ವಿಜಯಪುರ: ಪತಿ ಜೊತೆ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆ ಏಕಾಏಕಿ ಕೆಳಗೆ ಬಿದ್ದು ಸಾವು

Vijayapura News: ತಿಕೋಟಾ ತಾಲೂಕಿನ ಬಾಬಾನಗರ- ಕಳ್ಳಕವಟಗಿ ರಸ್ತೆಯಲ್ಲಿ ತೆರಳುವಾಗ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ.

ವಿಜಯಪುರ: ಪತಿ ಜೊತೆ ಬೈಕ್ ಹಿಂಬದಿಯಲ್ಲಿ ಕುಳಿತುಕೊಂಡು ಹೋಗುತ್ತಿದ್ದ ಮಹಿಳೆ ಏಕಾಏಕಿ ಕೆಳಗೆ ಬಿದ್ದು ಸಾವು
ವಿಜಯಲಕ್ಷ್ಮಿ ಚಂದ್ರಕಾಂತ ಶಿರದವಾಡ
Edited By: ಆಯೇಷಾ ಬಾನು

Updated on: Aug 09, 2023 | 11:20 AM

ವಿಜಯಪುರ, ಆ.09: ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಭೀಕರ ಅಪಘಾತ(Accident) ಸಂಭವಿಸಿದೆ. ತಿಕೋಟಾ ತಾಲೂಕಿನ ಬಾಬಾನಗರ- ಕಳ್ಳಕವಟಗಿ ರಸ್ತೆಯಲ್ಲಿ ತೆರಳುವಾಗ ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ(Death). ವಿಜಯಲಕ್ಷ್ಮಿ ಚಂದ್ರಕಾಂತ ಶಿರದವಾಡ(35) ಮೃತ ಮಹಿಳೆ. ತಿಕೋಟಾದಿಂದ ಪತಿ ಚಂದ್ರಕಾಂತ ಜೊತೆ ಕಳ್ಳಕವಟಗಿ ಗ್ರಾಮಕ್ಕೆ ಬೈಕ್​ನಲ್ಲಿ ಹೊರಟಿದ್ದ ವೇಳೆ ಮಹಿಳೆ ಬೈಕ್​ನಿಂದ ಬಿದ್ದು ಮೃತಪಟ್ಟಿದ್ದಾರೆ.

ಎರಡು ಬೈಕ್‌ಗಳ ಮಧ್ಯೆ ಡಿಕ್ಕಿ ಓರ್ವ ಸಾವು

ವಿಜಯಪುರ ನಗರದ ಶಿವಾಜಿ ಸರ್ಕಲ್‌ನಲ್ಲಿ ಎರಡು ಬೈಕ್‌ಗಳ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಬೈಕ್​ ಸವಾರ ಲಾಲ‌ಸಾಬ್ ಜಾನ್ವೇಕರ್(44) ಎಂಬುವವರು ಮೃತಪಟ್ಟಿದ್ದು ಮತ್ತೋರ್ವ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಗಾಯಾಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ವಿಜಯಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಮೂವರ ಬಂಧನ; 510 ಗ್ರಾಂ ಗಾಂಜಾ ಜಪ್ತಿ

ವಾಹನ ಪಲ್ಟಿ, 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ

ಹಾಸನ: ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬಸಾಲೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿದ್ದು 15ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯಗಳಾಗಿವೆ. ಐವರು ಮಹಿಳಾ ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ.

ಸಕಲೇಶಪುರ ಪಟ್ಟಣದ ಸಮೀಪವಿರುವ ಕುಡಗರಗಳ್ಳಿ, ಆಚಂಗಿ, ಗ್ರಾಮದಿಂದ ಮಹಿಳಾ ಕಾರ್ಮಿಕರನ್ನು ಕಾಫಿ ತೋಟಕ್ಕೆ ಕರೆದೊಯ್ಯುತ್ತಿದ್ದಾಗ ಪಿಕ್‌ಅಪ್ ವಾಹನ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಪಿಕ್‌ಅಪ್ ವಾಹನದಲ್ಲಿ ಇಪ್ಪತ್ತಕ್ಕೂ ಹೆಚ್ಚು ಕಾರ್ಮಿಕರು ಪ್ರಯಾಣಿಸುತ್ತಿದ್ದರು. ಗಾಯಾಳುಗಳಿಗೆ ಸಕಲೇಶಪುರ ಹಾಗೂ ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:19 am, Wed, 9 August 23

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us