ವಿಜಯಪುರ ವಿಮಾನ ನಿಲ್ದಾಣಕ್ಕೆ ಮತ್ತೆ ತಡೆ: ಉದ್ಘಾಟನೆಗೆ ಹಸಿರು ಪೀಠದ ವಿಘ್ನ

ವಿಜಯಪುರದಲ್ಲಿ ನಿರ್ಮಾಣಗೊಂಡಿರುವ ವಿಮಾನ ನಿಲ್ದಾಣದ ಉದ್ಘಾಟನೆಗೆ ಸುಪ್ರೀಂ ಕೋರ್ಟ್‌ನ ಹಸಿರು ಪೀಠ ತಡೆ ನೀಡಿದೆ. ಪರಿಸರ ಅನುಮತಿ ಪಡೆಯದೇ ಕಾಮಗಾರಿ ಆರಂಭಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ತಡೆ ಉಂಟಾಗಿದೆ. 2008ರಲ್ಲಿ ಶಿಲಾನ್ಯಾಸಗೊಂಡ ಈ ಯೋಜನೆ 2021ರಲ್ಲಿ ಕಾಮಗಾರಿ ಆರಂಭಿಸಿತ್ತು. ಸದ್ಯ ಕಾಮಗಾರಿ ಪೂರ್ಣಗೊಂಡಿದ್ದರೂ, ಹಸಿರು ಪೀಠದ ಅನುಮತಿಯಿಲ್ಲದೆ ಉದ್ಘಾಟನೆ ಸಾಧ್ಯವಾಗುತ್ತಿಲ್ಲ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಮತ್ತೆ ತಡೆ: ಉದ್ಘಾಟನೆಗೆ ಹಸಿರು ಪೀಠದ ವಿಘ್ನ
ವಿಜಯಪುರ ವಿಮಾನ ನಿಲ್ದಾಣ
Edited By:

Updated on: Jun 04, 2025 | 7:51 AM

ವಿಜಯಪುರ, ಜೂನ್​ 04: ಲೋಹದ ಹಕ್ಕಿ ವಿಮಾನದಲ್ಲಿ ಹಾರಾಟಬೇಕೆಂಬ ವಿಜಯಪುರ ಜನರ ಕನಸಿಗೆ ಎರಡು ದಶಕಗಳು ಆಗುತ್ತಾ ಬಂದಿದೆ. ಕಳೆದ 17 ವರ್ಷಗಳ ಹಿಂದೆ ಜಿಲ್ಲೆಯಲ್ಲಿ ವಿಮಾನ ನಿಲ್ದಾಣಕ್ಕೆ ಶಿಲಾನ್ಯಾಸ ಮಾಡಲಾಗಿತ್ತು. 2021 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ವಿಮಾನ ನಿಲ್ದಾಣ (Vijayapura airport) ಕಾಮಗಾರಿ ಆರಂಭವಾಗಿತ್ತು. ಇದೀಗ ಕಾಮಗಾರಿ ಮುಗಿದಿದ್ದು, ಉದ್ಘಾಟನೆಗೆ ಭಾಗ್ಯ ಮಾತ್ರ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್​ನ (Supreme Court) ಹಸಿರು ಪೀಠ ಇದಕ್ಕೆ ಕೊಕ್ಕೆ ಹಾಕಿದೆ. ಹಿಂದಿನ ಬಿಜೆಪಿ ಸರ್ಕಾರ ಮಾಡಿದ ತಪ್ಪು ಇದಕ್ಕೆ ಕಾರಣವೆಂದು ಆಡಳಿತ ಪಕ್ಷ ಆರೋಪ ಮಾಡಿದೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಮತ್ತೆ ತಡೆಯಾಗಿದೆ. ವಿಜಯಪುರ ವಿಮಾನ ನಿಲ್ದಾಣ ಸೇರಿದಂತೆ ದೇಶದ ಇತರೆ ವಿಮಾನ ನಿಲ್ಧಾಣಗಳು ಆಸ್ಪತ್ರೆಗಳು ಕೈಗಾರಿಕೆಗಳ ಕಟ್ಟಡಗಳು ಸೇರಿದಂತೆ 245 ಕ್ಕೂ ಅಧಿಕ ಪ್ರಕರಣಗಲ್ಲಿ ಹಸಿರು ಪೀಠದಿಂದ ಪರವಾನಿಗೆ ಪಡೆಯದೇ ಕಟ್ಟಡ ಕಾಮಗಾರಿ ಮಾಡಿದ್ದನ್ನು ಪ್ರಶ್ನಿಸಿ ಎನ್​ಜಿಓ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಸುಪ್ರೀಂ ಕೋರ್ಟಿನ ಹಸಿರು ಪೀಠ ವಿಚಾರಣೆ ನಡೆಸಿ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಕಾನೂನು ಉಲ್ಲಂಘನೆ ಮಾಡಿ ನಿರ್ಮಾಣ ಮಾಡಲಾಗಿದೆ. ಕಾನೂನು ಪ್ರಕಾರ ವಿಮಾನ ನಿಲ್ದಾಣ ಕಾಮಗಾರಿ ಆರಂಭಿಸುವುದಕ್ಕೆ ಮುನ್ನ ಹಸಿರು ಪೀಠದಿಂದ ಎನ್ವಿರಾನ್ಮೆಂಟ್ ಕ್ಲಿಯರರ್ಸ್ ಪಡೆದಿಲ್ಲ ಎಂದು ತಗಾದೆ ತೆಗೆದಿತ್ತು. ಮುಂದಿನ ಕಾಮಗಾರಿ ಸೇರಿದಂತೆ ಯಾವುದೇ ಕೆಲಸ ಕಾಮಗಾರಿ ಮಾಡಬಾರದು ಹಾಗೂ ಉದ್ಘಾಟನೆಯನ್ನೂ ಮಾಡಬಾರದು ಎಂದು ಆದೇಶ ಮಾಡಿದೆ. ಇದು ವಿಜಯಪುರ ವಿಮಾನ ನಿಲ್ದಾಣ ಉದ್ಘಾಟನೆಗೆ ಬೇಲಿ ಹಾಕಿದಂತಾಗಿದೆ.

