ವಿಜಯಪುರ: ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು

ವಿಜಯಪುರದಲ್ಲಿ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ವೇಳೆ ತಲೆ ಮೇಲೆ ಕ್ಯಾಂಟರ್ ಹರಿದ ಪರಿಣಾಮ ತಲೆಗಳು ಛಿದ್ರವಾಗಿವೆ. ಸ್ಥಳಕ್ಕೆ ವಿಜಯಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸವಾರರ ಹೆಸರು, ವಿಳಾಸ ಪತ್ತೆ ಮಾಡುತ್ತಿದ್ದಾರೆ.

ವಿಜಯಪುರ: ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಸಾವು
ಅಪಘಾತ
Edited By: ಆಯೇಷಾ ಬಾನು

Updated on: Aug 24, 2023 | 7:25 AM

ವಿಜಯಪುರ, ಆ.24: ವಿಜಯಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭಿವಿಸಿದೆ. ನಗರದ ಹೊರವಲಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ಕ್ಯಾಂಟರ್ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ(Accident). ತಲೆ ಮೇಲೆ ಕ್ಯಾಂಟರ್ ಹರಿದ ಪರಿಣಾಮ ತಲೆಗಳು ಛಿದ್ರವಾಗಿವೆ. ಇನ್ನೂ ಮೃತ ಸವಾರರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಹಾಗಾಗಿ ವಿಜಯಪುರ ಸಂಚಾರಿ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಸವಾರರ ಹೆಸರು, ವಿಳಾಸ ಪತ್ತೆಗೆ ಮುಂದಾಗಿದ್ದಾರೆ.

ಬೆಂಗಳೂರಿನಲ್ಲಿ ಅಪಘಾತ ತಪ್ಪಿಸಲು ಹೊಸ ಮಾರ್ಗ

ಬೆಂಗಳೂರಿನಲ್ಲಿ ದಿನನಿತ್ಯವೂ ಆಕ್ಸಿಡೆಂಟ್ ಕಾಮನ್ ಆಗಿದೆ. ಒಂದಲ್ಲಾ ಒಂದು ಏರಿಯಾದಲ್ಲಿ ಅಪಘಾತಗಳು ಸಂಭವಿಸುತ್ತಲೇ ಇದ್ದು ಸವಾರರು ಗಾಯಾಳುಗಳಾಗಿ, ಮರಣವನಪ್ಪುತ್ತಲೇ ಇರುತ್ತಾರೆ. ಆದರೆ ಪದೇ ಪದೇ ಆಕ್ಸಿಡೆಂಟ್ ಆಗುವ ಬ್ಲಾಕ್ ಸ್ಪಾಟ್ ಗಳನ್ನು ಪಟ್ಟಿಮಾಡಿ, ಅಪಘಾತಕ್ಕೆ ಪರಿಹಾರ ಹುಡುಕಿ ಅಪಘಾತ ನಿಯಂತ್ರಿಸಲು ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಪೊಲೀಸ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ ಸೃಷ್ಟಿಸಿದ್ದ ವ್ಯಕ್ತಿ ಕೊನೆಗೂ ಪೊಲೀಸ್ ಬಲೆಗೆ

ಸಂಚಾರ ದಟ್ಟಣೆ ಹಾಗು ವಯಲೇಷನ್‌ ತಪ್ಪಿಸಲು ಅಫೇನ್ಸ್‌ ಅನಾಲೈಝ್ಡ್‌ ಕ್ಯಾಮರಾ ಬಳಕೆ, ಬದಲಿ ಸಂಚಾರ ವ್ಯವಸ್ಥೆ, ಸಂಚಾರಕ್ಕೆ ಧಕ್ಕೆಯಾಗದ ರೀತಿಯಲ್ಲಿ ಸ್ಪಾಟ್‌ ಫೈನ್‌ ಕ್ಯಾನ್ಸಲ್‌ ಮಾಡಿ ಕಾಂಟ್ಯಾಕ್ಟ್ಟ ಲೆಸ್ ಕೇಸ್ ಗಳ ದಾಖಲು ಮಾಡುವುದು ಸೇರಿದಂತೆ ಹಲವು ಕ್ರಮಗಳನ್ನ ಸಂಚಾರಿ ಪೊಲೀಸರು ಕೈಗೊಂಡಿದ್ದಾರೆ. ಈಗ ಮತ್ತೊಂದು ಹೊಸ ವಿಧಾನ ಪೊಲೀಸರು ಕಂಡುಕೊಂಡಿದ್ದಾರೆ. ಟ್ರಾಫಿಕ್‌ ನ ಸ್ಟ್ಯಾಟಿಸ್ಟಿಕ್‌ನ್ನು ತೆಗೆದುಕೊಂಡು ಪರಿಶೀಲನೆ ನಡೆಸಿ ಅದಕ್ಕೊಂದು ಪರಿಹಾರವನ್ನೂ ಕಂಡುಕೊಂಡಿದ್ದಾರೆ. ಅದಕ್ಕೆ ಇಟ್ಟ ಹೆಸರು ಬ್ಲಾಕ್‌ ಸ್ಪಾಟ್‌.

ಅತಿಯಾದ ವೇಗ , ರಸ್ತೆಗುಂಡಿಗಳೂ ಕೂಡ ಅಪಘಾತಕ್ಕೆ ಕಾರಣವಾಗಿದೆ. ಹಾಗು ಅವೈಜ್ಜಾನಿಕವಾಗಿ ಅಳವಡಿಸಿರುವ ರೋಡ್‌ ಹಂಪ್ಸ್‌ ಕೂಡ ಆಕ್ಸಿಡೆಂಟ್‌ ಕಾರಣವಾಗಿದೆ. ಈ ಹಿನ್ನಲೆ ಸಂಚಾರಿ ಪೊಲೀಸರಲ್ಲದೆ ಮತ್ತೆರಡು ಇಲಾಖೆಯ ಅಧಿಕಾರಿಗಳು ಕೂಡ ಇನ್ಸ್ಪೆಕ್ಷನ್‌ ಮಾಡಲಿದ್ದಾರೆ. ಯೆಸ್‌, ಪಿ ಡಬ್ಲ್ಯೂ ಡಿ ಹಾಗು ಬಿಬಿಎಂಪಿ ಅಧಿಕಾರಿಗಳು ಕೂಡ ಸಂಚಾರಿ ಪೊಲೀಸ್‌ ಅಧಿಕಾರಿಗಳ ಜೊತೆಗಿದ್ದು ಕಾರ್ಯ ನಿರ್ವಹಿಸಲಿದ್ದಾರೆ. ಈಗಾಗಲೆ ಎಲ್ಲೆಲ್ಲಿ ಬ್ಲಾಕ್‌ ಸ್ಪಾಟ್‌ಗಳೆಂದು ಗುರುತಿಸಲಾಗಿದ್ಯೋ ಅಲ್ಲೆಲ್ಲ ಮೂರು ತಿಂಗಳಿಗೊಮ್ಮೆ ಮತ್ತೆ ಸರ್ವೇ ನಡೆಸಲಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:14 am, Thu, 24 August 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us