AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ

ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದ್ದು ಮಲಗಿದ್ದಲ್ಲೇ ಪತಿ-ಪತ್ನಿ ಸುಟ್ಟು ಕರಕಲಾಗಿದ್ದಾರೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ.

ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ, ಮಲಗಿದ್ದಲ್ಲೇ ಸುಟ್ಟು ಕರಕಲಾದ ವೃದ್ಧ ದಂಪತಿ
ಕರೀಂಸಾಬ್ ಟಪಾಲ್, ಸಾಜನಬೀ ಟಪಾಲ್
Follow us
TV9 Web
| Updated By: ಆಯೇಷಾ ಬಾನು

Updated on:Feb 26, 2023 | 9:52 AM

ವಿಜಯಪುರ: ಗುಡಿಸಲಿಗೆ ಆಕಸ್ಮಿಕ ಬೆಂಕಿ ತಗುಲಿ ವೃದ್ಧ ದಂಪತಿ ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ಹೊರವಲಯದ ಜಮೀನಿನಲ್ಲಿ ನಡೆದಿದೆ. ಕರೀಂಸಾಬ್ ಟಪಾಲ್(82), ಸಾಜನಬೀ ಟಪಾಲ್(72) ಮೃತ ವೃದ್ಧರು. ಮತ್ತೊಂದೆಡೆ ಯಾದಗಿರಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಗುಡಿಸಲು ಸುಟ್ಟು ಕರಕಲಾಗಿದೆ.

ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ಕರೀಂಸಾಬ್ ಟಪಾಲ್ ಮತ್ತು ಸಾಜನಬೀ ಟಪಾಲ್ ಎಂಬ ವೃದ್ಧ ದಂಪತಿ ವಾಸವಾಗಿದ್ದರು. ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿದ್ದು ಮಲಗಿದ್ದಲ್ಲೇ ಪತಿ-ಪತ್ನಿ ಸುಟ್ಟು ಕರಕಲಾಗಿದ್ದಾರೆ. ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: 8 ವರ್ಷಗಳ ಪ್ರೀತಿ: ಬರಸಿಡಿಲಿನಂತೆ ಬಂದು ಅಪ್ಪಳಿಸಿದ ಪ್ರೇಯಸಿಯ ಲಗ್ನ ಪತ್ರಿಕೆ, ವಿಷ ಕುಡಿದ ಪ್ರಿಯಕರ

ಸಿಲಿಂಡರ್ ಸ್ಫೋಟಕ್ಕೆ ಸುಟ್ಟು ಕರಕಲಾದ ಗುಡಿಸಲು

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಸಾಯಿ ನಗರ ಕ್ಯಾಂಪ್ ನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಗುಡಿಸಲು ಸುಟ್ಟು ಕರಕಲಾದ ಘಟನೆ ನಡೆದಿದೆ. ಆಂಧ್ರ ಮೂಲದ ಟಿ.ಮದು ಅವರಿಗೆ ಸೇರಿದ ಗುಡಿಸಲು ಇದಾಗಿದ್ದು ಸ್ನಾನ ಮಾಡಲು ನೀರು ಕಾಯಿಸಲು ಇಟ್ಟಾಗ ಸಿಲಿಂಡರ್ ಸ್ಪೋಟಗೊಂಡಿದೆ. ಗುಡಿಸಲಿನಲ್ಲಿದ್ದ 2 ಲಕ್ಷ ಹಣ, ವಾಷಿಂಗ್ ಮಷೀನ್, ಟಿವಿ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇನ್ನು ಮದು ಅವರು ಮಗಳ ಚಿಕಿತ್ಸೆಗಾಗಿ ಗುಡಿಸಲಲ್ಲಿ ಹಣ ತಂದಿಟ್ಟಿದ್ದರು. ಆದ್ರೆ ಈಗ ಹಣ ಸುಟ್ಟು ಹೋಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ‌ ಬಂದು ಬೆಂಕಿ ನಂದಿಸಿದ್ದಾರೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ, ಕಾರಿನಲ್ಲಿದ್ದ 4 ವರ್ಷದ ಮಗು ಸಾವು

ಕೊಪ್ಪಳ ತಾಲೂಕಿನ ಬಹದ್ದೂರ್​​ ಬಂಡಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮರುಳು ತುಂಬಿದ ಟ್ರ್ಯಾಕ್ಟರ್​ಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ 4 ವರ್ಷದ ಮಗು ಮೃತಪಟ್ಟಿದೆ. ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಗದಗದಿಂದ ಹೊಸಪೇಟೆಯತ್ತ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಕೊಪ್ಪಳ ಗ್ರಾಮೀಣ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Sun, 26 February 23

Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