ಬಾಗಪ್ಪ ಹರಿಜನ​ ಕೊಲೆ ಕೇಸ್​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ

ವಿಜಯಪುರದಲ್ಲಿ ಭೀಮಾತೀರದ ನಟೋರಿಯಸ್ ರೌಡಿ ಬಾಗಪ್ಪ ಹರಿಜನ್ ಅವರ ಹತ್ಯೆ ಪ್ರಕರಣವನ್ನು ಪೊಲೀಸರು 24 ಗಂಟೆಯೊಳಗೆ ಬೇಧಿಸಿದ್ದಾರೆ. ಪ್ರಕಾಶ್ ಅಲಿಯಾಸ್ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಈ ಹತ್ಯೆ ವಕೀಲ ರವಿ ಅಗರಖೇಡ್ ಹತ್ಯೆಗೆ ಪ್ರತೀಕಾರ ಎಂಬ ಅನುಮಾನವಿದೆ. ರವಿ ಅವರ ಸಹೋದರ ಪ್ರಕಾಶ್ ಈ ಕೊಲೆಯಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಗಪ್ಪ ಹರಿಜನ​ ಕೊಲೆ ಕೇಸ್​: ಪಿಂಟ್ಯಾ ಸೇರಿ ನಾಲ್ವರು ಆರೋಪಿಗಳ ಬಂಧನ
ಬಾಗಪ್ಪ ಹರಿಜನ, ಕೊಲೆ ಮಾಡಿದ ಆರೋಪಿಗಳು
Edited By: ವಿವೇಕ ಬಿರಾದಾರ

Updated on: Feb 14, 2025 | 10:01 AM

ವಿಜಯಪುರ, ಫೆಬ್ರವರಿ 14: ಭೀಮಾತೀರದ ನಟೋರಿಯಸ್​ ರೌಡಿ ಬಾಗಪ್ಪ ಹರಿಜನ (Bagappa Harijan) ಹತ್ಯೆ ಪ್ರಕರಣ ವಿಜಯಪುರ (Vijayapura) ಪೊಲೀಸರು ಬೇಧಿಸಿದ್ದಾರೆ. ಗಾಂಧಿಚೌಕ ಠಾಣೆ ಪೊಲೀಸರು ಕೇವಲ 24 ಗಂಟೆಯಲ್ಲಿ ಪ್ರಕರಣದ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಪ್ರಕಾಶ ಅಲಿಯಾಸ್​ ಪಿಂಟ್ಯಾ ಅಗರಖೇಡ್ ಸೇರಿ ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಎ1 ಪ್ರಕಾಶ್​ ಅಲಿಯಾಸ್​ ಪಿಂಟ್ಯಾ ಅಗರಖೇಡ್ (25), ಎ2 ರಾಹುಲ್ ತಳಕೇರಿ (20), ಎ3 ಗದಿಗೆಪ್ಪ ಅಲಿಯಾಸ್ ಮನಿಕಂಠ ದನಕೊಪ್ಪ (27), ಎ4 ಸುದೀಪ್ ಕಾಂಬಳೆ (23) ಬಂಧಿತ ಆರೋಪಿಗಳು ಎಂದು ಎಸ್​ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ. ಬಂಧಿತರೆಲ್ಲರು ಗೆಳೆಯರು ಎಂದು ತಿಳಿದುಬಂದಿದೆ. ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ್ ಮಾರಿಹಾಳ, ಎಎಸ್ಪಿ ಹಟ್ಟಿ, ಡಿವೈಎಸ್​ಪಿ ಬಸವರಾಜ್ ಎಲಿಗಾರ್, ಸಿಪಿಐ ಪ್ರದೀಪ್ ತಳಕೇರಿ, ಪಿಎಸ್‌ಐ ರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

ಬಾಗಪ್ಪ ಹರಿಜನ​ ಕೊಲೆ

ಫೆಬ್ರವರಿ 11 ರಾತ್ರಿ 9:45ರ ಸುಮಾರಿಗೆ ವಿಜಯಪುರದ ಮದೀನಾ ನಗರದಲ್ಲಿ ಭೀಮಾತೀರದ ಹಂತಕ ಬಾಗಪ್ಪ ಹರಿಜನ ಬರ್ಬರ ಕೊಲೆ ಮಾಡಲಾಗಿತ್ತು. ಆಟೋದಲ್ಲಿ ಬಂದಿದ್ದ ನಾಲ್ಕೈದು ಮಂದಿ, ಪಕ್ಕಾ ಪ್ಲ್ಯಾನ್ ಮಾಡಿ ಮಾರಕಾಸ್ತ್ರಗಳಿಂದ ಬಾಗಪ್ಪನ ತಲೆ, ಕೈಗೆ ಹಲ್ಲೆಗೈದು, ಎಡಗೈ ಮತ್ತು ಮುಂಗೈ ಕತ್ತರಿಸಿ ಮತ್ತು ಗುಂಡು ಹಾರಿಸಿ ಸಂಬಂಧಿಕರ ಎದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿದ್ದರು. ಊಟ ಮಾಡಿ ವಾಕ್ ಮಾಡುತ್ತಿದ್ದಾಗಗಲೇ ಬಾಗಪ್ಪನನ್ನು ಕೊಲೆಗೈದು ಪರಾರಿಯಾಗಿದ್ದಾರೆ.

