಮು ಸೌಹಾರ್ಧತೆ ಮೆರೆದಿದ್ಧಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ. ನೆರೆಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಆಂಜನೇಯನ ಹನುಮ ಮಾಲಾ ವೃತಾಚರಣೆ ಮಾಡುವ ಮೂಲಕ ಸೋದರತೆಯನ್ನು ಸಾರಿದ್ದಾರೆ. ಹಣೆಗೆ ಗಂಧ ಇರಿಸಿ, ತಿಲಕ ಹಚ್ಚಿಕೊಂಡು, ಕೇಸರಿ ವಸ್ತ್ರ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್ ಬೆಣ್ಣಿ ಇಂದು ನಮಗೆಲ್ಲಾ ಮಾದರಿಯಾಗಿದ್ದಾರೆ. ಹನುಮ ಮಾಲಾ ವೃತಾಚರಣೆ ಅಂಗವಾಗಿ ಜಾಫರ್ ಬೆಣ್ಣಿ ಅವರು ನಿತ್ಯ ಹಿಂದೂ ದೇವಾಲಯದ ಪೂಜೆಗಳಲ್ಲಿ ಭಾಗಿಯಾಗಿ, ದೇವರ ಸ್ತುತಿಗಳನ್ನು ಹಾಡುತ್ತಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹೊರಟಿರೋ ಜಾಫರ್ ಅವರು ಅಂಜನಾದ್ರಿ ಬೆಟ್ಟದಲ್ಲಿ ಹನುಮದೇವನಿಗೆ ಪೂಜೆ ಸಲ್ಲಿಸಿ ಹನುಮ ಮಾಲಾಧಾರ ವೃತ ಮುಕ್ತಾಯ ಮಾಡೋದಾಗಿ ಮಾಹಿತಿ ನೀಡಿದ್ದಾರೆ. ಬಸವನಾಡಿನಲ್ಲಿ ಐಕ್ಯತೆ ಸಾರಿರೋ ಜಾಫರ್ ಅವರ ನಡೆಗೆ ಹಿಂದೂ ಮುಸ್ಲಿಂ ಸಮುದಾಯದವರು ಮೆಚ್ಚುಗೆ ವ್ಯಕ್ತಪಡಿದಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Sat, 3 December 22

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