ಇದನ್ನೂ ಓದಿ: ಧಾರವಾಡದಲ್ಲಿ ಹೈಟೆಕ್​​ ಕೈಗಾರಿಕಾ ಘಟಕ ಆರಂಭ: 3 ಸಾವಿರ ಜನರಿಗೆ ಉದ್ಯೋಗವಕಾಶ

ಇದನ್ನೂ ಓದಿ
ಧಾರವಾಡದಲ್ಲಿ ಹೈಟೆಕ್​​ ಕೈಗಾರಿಕಾ ಘಟಕ ಆರಂಭ: 3 ಸಾವಿರ ಜನರಿಗೆ ಉದ್ಯೋಗವಕಾಶ
ವಿಜಯಪುರದಲ್ಲಿ ಹೆದ್ದಾರಿಯಲ್ಲಿ ಈರುಳ್ಳಿ ಸುರಿದು ರೈತರ ಪ್ರತಿಭಟನೆ
ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ!
ಬೆಂಗಳೂರು-ವಿಜಯಪುರ ಪ್ರಯಾಣದ ಅವಧಿ ಕಡಿತ: ಎಂಬಿ ಪಾಟೀಲ್ ಮಹತ್ವದ ಚರ್ಚೆ

2008 ರಲ್ಲಿ ವಿಜಯಪುರ ತಾಲೂಕಿನ ಮದಬಾವಿ ಬುರಣಾಪುರ ಬಳಿ 727.01 ಎಕರೆ ಜಮೀನಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಂದು ಸಿಎಂ ಆಗಿದ್ದ ಯಡಿಯೂರಪ್ಪ ಶಿಲಾನ್ಯಾಸ ಮಾಡಿದ್ದರು. ನಂತರ ಅವರೇ 2021 ರಲ್ಲಿ ಸಿಎಂ ಆಗಿದ್ದಾಗ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ್ದರು. ಈ ವೇಳೆ ಹಸಿರು ಪೀಠದಿಂದ ಯಾವುದೇ ಪ್ರಮಾಣ ಪತ್ರ ಪಡೆಯದೇ ಕಾಮಗಾರಿ ಆರಂಭಿಸಿದ್ದರು. ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮುಂದಿನ ಕಾಮಗಾರಿಗಳನ್ನು ಮಾಡಿದೆ. ಸದ್ಯ ಗ್ರೀನ್ ಬೆಂಚ್​ನಿಂದ ಎನ್ವಿರಾನ್ಮೆಂಟ್ ಕ್ಲಿಯರರ್ಸ್ ಪಡೆಯದ ಕಾರಣ ಸುಪ್ರೀಂ ನಲ್ಲಿ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಸಮನ್ವಯತೆಯಿಂದ ಗ್ರೀನ್ ಬೆಂಚ್​ನಲ್ಲಿನ ವ್ಯಾಜ್ಯವನ್ನು ಬಗೆ ಹರಿಸಿಕೊಂಡು ಬೇಗನೇ ಏರ್ ಪೋರ್ಟ್ ಉದ್ಘಾಟನೆ ಮಾಡುತ್ತೇವೆಂದು ಕೈಗಾರಿಕಾ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವಿಚಾರ ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ನಡೆದಿದೆ. ತ್ವರಿತವಾಗಿ ವಿಮಾನ ನಿಲ್ದಾಣ ಉದ್ಘಾಟನೆ ಆಗುತ್ತದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿದ್ದಾರೆ. ವಿಮಾನ ನಿಲ್ದಾಣ ಕಾಮಗಾರಿ ವಿಚಾರ ಹಸಿರು ಪೀಠದಲ್ಲಿ ಎನ್​​ಜಿಓವೊಂದು ಸಲ್ಲಿಸಿದ್ದ ದಾವೆಯಿಂದ ವಾದ ಪ್ರತಿವಾದ ನಡೆದಿತ್ತು. ಹಸಿರು ಪೀಠದಲ್ಲಿ ವಿಚಾರಣೆ ಮುಗಿದಿದೆ. ಆದಷ್ಟು ಬೇಗ ಉದ್ಘಾಟನೆ ಆಗುತ್ತದೆ ಎಂದಿದ್ದಾರೆ. ಬಿಜೆಪಿ ಪಕ್ಷದ ಅಧಿಕಾರದಲ್ಲೇ ಹಸಿರು ಪೀಠದಿಂದ ಎನ್ವಿರಾನ್ಮೆಂಟ್ ಕ್ಲಿಯರರ್ಸ್ ಪಡೆಯದೇ ಕಾಮಗಾರಿ ಆರಂಭಿಸಲಾಗಿತ್ತು. ಕೆಲವರು ಚುನಾವಣೆಯಲ್ಲಿ ಮತಗಳನ್ನು ಪಡೆಯುವ ಆಸೆಯಿಂದ ಗಡಿಬಿಡಿ ಮಾಡಿರುತ್ತಾರೆಂದು ಪರೋಕ್ಷವಾಗಿ ಆಗ ಸಿಎಂ ಆಗಿದ್ದ ಯಡಿಯೂರಪ್ಪ ಹಾಗೂ ಬೆಂಬಲಿಗರ ವಿರುದ್ದ ಯತ್ನಾಳ ಕಿಡಿ ಕಾರಿದರು.

ಇದನ್ನೂ ಓದಿ: ವಿಜಯಪುರ ಕೆನರಾ ಬ್ಯಾಂಕ್​ನಲ್ಲಿದ್ದ 58 ಕೆಜಿ ಚಿನ್ನ ಕಳ್ಳತನ! ಪೊಲೀಸರ ದಿಕ್ಕು ತಪ್ಪಿಸಲು ವಾಮಾಚಾರ

ಕಳೆದ 2021 ರಿಂದಲೇ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಆರಂಭವಾಗಿದೆ. ಸದ್ಯ ರನ್‍ವೇ, ಎಸಿಟಿ, ಟ್ಯಾಕ್ಸಿ ವೇ, ಎಪ್ರಾನ್, ಪ್ಯಾಸೆಂಜರ್ ಟರ್ಮಿನಲ್ ಬಿಲ್ಡಿಂಗ್, ಇಸೋಲೇಶನ್ ಬೇ, ಒಳ ರಸ್ತೆಗಳು, ಪೆರಿಪೆರಲ್ ರಸ್ತೆಗಳು ಹಾಗೂ ಇತರೆ ಕಾಮಗಾರಿಗಳು ಮುಕ್ತಾಯವಾಗಿವೆ. ಭಾರತೀಯ ವಿಮಾನಯಾನದ ಕೇಂದ್ರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದೂ ಆಗಿದೆ. ಫೈರ್ ಫೈಟರ್ಸ್ ಗಾಗಿ ಆರ್ಡರ್ ಮಾಡಲಾಗಿದೆ. ಹಸಿರು ಪೀಠದಲ್ಲಿ ಹಿನ್ನೆಡೆಯಾಗಿದ್ದು, ಸರಿಯಾದ ಬಳಿಕವಷ್ಟೇ ಉದ್ಘಾಟನೆಗೆ ಹಸಿರು ನಿಶಾನೆ ಸಿಗಲಿದೆ. ಅಲ್ಲಿಯವರೆಗೂ ಕಾಯೋದು ಅನಿವಾರ್ಯವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us