AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹ: ರೈತರ ಹೋರಾಟಕ್ಕೆ ಮಠಾಧೀಶರ ಸಾಥ್

Vijayapura News: ಒಣ ದ್ರಾಕ್ಷಿಗೆ ಸೂಕ್ತ ಬೆಲೆ ಸಿಗದ ಕಾರಣ ದ್ರಾಕ್ಷಿ ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ. ದ್ರಾಕ್ಷಿ ಬೆಳೆಗಾರರ ಸಮಸ್ಯೆ ಅರಿತ ಮಠಾಧೀಶರು ಸಹಿತ ರೈತರಿಗೆ ಬೆಂಬಲ ನೀಡಿ ನಿನ್ನೆ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಲಯದಲ್ಲಿ ಚಿಂತನ ಸಭೆ ನಡೆಸಿದರು.

ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹ: ರೈತರ ಹೋರಾಟಕ್ಕೆ ಮಠಾಧೀಶರ ಸಾಥ್
ಡಿಸಿ ಕಚೇರಿಗೆ ಮನವಿ ಸಲ್ಲಿಸಿದ ಮಠಾಧೀಶರು.
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ|

Updated on: Aug 06, 2023 | 8:57 PM

Share

ವಿಜಯಪುರ, ಆಗಸ್ಟ್​06: ರಾಜ್ಯದಲ್ಲೇ ಹೆಚ್ಚಾಗಿ ದ್ರಾಕ್ಷಿ (Grapes) ಬೆಳೆಯುವ ಜಿಲ್ಲೆ ಅಂದರೆ ಅದು ವಿಜಯಪುರ. ಈ ಜಿಲ್ಲೆ ದ್ರಾಕ್ಷಿಯ ಕಣಜ ಎಂದೇ ಪ್ರಸಿದ್ಧಿಯಾಗಿದೆ. ಆದರೆ ಈ ವರ್ಷ ಒಣದ್ರಾಕ್ಷಿ ದರ ಪಾತಾಳಕ್ಕೆ ಕುಸಿದಿದ್ದು, ದ್ರಾಕ್ಷಿ ಬೆಳೆಗಾರರು ಸಂಕಷ್ಟ ಸಿಲುಕಿದ್ದಾರೆ. ಒಣದ್ರಾಕ್ಷಿಗೆ ‌ಸರ್ಕರ ಬೆಂಬಲ ಬೆಲೆ ಘೋಷಿಸುವಂತೆ ರೈತರ (farmers) ಕೂಗಿದೆ. ಈಗ ರೈತರ ಹೋರಾಟಕ್ಕೆ ಮಠಾಧೀಶರು ಸಾಥ್ ನೀಡಿದ್ದಾರೆ. ದ್ರಾಕ್ಷಿ ಬೆಳೆದ ರೈತರಿಗೆ ಮತ್ತಷ್ಟು ಆನೆ ಬಲ ಬಂದಂತಾಗಿದೆ.

ಒಣ ದ್ರಾಕ್ಷಿಗೆ ಸೂಕ್ತ ಬೆಲೆ ಸಿಗದ ಕಾರಣ ದ್ರಾಕ್ಷಿ ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ. ದ್ರಾಕ್ಷಿ ಬೆಳೆಗಾರರ ಸಮಸ್ಯೆ ಅರಿತ ಮಠಾಧೀಶರು ಸಹಿತ ರೈತರಿಗೆ ಬೆಂಬಲ ನೀಡಿ ನಿನ್ನೆ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಲಯದಲ್ಲಿ ಚಿಂತನ ಸಭೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ಕೆಜಿಗೆ ಕನಿಷ್ಠ 150 ರಿಂದ 250 ರೂಪಾಯಿಗಳವರೆಗೆ ಬೆಂಬಲ ಬೆಲೆ ನೀಡಿ ನೇರವಾಗಿ ಖರೀದಿಸಬೇಕು. ನಾಡಿನ ರೈತರು ಪ್ರತಿ ವರ್ಷ ಒಂದಿಲ್ಲ ಒಂದು ರೀತಿಯ ಸಂಕಷ್ಟ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಟೊಮೆಟೊ ಆಯ್ತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ದ್ರಾಕ್ಷಿ ಬೆಳೆದ ರೈತರ ಪರಿಸ್ಥಿತಿ ಹೇಳ ತೀರದಂತಾಗಿದೆ. ಒಣ ದ್ರಾಕ್ಷಿ ಮಾನವಕುಲಕ್ಕೆ ಅತ್ಯಂತ ಸಹಕಾರಿಯಾಗಿದೆ. ಇದು ಮಕ್ಕಳ ಆರೋಗ್ಯಕ್ಕೆ ಹಾಗೂ ಜನಸಾಮಾನ್ಯರಿಗೆ 20ಕ್ಕೂ ಹೆಚ್ಚು ರೋಗಗಳಿಗೆ ಔಷಧಿಯ ಗುಣ ಹೊಂದಿದೆ. ಪೋಷಕಾಂಶಗಳಾದ ವಿಟಮಿನ್ ಬಿ 6, ವಿಟಮಿನ್ ಸಿ, ಗ್ಲೂಕೋಸ್, ಕ್ಯಾಲ್ಸಿಯಮ್, ಮೈಗ್ನಿಸಿಯಮ್, ಪೋಟ್ಯಾಸಿಯಂ, ಐರನ್ ಸೇರಿದಂತೆ ಹಲವಾರು ವಿಟಮಿನ್‌ಗಳು ಇವೆ.

ಒಣದ್ರಾಕ್ಷಿ ಸೇವಿಸುವುದರಿಂದ ಮಕ್ಕಳಲ್ಲಿ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ. ಪ್ರತಿ ನಿತ್ಯ ಅಂಗನವಾಡಿ, ಸರ್ಕಾರಿ, ಮೊರಾರ್ಜಿ, ಇನ್ನಿತರ ಶಾಲಾ ಮಕ್ಕಳಿಗೆ ಹಾಗೂ ಸೈನಿಕರಿಗೆ ಸರಕಾರಿ ಆಸ್ಪತ್ರೆ ರೋಗಿಗಳಿಗೆ ಕನಿಷ್ಠ 50 ಗ್ರಾಂ ಒಣದ್ರಾಕ್ಷಿ ವಿತರಿಸಬೇಕು. ಹೀಗಾಗಿ ದ್ರಾಕ್ಷಿ ಬೆಳೆಗೆ ಸೂಕ್ತ ಬೆಂಬಲ ಬೆಲೆ ರಾಜ್ಯ ಸರ್ಕಾರ ನೀಡಿ ಖರೀದಿ ಮಾಡಬೇಕು ಎಂದು ಚಿಂತನ ಸಭೆಯಲ್ಲಿ ಚರ್ಚಿಸಿ ‌ಬಳಿಕ ನೇರವಾಗಿ ಡಿಸಿ ಕಚೇರಿಗೆ ಆಗಮಿಸುವ ಮೂಲಕ ಮನವಿಯನ್ನು ಸಲ್ಲಿಸಿದರು

ಇದನ್ನೂ ಓದಿ: ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಕರ್ನಾಟಕ ರಾಜ್ಯದಲ್ಲಿ ದ್ರಾಕ್ಷಿ ಬೆಳೆಯನ್ನು ಅಂದಾಜು 90 ಸಾವಿರದಿಂರ 95 ಸಾವಿರ ಎಕರೆಯಲ್ಲಿ ಬೆಳೆಯುತ್ತಿದ್ದು, 7 ರಿಂದ 8.5 ಲಕ್ಷ ಮೆಟ್ರಿಕ್ ಟನ್ ದ್ರಾಕ್ಷಿ ಉತ್ಪಾದನೆಯಾಗುತ್ತಿದೆ. ದೇಶದಲ್ಲಿಯೇ ಮಹಾರಾಷ್ಟ್ರದ ನಂತರದಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ, ಪ್ರತಿ ವರ್ಷ ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆಗೆ ತುತ್ತಾಗಿ ಸಂಕಷ್ಟ ಸಿಲುಕುತ್ತಿದ್ದಾರೆ. ಆದರೆ ಸರ್ಕಾರ ದ್ರಾಕ್ಷಿ ಬೆಳೆಗಾರರ ನೆರವಿಗೆ ಬಂದಿಲ್ಲ.

ಈಗ ಒಣ ದ್ರಾಕ್ಷಿಯ ಬೆಲೆ ಸಂಪೂರ್ಣವಾಗಿ ಕುಸಿತಗೊಂಡಿದ್ದು 70 ರಿಂದ 100 ಕೆಜಿಗೆ ಮಾರಾಟವಾಗುತ್ತಿದೆ. ಹೀಗಾಗಿ ರೈತರು ಸಂಕಷ್ಟದಲ್ಲಿ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಮಾಡಿದರು. ಸಾಂಕೇತಿಕ ಸಭೆ ನಡೆಸಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಮುಂಬರುವ ದಿನಗಳಲ್ಲಿ ತಮ್ಮ ಬೇಡಿಕೆ ಇಡೇರಿಸದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ದ್ರಾಕ್ಷೆ ಬೆಳೆಗಾರರು ಹಾಗೂ ಸ್ವಾಮಿಜಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು