AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.

ಕೊಪ್ಪಳದ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಮಾಲೆ ಧರಿಸಿ ಭಾವೈಕ್ಯತೆ ಮೆರೆದ ಮುಸ್ಲಿಂ ವ್ಯಕ್ತಿ
ಜಾಪರ್ ಬೆಣ್ಣಿ
TV9 Web
| Edited By: ಆಯೇಷಾ ಬಾನು|

Updated on:Dec 03, 2022 | 10:34 AM

Share

ವಿಜಯಪುರ: ಕರ್ನಾಟಕದಲ್ಲಿ ಕಳೆದ ಒಂದು ವರ್ಷಕ್ಕಿಂತ ಆಧಿಕ ಸಮಯದಿಂದ ಕೋಮುಸೌಹಾರ್ಧತೆಗೆ ಧಕ್ಕೆ ತರೋ ಘಟನೆಗಳು ನಡೆಯುತ್ತಾ ಬಂದಿವೆ. ಹಿಜಾಬ್, ಜಟ್ಕಾ ಕಟ್ ಹಲಾಲ್ ಕಟ್, ಹಿಂದೂ ದೇವಸ್ಥಾನಗಳ ಮುಂದೆ ಮುಸ್ಲಿಂ ವ್ಯಾಪಾರಸ್ಥರು ವ್ಯಾಪಾರ ಮಾಡಲು ತಡೆ, ಹಿಂದೂ ಯುವಕರ ಹತ್ಯೆ ಮುಸ್ಲಿಂ ಯುವಕರ ಹತ್ಯೆಯಂಥ ಘಟನೆಗಳು ನಡೆದಿವೆ. ಇಷ್ಟರ ಮಧ್ಯೆ ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರಲು ಮುಸ್ಲಿಂ ವ್ಯಕ್ತಿಯೋರ್ವ(Muslim Man) ಹನುಮ ಮಲಾ ಧಾರಣೆ(Hanuma Maladharane) ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ. ಈ ಮೂಲಕ ಕೋಮು ಸೌಹಾರ್ಧತೆ ಮೆರೆದಿದ್ಧಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ನರಸಲಗಹಿ ಗ್ರಾಮದ ಜಾಪರ್ ಬೆಣ್ಣಿ ಎಂಬ ವ್ಯಕ್ತಿ ಹನುಮ ಮಾಲಾ ಧರಿಸಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ. ನೆರೆಯ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಆಂಜನೇಯನ ಹನುಮ ಮಾಲಾ ವೃತಾಚರಣೆ ಮಾಡುವ ಮೂಲಕ ಸೋದರತೆಯನ್ನು ಸಾರಿದ್ದಾರೆ. ಹಣೆಗೆ ಗಂಧ ಇರಿಸಿ, ತಿಲಕ ಹಚ್ಚಿಕೊಂಡು, ಕೇಸರಿ ವಸ್ತ್ರ ಧರಿಸಿ, ಹನುಮ ಮಾಲಾ ದೀಕ್ಷೆ ಪಡೆದಿರುವ ಜಾಫರ್ ಬೆಣ್ಣಿ ಇಂದು ನಮಗೆಲ್ಲಾ ಮಾದರಿಯಾಗಿದ್ದಾರೆ. ಹನುಮ ಮಾಲಾ ವೃತಾಚರಣೆ ಅಂಗವಾಗಿ ಜಾಫರ್ ಬೆಣ್ಣಿ ಅವರು ನಿತ್ಯ ಹಿಂದೂ ದೇವಾಲಯದ ಪೂಜೆಗಳಲ್ಲಿ ಭಾಗಿಯಾಗಿ, ದೇವರ ಸ್ತುತಿಗಳನ್ನು ಹಾಡುತ್ತಾರೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಹೊರಟಿರೋ ಜಾಫರ್ ಅವರು ಅಂಜನಾದ್ರಿ ಬೆಟ್ಟದಲ್ಲಿ ಹನುಮದೇವನಿಗೆ ಪೂಜೆ ಸಲ್ಲಿಸಿ ಹನುಮ ಮಾಲಾಧಾರ ವೃತ ಮುಕ್ತಾಯ ಮಾಡೋದಾಗಿ ಮಾಹಿತಿ ನೀಡಿದ್ದಾರೆ. ಬಸವನಾಡಿನಲ್ಲಿ ಐಕ್ಯತೆ ಸಾರಿರೋ ಜಾಫರ್ ಅವರ ನಡೆಗೆ ಹಿಂದೂ ಮುಸ್ಲಿಂ ಸಮುದಾಯದವರು ಮೆಚ್ಚುಗೆ ವ್ಯಕ್ತಪಡಿದಿದ್ದಾರೆ.

ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ

ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:04 am, Sat, 3 December 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್