ವಕೀಲ ರವಿ ಹತ್ಯೆಗೆ ಪ್ರತೀಕಾರನಾ?

2024 ರ ಆಗಷ್ಟ 12 ರಂದು ರವಿ ಹತ್ಯೆಯಾಗಿತ್ತು. ವಿಜಯಪುರ ನಗರದ ಬಸವ ನಗರ ರಸ್ತೆಯ ಮೇಲೆ ಸ್ಕೂಟಿ ಮೇಲೆ ತೆರಳುತ್ತಿದ್ದ ರವಿ ಮೇಲೆ ಇನೋವಾ ಕಾರ್ ಹರಿಸಲಾಗಿತ್ತು. ಇನೋವಾ ಕಾರಿನ ಅಡಿಯಲ್ಲಿ ರವಿ ಶವ ಸಿಕ್ಕಿಹಾಕಿಕೊಂಡಿತ್ತು. ಶವವನ್ನು 2-3 ಕಿಮೀ ದೂರ ಎಳೆದುಕೊಂಡು ಹೋಗಿದ್ದ ಇನೋವಾ ಕಾರನಲ್ಲಿ ತುಳಸಿರಾಮ್ ಹರಿಜನ್ ಹಾಗೂ ಸಹಚರರಿದ್ದರು. ಈ ಪ್ರಕರಣದಲ್ಲಿ ತುಳಸಿರಾಮನಿಗೆ ಭಾಗಪ್ಪ ಹರಿಜನ್​ ಬೆಂಬಲ ನೀಡಿದ್ದಾನೆ ಆರೋಪ ಕೇಳಿ ಬಂದಿತ್ತು. ಬಾಗಪ್ಪ ಹತ್ಯೆಯಾದ ಬಳಿಕ ರವಿ ಸಹೋದರ ಪ್ರಕಾಶ್ ಅಲಿಯಾಸ್​ ಪಿಂಟ್ಯಾ ಅಣ್ಣನ ಆತ್ಮಕ್ಕೆ ಶಾಂತಿ ಸಿಕ್ಕಿತು ಎಂದು ಸ್ಟೇಟಸ್ ಹಾಕಿದ್ದನು ಎನ್ನಲಾಗಿದೆ.

ಇದನ್ನೂ ಓದಿ: ಭೀಮಾತೀರದ ಹಂತಕನ ಹತ್ಯೆ ಹಿಂದೆ ಇದೆಯಾ ಅಡುಗೆ ಕೆಲಸದವಳ ಕೈವಾಡ? ಬಾಗಪ್ಪ ಹರಿಜನ್​ ಪುತ್ರಿಯರು ಹೇಳಿದ್ದಿಷ್ಟು

ಕೊಲೆಯಾಗಿದ್ದ ವಕೀಲ ರವಿ ಅಗರಖೇಡ್​ನ ತಮ್ಮನೇ ಪ್ರಕಾಶ್​ ಅಲಿಯಾಸ್​ ಪಿಂಟ್ಯಾ. ಬಾಗಪ್ಪ ಹರಿಜನ್​ ಬರ್ಬರ ಹತ್ಯೆ ಕೇಸ್ ತನಿಖೆಯನ್ನು ಪೊಲೀಸರು ಹಲವು ಆಯಾಮಗಳಲ್ಲಿ ನಡೆಸುತ್ತಿದ್ದು, ವಕೀಲ ರವಿ ಅಗರಖೇಡ್ ಹತ್ಯೆಗೆ ಬಾಗಪ್ಪ ಕೊಲೆ ಮೂಲಕ ಪ್ರತಿಕಾರವೇ ಎನ್ನುವ ಆ್ಯಂಗಲ್​ನಲ್ಲೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಕೊಲೆಯಾಗಿರುವ ವಕೀಲ ರವಿ ಸಹೋದರ ಪ್ರಕಾಶ್ ಅಲಿಯಾಸ್ ಪಿಂಟ್ಯಾ ಮತ್ತು ಸಹಚರರಿಂದ ಕೃತ್ಯ ಎಸಗಲಾಗಿದ ಎಂದು ಬಾಗಪ್ಪ ಪುತ್ರಿ ಗಂಗೂಬಾಯಿ ಗಾಂಧಿಚೌಕ ಠಾಣೆಗೆ ದೂರು ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:00 am, Fri, 14 February 25

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us