AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುಸಾಲ, ಬಡ್ಡಿ ವ್ಯವಹಾರ: ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯ 104 ಕಡೆ ಪೊಲೀಸರು ದಾಳಿ

ವಿಜಯಪುರ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಮತ್ತು ಅಕ್ರಮ ಬಡ್ಡಿ ವ್ಯವಹಾರ ನಡೆಸುವವರಿಗೆ ಸಂಬಂಧಿಪಟ್ಟ ಸ್ಥಳಗಳ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯಲ್ಲಿ 104 ಕಡೆಗಳಲ್ಲಿ ದಾಳಿ ಮಾಡಲಾಗಿದ್ದು, ಈ ವೇಳೆ ನಗದು, ಚೆಕ್‌ಗಳು ಮತ್ತು ಇತರ ದಾಖಲೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕಿರುಸಾಲ, ಬಡ್ಡಿ ವ್ಯವಹಾರ: ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯ 104 ಕಡೆ ಪೊಲೀಸರು ದಾಳಿ
ಕಿರುಸಾಲ, ಬಡ್ಡಿ ವ್ಯವಹಾರ: ವಿಜಯಪುರ ಜಿಲ್ಲೆಯ 25 ಠಾಣಾ ವ್ಯಾಪ್ತಿಯ 104 ಕಡೆ ಪೊಲೀಸರು ದಾಳಿ
Follow us
ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Feb 20, 2025 | 8:29 PM

ವಿಜಯಪುರ, ಫೆಬ್ರವರಿ 20: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ (microfinance) ಹಾಗೂ ಫೈನಾನ್ಸ್ ಕಿರುಕುಳ ದುರಂತಗಳಿಗೆ ಕಾರಣವಾಗಿದೆ. ಹಲವಾರು ಜಿಲ್ಲೆಗಳಲ್ಲಿ ಅನೇಕರು ಮೈಕ್ರೋ ಫೈನಾನ್ಸ್ ಹಾಗೂ ಫೈನಾನ್ಸ್ ಕಿರುಕುಳಕ್ಕೆ ಬಲಿಯಾಗಿದ್ದರೆ. ಅದೆಷ್ಟೋ ಜನರು ಮನೆ, ಮಠ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ಇದರ ಮಧ್ಯೆ ಸರ್ಕಾರ ಇದೆಲ್ಲದರ ತಡೆಗೆ ಕಠಿಣ ಕಾನೂನು ಜಾರಿ ಮಾಡಿದೆ. ಕಾನೂನು ಜಾರಿಯಾಗಿದ್ದರೂ ಸಹ ಕಿರುಕುಳ ಕಡಿಮೆಯಾಗಿಲ್ಲ. ಅಲ್ಲಲ್ಲಿ ತೊಂದರೆಗಳು ನಡೆಯುತ್ತಲೇ ಇವೆ. ವಿಜಯಪುರ ಜಿಲ್ಲೆಯೂ ಇದಕ್ಕೆ ಹೊರತಾಗಿಲ್ಲ. ಈ ಹಿನ್ನಲೆ ಕಿರುಸಾಲ, ಬಡ್ಡಿ ವ್ಯವಹಾರ, ಲೇವಾದೇವಿ ನಡೆಸುವವರ ಮೇಲೆ ಪೊಲೀಸರ ದಾಳಿ ಮಾಡಿದ್ದಾರೆ. ಜಿಲ್ಲೆಯ 25 ಠಾಣಾ ವ್ಯಾಪ್ತಿಯಲ್ಲಿ 104 ಕಡೆಗಳಲ್ಲಿ ದಾಳಿ ಮಾಡಲಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ಹಾಗೂ ಅನಧಿಕೃತವಾಗಿ ಹಣಕಾಸಿನ ವ್ಯವಹಾರ, ಬಡ್ಡಿ ವ್ಯವಹಾರ ನಡೆಸುವವರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, ಪರಿಣಾಮ ಜಿಲ್ಲೆಯಾದ್ಯಂತ ದಾಳಿ ನಡೆಸಿರುವ ಪೊಲೀಸರು ಕಿರುಸಾಲ, ಬಡ್ಡಿ ವ್ಯವಹಾರ ನಡೆಸುವವರಿಗೆ ಕಡಿವಾಣ ಹಾಕುತ್ತಿದ್ದಾರೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರ ಜಾರಿ ಮಾಡಿರುವ ಕಾನೂನು ಪ್ರಕಾರ ಮೈಕ್ರೋ ಫೈನಾನ್ಸ್​ಗಳಿಗೆ ಸಂಬಂಧಿಸಿದಂತೆ, ಇತ್ತೀಚೆಗೆ ಜಾರಿಗೆ ಬಂದಿರುವ ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲಗಳ ಬಲವಂತದ ಕ್ರಮಗಳ ಪ್ರತಿಬಂಧಕ ಆದೇಶ, 2025 ರ ಅಧಿಸೂಚನೆಯ ಹಿನ್ನೆಲೆಯಲ್ಲಿ, ವಿಜಯಪುರ ಜಿಲ್ಲೆಯಾದ್ಯಂತ ಎಲ್ಲ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಕಿರುಸಾಲ, ಬಡ್ಡಿ ವ್ಯವಹಾರ, ಲೇವಾದೇವಿ ನಡೆಸುತ್ತಿರುವವರ ಮನೆ, ಕಚೇರಿ, ಸಂಸ್ಥೆಗಳ ಮೇಲೆ ದಾಳಿ ನಡೆಸಿ, ಅವರು ಬಡ್ಡಿ ವ್ಯವಹಾರದಲ್ಲಿ ಬಲವಂತದ ಕ್ರಮ ಅಥವಾ ನಿಯಮ ಬಾಹಿರವಾಗಿ ವ್ಯವಹಾರ ನಡೆಸುತ್ತಿರುವ ಬಗ್ಗೆ ಪರಿಶೀಲಿಸಲು ಜಿಲ್ಲಾಧಿಕಾರಿಗಳ ಪರವಾನಿಗೆ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸರ ಈ ಕ್ರಮ ಅಕ್ರಮಗಳಿಗೆ ಕಡಿವಾಣ ಹಾಕುತ್ತಿದೆ ಎಂದು ಸಾರ್ವಜನಿಕರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಟಿವಿ9 ಬಿಗ್ ಇಂಪ್ಯಾಕ್ಟ್: ಸೀಜ್ ಮಾಡಿದ್ದ ಬಾಣಂತಿ ಮನೆ ಓಪನ್ ಮಾಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ

