ವಿಜಯಪುರ: ಮಹಿಳೆ ಜೊತೆ ಬಂದಿದ್ದ ಯುವಕ ಹೊಂಡಕ್ಕೆ ಹಾರಿ ಸಾವಿಗೆ ಶರಣು, ಮಹಿಳೆ ಎಸ್ಕೇಪ್

25 ವರ್ಷ ವಯಸ್ಸಿನ ಯುವಕನೋರ್ವ ಇಂದು ಬೆಳಿಗ್ಗೆ(ಆ.31) ಮಹಿಳೆಯೊಂದಿಗೆ ಬಂದು ಹೊಂಡದಲ್ಲಿ ಬಿದ್ದಿದ್ದಾನೆ. ಶರ್ಟ್ ತೆಗೆದು ಹೊಂಡಕ್ಕೆ ಹಾರಲು ಇಬ್ಬರೂ ಮುಂದಾಗಿದ್ದರು. ಮೊದಲು ಯುವಕ ಹೊಂಡದಲ್ಲಿ ಹಾರಿದ್ದಾನೆ. ಯುವಕ ಹೊಂಡದಲ್ಲಿ ಹಾರುತ್ತಿದ್ದಂತೆ ಮಹಿಳೆ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ವಿಜಯಪುರ: ಮಹಿಳೆ ಜೊತೆ ಬಂದಿದ್ದ ಯುವಕ ಹೊಂಡಕ್ಕೆ ಹಾರಿ ಸಾವಿಗೆ ಶರಣು, ಮಹಿಳೆ ಎಸ್ಕೇಪ್
ಪ್ರಾತಿನಿಧಿಕ ಚಿತ್ರ
Edited By: ಆಯೇಷಾ ಬಾನು

Updated on: Aug 31, 2023 | 2:14 PM

ವಿಜಯಪುರ, ಆ.31: ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಮಹಿಳೆಯ ಜೊತೆ ಬಂದಿದ್ದ ಯುವಕ ಪುರಾತನ ಹೊಂಡಕ್ಕೆ ಬಿದ್ದು ಸಾವಿಗೆ ಶರಣಾದ ಘಟನೆ ವಿಜಯಪುರದಲ್ಲಿ ನಡೆದಿದೆ. ನಗರದ ಗಗನ್ ಮಹಲ್ ಹಾಗೂ ಜಿಲ್ಲಾಧಿಕಾರಿಗಳ ನಿವಾಸದ ಬಳಿ ಇರುವ ಪುರಾತನ ಹೊಂಡಕ್ಕೆ ಬಿದ್ದು ಯುವಕ ಪ್ರಾಣ ಕಳೆದುಕೊಂಡಿದ್ದಾನೆ. ಇನ್ನು ಯುವಕ ಹೊಂಡಕ್ಕೆ ಹಾರುತ್ತಿದ್ದಂತೆ ಜೊತೆಗಿದ್ದ ಮಹಿಳೆ ಎಸ್ಕೇಪ್ ಆಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಅಗ್ನಿಶಾಮಕ ದಳ ಸಿಬ್ಬಂದಿ ಶವವನ್ನು ಮೇಲೆ ಎತ್ತಿ ಗೋಲಗುಮ್ಮಟ ಪೊಲೀಸರ ವಶಕ್ಕೆ ಒಪ್ಪಿಸಿದ್ದು ಪೊಲೀಸರು ಮೃತ ಯುವಕನ ಗುರುತು ಪತ್ತೆಗಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.

25 ವರ್ಷ ವಯಸ್ಸಿನ ಯುವಕನೋರ್ವ ಇಂದು ಬೆಳಿಗ್ಗೆ(ಆ.31) ಮಹಿಳೆಯೊಂದಿಗೆ ಬಂದು ಹೊಂಡದಲ್ಲಿ ಬಿದ್ದಿದ್ದಾನೆ. ಶರ್ಟ್ ತೆಗೆದು ಹೊಂಡಕ್ಕೆ ಹಾರಲು ಇಬ್ಬರೂ ಮುಂದಾಗಿದ್ದರು. ಮೊದಲು ಯುವಕ ಹೊಂಡದಲ್ಲಿ ಹಾರಿದ್ದಾನೆ. ಯುವಕ ಹೊಂಡದಲ್ಲಿ ಹಾರುತ್ತಿದ್ದಂತೆ ಮಹಿಳೆ ಅಲ್ಲಿಂದ ಎಸ್ಕೇಪ್ ಆಗಿದ್ದಾಳೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸದ್ಯ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಯುವಕನ ಶವಕ್ಕಾಗಿ ಶೋಧ ನಡೆಸಿ ಮೂರು ಗಂಟೆಗಳ ನಂತರ ಶವ ಮೇಲೆತ್ತಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವಕ 25 ವರ್ಷ ವಯಸ್ಸಿನವನಾಗಿದ್ದು ಆತನ ಹೆಸರು, ವಿಳಾಸ ಪತ್ತೆಯಾಗಿಲ್ಲ. ಶವವನ್ನು ಗೋಲಗುಮ್ಮಟ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಪ್ರತ್ಯೇಕ ಘಟನೆ: ಮಂಗಳೂರಿನಲ್ಲಿ ಪ್ರಸಿದ್ಧ ಕಬಡ್ಡಿ ಆಟಗಾರ ಆತ್ಮಹತ್ಯೆ, ಬೆಂಗಳೂರಿನಲ್ಲಿ ಉದ್ಯಮಿ ಅನುಮಾನಾಸ್ಪದ ಸಾವು

ಅರಬ್ಬಿ ಸಮುದ್ರದಲ್ಲಿ ದೋಣಿ ಮುಳುಗಿ ಓರ್ವ ಮೀನುಗಾರ ಸಾವು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೋಡು ಬಂದರು ಸಮೀಪದ ಅರಬ್ಬಿ ಸಮುದ್ರದಲ್ಲಿ ದೋಣಿ ಮುಳುಗಿ ಓರ್ವ ಮೀನುಗಾರ ಮೃತಪಟ್ಟ ಘಟನೆ ನಡೆದಿದೆ. ಪ್ರಜ್ವಲ್ ಮಾಬ್ಲ ಖಾರ್ವಿ(19) ಮೃತ ಮೀನುಗಾರ. ಇನ್ನು ರಾಜು ಶೇಷಗಿರಿ ಎಂಬ ಮೀನುಗಾರನನ್ನು ರಕ್ಷಿಸಲಾಗಿದೆ. ಹೊನ್ನಾವರ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us