AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹ: ರೈತರ ಹೋರಾಟಕ್ಕೆ ಮಠಾಧೀಶರ ಸಾಥ್

Vijayapura News: ಒಣ ದ್ರಾಕ್ಷಿಗೆ ಸೂಕ್ತ ಬೆಲೆ ಸಿಗದ ಕಾರಣ ದ್ರಾಕ್ಷಿ ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ. ದ್ರಾಕ್ಷಿ ಬೆಳೆಗಾರರ ಸಮಸ್ಯೆ ಅರಿತ ಮಠಾಧೀಶರು ಸಹಿತ ರೈತರಿಗೆ ಬೆಂಬಲ ನೀಡಿ ನಿನ್ನೆ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಲಯದಲ್ಲಿ ಚಿಂತನ ಸಭೆ ನಡೆಸಿದರು.

ಒಣದ್ರಾಕ್ಷಿಗೆ ಬೆಂಬಲ ಬೆಲೆ ಘೋಷಿಸುವಂತೆ ಸರ್ಕಾರಕ್ಕೆ ಆಗ್ರಹ: ರೈತರ ಹೋರಾಟಕ್ಕೆ ಮಠಾಧೀಶರ ಸಾಥ್
ಡಿಸಿ ಕಚೇರಿಗೆ ಮನವಿ ಸಲ್ಲಿಸಿದ ಮಠಾಧೀಶರು.
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 06, 2023 | 8:57 PM

Share

ವಿಜಯಪುರ, ಆಗಸ್ಟ್​06: ರಾಜ್ಯದಲ್ಲೇ ಹೆಚ್ಚಾಗಿ ದ್ರಾಕ್ಷಿ (Grapes) ಬೆಳೆಯುವ ಜಿಲ್ಲೆ ಅಂದರೆ ಅದು ವಿಜಯಪುರ. ಈ ಜಿಲ್ಲೆ ದ್ರಾಕ್ಷಿಯ ಕಣಜ ಎಂದೇ ಪ್ರಸಿದ್ಧಿಯಾಗಿದೆ. ಆದರೆ ಈ ವರ್ಷ ಒಣದ್ರಾಕ್ಷಿ ದರ ಪಾತಾಳಕ್ಕೆ ಕುಸಿದಿದ್ದು, ದ್ರಾಕ್ಷಿ ಬೆಳೆಗಾರರು ಸಂಕಷ್ಟ ಸಿಲುಕಿದ್ದಾರೆ. ಒಣದ್ರಾಕ್ಷಿಗೆ ‌ಸರ್ಕರ ಬೆಂಬಲ ಬೆಲೆ ಘೋಷಿಸುವಂತೆ ರೈತರ (farmers) ಕೂಗಿದೆ. ಈಗ ರೈತರ ಹೋರಾಟಕ್ಕೆ ಮಠಾಧೀಶರು ಸಾಥ್ ನೀಡಿದ್ದಾರೆ. ದ್ರಾಕ್ಷಿ ಬೆಳೆದ ರೈತರಿಗೆ ಮತ್ತಷ್ಟು ಆನೆ ಬಲ ಬಂದಂತಾಗಿದೆ.

ಒಣ ದ್ರಾಕ್ಷಿಗೆ ಸೂಕ್ತ ಬೆಲೆ ಸಿಗದ ಕಾರಣ ದ್ರಾಕ್ಷಿ ಬೆಳೆಗಾರರು ಹೋರಾಟದ ಹಾದಿ ಹಿಡಿದಿದ್ದಾರೆ. ದ್ರಾಕ್ಷಿ ಬೆಳೆಗಾರರ ಸಮಸ್ಯೆ ಅರಿತ ಮಠಾಧೀಶರು ಸಹಿತ ರೈತರಿಗೆ ಬೆಂಬಲ ನೀಡಿ ನಿನ್ನೆ ವಿಜಯಪುರ ನಗರದ ಹೇಮರೆಡ್ಡಿ ಮಲ್ಲಮ್ಮ ಮಂಗಲ ಕಾರ್ಯಲಯದಲ್ಲಿ ಚಿಂತನ ಸಭೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಪ್ರತಿ ಕೆಜಿಗೆ ಕನಿಷ್ಠ 150 ರಿಂದ 250 ರೂಪಾಯಿಗಳವರೆಗೆ ಬೆಂಬಲ ಬೆಲೆ ನೀಡಿ ನೇರವಾಗಿ ಖರೀದಿಸಬೇಕು. ನಾಡಿನ ರೈತರು ಪ್ರತಿ ವರ್ಷ ಒಂದಿಲ್ಲ ಒಂದು ರೀತಿಯ ಸಂಕಷ್ಟ ಎದುರಿಸುತ್ತಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಟೊಮೆಟೊ ಆಯ್ತು ಈಗ ದಾಳಿಂಬೆ ತೋಟಕ್ಕೆ ಕಳ್ಳರ ಕಾಟ

ದ್ರಾಕ್ಷಿ ಬೆಳೆದ ರೈತರ ಪರಿಸ್ಥಿತಿ ಹೇಳ ತೀರದಂತಾಗಿದೆ. ಒಣ ದ್ರಾಕ್ಷಿ ಮಾನವಕುಲಕ್ಕೆ ಅತ್ಯಂತ ಸಹಕಾರಿಯಾಗಿದೆ. ಇದು ಮಕ್ಕಳ ಆರೋಗ್ಯಕ್ಕೆ ಹಾಗೂ ಜನಸಾಮಾನ್ಯರಿಗೆ 20ಕ್ಕೂ ಹೆಚ್ಚು ರೋಗಗಳಿಗೆ ಔಷಧಿಯ ಗುಣ ಹೊಂದಿದೆ. ಪೋಷಕಾಂಶಗಳಾದ ವಿಟಮಿನ್ ಬಿ 6, ವಿಟಮಿನ್ ಸಿ, ಗ್ಲೂಕೋಸ್, ಕ್ಯಾಲ್ಸಿಯಮ್, ಮೈಗ್ನಿಸಿಯಮ್, ಪೋಟ್ಯಾಸಿಯಂ, ಐರನ್ ಸೇರಿದಂತೆ ಹಲವಾರು ವಿಟಮಿನ್‌ಗಳು ಇವೆ.