ಜಿಲ್ಲೆಯ 25 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಒಟ್ಟು 104 ಜನರು ಕಿರುಸಾಲ, ಬಡ್ಡಿ ವ್ಯವಹಾರ, ಲೇವಾದೇವಿ ನಡೆಸುತ್ತಿದ್ದಾರೆಂಬ ಮಾಹಿತಿ ಮೇರೆಗೆ ದಾಳಿ ಕೈಕೊಂಡು ಶೋಧನೆ ಮಾಡಲಾಗಿದೆ. ದಾಳಿಯಲ್ಲಿ 37 ಜನರ ಹತ್ತಿರ ಅನಧಿಕೃತ ಲೇವಾದೇವಿಗೆ ಸಂಬಂಧಿಸಿದ ಹಣ, ಖಾಲಿ ಬಾಂಡ್, ಚೆಕ್, ಕೈಗಡ ಪತ್ರ, ಪಹಣಿ ಪತ್ರಗಳು, ಬ್ಯಾಂಕ್ ಪಾಸ್‌ಬುಕ್‌ಗಳು ಸೇರಿದಂತೆ ಇತರೆ ದಾಖಲಾತಿಗಳು ದೊರೆತಿವೆ.

62. 29 ಲಕ್ಷ ರೂ ನಗದು 55 ಗ್ರಾಂ ಚಿನ್ನಾಭರಣಗಳು ಪತ್ತೆ

489 ಖಾಲಿ ಬಾಂಡ್ ಗಳು, 285 ಖಾಲಿ ಚೆಕ್ ಗಳು 95 ಪಾಸ್ ಬುಕ್ ಗಳು, 26 ಕರಾರು ಪತ್ರಗಳು, 26 ಪಹಣಿ ಪತ್ರಗಳು, 16 ಹಕ್ಕು ಪತ್ರಗಳು, 15 ಇಸಾರ ಪತ್ರಗಳು, 13 ಖರೀದಿ ಪತ್ರಗಳು, 14 ಆಧಾರ ಕಾರ್ಡ್ ಗಳು, 12 ಮೊಬೈಲ್ ಗಳು, 5 ಬಕ್ಷೀಸ್ ಪತ್ರಗಳು, 3 ಕೈಗಡ ಪತ್ರಗಳು, 5 ಒಪ್ಪಿಗೆ ಪತ್ರಗಳು, 2 ಜಮೀನು ಖರೀದಿ ಪತ್ರಗಳು, 2 ಎಟಿಎಂಗಳು, 2 ಡೆಬಿಟ್ ಕಾರ್ಡ್ ಗಳು, 1 ಒತ್ತಿ ಪತ್ರ ಹಾಗೂ 1 ನೋಂದಣಿ ಪತ್ರ ಸೇರಿದಂತೆ 62. 29 ಲಕ್ಷ ರೂ ನಗದು 55 ಗ್ರಾಂ ಚಿನ್ನಾಭರಣಗಳು ಹಾಗೂ 154 ಇತರೆ ವಸ್ತುಗಳು ಲಭ್ಯವಾಗಿವೆ ಎಂದು ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

ದಾಳಿ ವೇಳೆ ವಶಪಡಿಸಿಕೊಂಡ ದಾಖಲಾತಿ ಹಾಗೂ ವಸ್ತುಗಳನ್ನು ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ವರದಿಯನ್ನು ಪೊಲೀಸ್ ಆಧಿಕಾರಿಗಳು ಸಲ್ಲಿಸಲಿದ್ದಾರೆ. ಪೊಲೀಸರು ಬಡ್ಡಿ ವ್ಯವಹಾರ ಅಕ್ರಮ ಹಣಕಾಸು ವ್ಯವಹಾರಗಳಿಗೆ ಬ್ರೇಕ್ ಹಾಕಿ ಜನರಿಗೆ ಸಹಾಯ ಮಾಡುತ್ತಿದ್ದಾರೆ. ತಪ್ಪು ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು. ಕಾನೂನು ಬಾಹೀರವಾಗಿ ನಡೆಯುವ ಈ ವ್ಯವಹಾರಗಳು ಬಂದ್ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮೈಕ್ರೋ ಫೈನಾನ್ಸ್ ಕಂಪನಿ ಮ್ಯಾನೇಜರ್​​ ಎಂದು ಮಹಿಳೆಗೆ ವಂಚನೆ: ಆರೋಪಿ ಅಂದರ್​​

ಸದ್ಯ ವಿಜಯಪುರ ಜಿಲ್ಲಾ ಪೊಲೀಸರು ಜಿಲ್ಲೆಯಲ್ಲಿ ಅಕ್ರಮವಾಗಿ ಕಿರುಸಾಲ, ಬಡ್ಡಿ ವ್ಯವಹಾರ, ಲೇವಾದೇವಿ ನಡೆಸುತ್ತಿರುವವರಿಗೆ ಕಡಿವಾಣ ಹಾಕುತ್ತಿದೆ. ಇದನ್ನು ಈ ದಾಳಿಗಷ್ಟೇ ಸೀಮಿತ ಮಾಡದೇ ಸಂಪೂರ್ಣವಾಗಿ ಅಕ್ರಮ ವ್ಯವಹಾರಗಳು ಬಂದ್ ಆಗುವಂತೆ ಕ್ರಮ ತೆಗೆದುಕೊಳ್ಳಬೇಕಿದೆ. ಮೇಲಿಂದ ಮೇಲೆ ದಾಳಿ ಮಾಡುವ ಮೂಲಕ ಈ ಸಮಸ್ಯೆಗೆ ಬುಡಸಮೇತ ಕಿತ್ತು ಹೋಗುವಂತೆ ಮಾಡಬೇಕಿದೆ. ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು