AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯಪುರ: ಪತಿ ಜೊತೆ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆ ಏಕಾಏಕಿ ಕೆಳಗೆ ಬಿದ್ದು ಸಾವು

Vijayapura News: ತಿಕೋಟಾ ತಾಲೂಕಿನ ಬಾಬಾನಗರ- ಕಳ್ಳಕವಟಗಿ ರಸ್ತೆಯಲ್ಲಿ ತೆರಳುವಾಗ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ವಿಜಯಪುರ: ಪತಿ ಜೊತೆ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆ ಏಕಾಏಕಿ ಕೆಳಗೆ ಬಿದ್ದು ಸಾವು
ವಿಜಯಲಕ್ಷ್ಮಿ ಚಂದ್ರಕಾಂತ ಶಿರದವಾಡ
ಅಶೋಕ ಯಡಳ್ಳಿ, ವಿಜಯಪುರ
| Edited By: ಆಯೇಷಾ ಬಾನು|

Updated on:Aug 09, 2023 | 11:20 AM

Share

ವಿಜಯಪುರ, ಆ.09: ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಅಪಘಾತ(Accident) ಸಂಭವಿಸಿದೆ. ತಿಕೋಟಾ ತಾಲೂಕಿನ ಬಾಬಾನಗರ- ಕಳ್ಳಕವಟಗಿ ರಸ್ತೆಯಲ್ಲಿ ತೆರಳುವಾಗ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ(Death). ವಿಜಯಲಕ್ಷ್ಮಿ ಚಂದ್ರಕಾಂತ ಶಿರದವಾಡ(35) ಮೃತ ಮಹಿಳೆ. ತಿಕೋಟಾದಿಂದ ಪತಿ ಚಂದ್ರಕಾಂತ ಜೊತೆ ಕಳ್ಳಕವಟಗಿ ಗ್ರಾಮಕ್ಕೆ ಬೈಕ್​ನಲ್ಲಿ ಹೊರಟಿದ್ದ ವೇಳೆ ಮಹಿಳೆ ಬೈಕ್​ನಿಂದ ಬಿದ್ದು ಮೃತಪಟ್ಟಿದ್ದಾರೆ.

ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ ಓರ್ವ ಸಾವು

ವಿಜಯಪುರ ನಗರದ ಶಿವಾಜಿ ಸರ್ಕಲ್‌ನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್​ ಸವಾರ ಲಾಲ‌ಸಾಬ್ ಜಾನ್ವೇಕರ್(44) ಎಂಬುವವರು ಮೃತಪಟ್ಟಿದ್ದು ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ; 510 ಗ್ರಾಂ ಗಾಂಜಾ ಜಪ್ತಿ

ವಾಹನ ಪಲ್ಟಿ, 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿದ್ದು 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ. ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ.

ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಕಾಫಿ ತೋಟಕ್ಕೆ ಕರೆದೊಯ್ಯುತ್ತಿದ್ದಾಗ ಪಿಕ್‌ಅಪ್ ವಾಹನ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಪಿಕ್‌ಅಪ್ ವಾಹನದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಗಾಯಾಳುಗಳಿಗೆ ಸಕಲೇಶಪುರ ಹಾಗೂ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:19 am, Wed, 9 August 23

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