ಒಣದ್ರಾಕ್ಷಿ ಸೇವಿಸುವುದರಿಂದ ಮಕ್ಕಳಲ್ಲಿ ಜ್ಞಾಪಕಶಕ್ತಿ ವೃದ್ಧಿಯಾಗುತ್ತದೆ. ಪ್ರತಿ ನಿತ್ಯ ಅಂಗನವಾಡಿ, ಸರ್ಕಾರಿ, ಮೊರಾರ್ಜಿ, ಇನ್ನಿತರ ಶಾಲಾ ಮಕ್ಕಳಿಗೆ ಹಾಗೂ ಸೈನಿಕರಿಗೆ ಸರಕಾರಿ ಆಸ್ಪತ್ರೆ ರೋಗಿಗಳಿಗೆ ಕನಿಷ್ಠ 50 ಗ್ರಾಂ ಒಣದ್ರಾಕ್ಷಿ ವಿತರಿಸಬೇಕು. ಹೀಗಾಗಿ ದ್ರಾಕ್ಷಿ ಬೆಳೆಗೆ ಸೂಕ್ತ ಬೆಂಬಲ ಬೆಲೆ ರಾಜ್ಯ ಸರ್ಕಾರ ನೀಡಿ ಖರೀದಿ ಮಾಡಬೇಕು ಎಂದು ಚಿಂತನ ಸಭೆಯಲ್ಲಿ ಚರ್ಚಿಸಿ ‌ಬಳಿಕ ನೇರವಾಗಿ ಡಿಸಿ ಕಚೇರಿಗೆ ಆಗಮಿಸುವ ಮೂಲಕ ಮನವಿಯನ್ನು ಸಲ್ಲಿಸಿದರು

ಇದನ್ನೂ ಓದಿ: ಲಾಲ್​ಬಾಗ್ ಫ್ಲವರ್ ಶೋಗೆ ಮೊದಲ ದಿನ ಅದ್ಭುತ ರೆಸ್ಪಾನ್ಸ್​; 27 ಸಾವಿರ ಜನರಿಂದ ವೀಕ್ಷಣೆ; ಇಲ್ಲಿದೆ ಫೋಟೋಸ್​

ಕರ್ನಾಟಕ ರಾಜ್ಯದಲ್ಲಿ ದ್ರಾಕ್ಷಿ ಬೆಳೆಯನ್ನು ಅಂದಾಜು 90 ಸಾವಿರದಿಂರ 95 ಸಾವಿರ ಎಕರೆಯಲ್ಲಿ ಬೆಳೆಯುತ್ತಿದ್ದು, 7 ರಿಂದ 8.5 ಲಕ್ಷ ಮೆಟ್ರಿಕ್ ಟನ್ ದ್ರಾಕ್ಷಿ ಉತ್ಪಾದನೆಯಾಗುತ್ತಿದೆ. ದೇಶದಲ್ಲಿಯೇ ಮಹಾರಾಷ್ಟ್ರದ ನಂತರದಲ್ಲಿ ಕರ್ನಾಟಕ ರಾಜ್ಯವು 2ನೇ ಸ್ಥಾನದಲ್ಲಿದೆ, ಪ್ರತಿ ವರ್ಷ ದ್ರಾಕ್ಷಿ ಬೆಳೆಗಾರರು ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆಗೆ ತುತ್ತಾಗಿ ಸಂಕಷ್ಟ ಸಿಲುಕುತ್ತಿದ್ದಾರೆ. ಆದರೆ ಸರ್ಕಾರ ದ್ರಾಕ್ಷಿ ಬೆಳೆಗಾರರ ನೆರವಿಗೆ ಬಂದಿಲ್ಲ.

ಈಗ ಒಣ ದ್ರಾಕ್ಷಿಯ ಬೆಲೆ ಸಂಪೂರ್ಣವಾಗಿ ಕುಸಿತಗೊಂಡಿದ್ದು 70 ರಿಂದ 100 ಕೆಜಿಗೆ ಮಾರಾಟವಾಗುತ್ತಿದೆ. ಹೀಗಾಗಿ ರೈತರು ಸಂಕಷ್ಟದಲ್ಲಿ ಸೂಕ್ತ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಮಾಡಿದರು. ಸಾಂಕೇತಿಕ ಸಭೆ ನಡೆಸಿ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಮುಂಬರುವ ದಿನಗಳಲ್ಲಿ ತಮ್ಮ ಬೇಡಿಕೆ ಇಡೇರಿಸದಿದ್ದರೆ ಉಗ್ರ ಹೋರಾಟ ಮಾಡುವ ಎಚ್ಚರಿಕೆಯನ್ನು ದ್ರಾಕ್ಷೆ ಬೆಳೆಗಾರರು ಹಾಗೂ ಸ್ವಾಮಿಜಿಗಳು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್